Home Posts tagged #v4newskarnataka (Page 199)

ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆ

ವಿಟ್ಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಹೊಳೆಯ ಸುರುಂಬಡ್ಕ ಕಿರು ಸೇತುವೆ ಮುಳುಗಡೆಯಾಗಿದೆ. ಕಳೆದ ಭಾರಿಯ ಮಳೆಗೆ ಎರಡು ಬಾರಿ ಕಿಂಡಿ ಅಣೆಕಟ್ಟು ಮುಳುಗಡೆಯಾಗಿತ್ತು. ಇದರಿಂದ ಸುತ್ತಮುತ್ತಲಿನ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆಗಿನ ಶಾಸಕಿ ಶಕುಂತಾಳ ಶೆಟ್ಟಿ ಅವರ ಮೂಲಕ ಒಂದು ಕೋಟಿ ರೂ.

ಸೆಲೂನ್‌ಗೆ ನುಗ್ಗಿ ಮಹಿಳೆಗೆ ಹಲ್ಲೆ : ಸಿಸಿಟಿವಿಯಲ್ಲಿ ದಾಖಲು

ಮಂಗಳೂರಿನ ಕದ್ರಿಯಲ್ಲಿ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ, ಹಲ್ಲೆ ನಡೆಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್, ಬಂಧಿತ ವ್ಯಕ್ತಿ. ಈತ ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಯುವತಿಗೆ ಕಿರುಕುಳ ನೀಡಿ ಹಲ್ಲೆ ನಡೆಸಿದ್ದಾನೆ. ಕದ್ರಿಯ ಯುನಿಸೆಕ್ಸ್ ಸೆಲೂನ್‌ನಲ್ಲಿ ಜುಲೈ 1 ರಂದು ಈ ಘಟನೆ ನಡೆದಿತ್ತು. ಯುವತಿಯ ಮೈಗೆ ಕೈ ಹಾಕಿ ಕಿರುಕುಳ ನೀಡಿದ್ದ ದಾವೂದ್ ಆಕೆಗೆ ಹಲ್ಲೆ

ಪುತ್ತೂರು ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಮುಳುಗಡೆ

ಪುತ್ತೂರು : ಪುತ್ತೂರು ಪರ್ಲಡ್ಕ ಪಾಣಾಜೆ ರಸ್ತೆಯ ಚೆಲ್ಯಡ್ಕ ಸೇತುವೆ ಈ ಮಳೆಗಾಲದ ಅವಧಿಯಲ್ಲಿ ಮೊದಲ ಬಾರಿಗೆ ಜು.15 ರಂದು ಮಧ್ಯಾಹ್ನ ವೇಳೆ ಮುಳುಗಡೆಯಾಗಿದೆ. ಬೆಳಿಗ್ಗೆಯಿಂದಲೇ ವಿಪರೀತ ಮಳೆ ಸುರಿಯುತ್ತಿದ್ದ ಕಾರಣ ಮುಳುಗು ಸೇತುವೆಯೆಂದು ಹೆಸರಾದ ಈ ಸೇತುವೆ ಮುಳುಗಡೆಯಾಗಿದ್ದು ಆ ರಸ್ತೆಯಲ್ಲಿ ಚಲಿಸ ಬೇಕಾದ ವಾಹನಗಳಿಗೆ ಅಡಚಣೆ ಉಂಟಾಗಿ ಸಮಸ್ಯೆಯಾಯಿತು.ಸುತ್ತುವರಿದು ಚಲಿಸ ಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು.

ಬಸ್ರೂರಿನಲ್ಲಿ ಮನೆಯ ಮೇಲೆ ಬಿದ್ದ ಮರ: ಇಬ್ಬರಿಗೆ ಗಾಯ

ಕುಂದಾಪುರ: ಕರಾವಳಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭೀಕರ ಗಾಳಿ ಮಳೆಗೆ ಕುಂದಾಪುರ ತಾಲೂಕಿನಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯ ಆರ್ಭಟ ಜೋರಾಗಿದ್ದು ಬುಧವಾರ ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಬಸ್ರೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗಣಪಯ್ಯ ಗಾಣಿಗ ಎಂಬವರ ಮನೆಯ ಮೇಲೆ ಧೂಪದ ಮರ ಬಿದ್ದು ಮೇಲ್ಛಾವಣಿ ಕುಸಿದಿದೆ. ಪರಿಣಾಮ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೃಹದಾಕಾರದ ಮರ ಬಿದ್ದ ಪರಿಣಾಮ

ಕೋವಿಡ್ ಹಿನ್ನೆಲೆ ತಲಪಾಡಿ ಗಡಿಭಾಗದಲ್ಲಿ ತೀವ್ರಗೊಂಡ ತಪಾಸಣೆ

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಹಿನ್ನಲೆಯಲ್ಲಿ ಕೊಣಾಜೆ ಮತ್ತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಗಡಿಭಾಗದಲ್ಲಿ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಕಾಸರಗೋಡಿನಿಂದ ಮಂಗಳೂರು ಪ್ರವೇಶಿಸುವ ಎಲ್ಲರ ನೆಗೆಟಿವ್ ವರದಿ ಕಡ್ಡಾಯ ಮಾಡುತ್ತಿದ್ದು, ಸ್ಥಳದಲ್ಲಿ ಆರ್‌ಟಿಪಿಸಿಆರ್ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದು ತಲಪಾಡಿ ಗಡಿಭಾಗದಲ್ಲೂ ಕಟ್ಟು ನಿಟ್ಟಿನ ಕ್ರಮ ಕೊಂಡಿದ್ದಾರೆ. ಮಂಗಳೂರು ಕಮಿಷನರೇಟ್ ಒಳಪಡುವ ಕೊಣಾಜೆ, ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ

ಉಳ್ಳಾಲ ಮತ್ತು ಸೋಮೇಶ್ವರ ಸಮುದ್ರದಲ್ಲಿ ಹೆಚ್ಚಾದ ಅಬ್ಬರ: ಅಪಾರ ಹಾನಿ

ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಉಳ್ಳಾಲ ಮತ್ತು ಸೋಮೇಶ್ವರದಲ್ಲಿ ಸಮುದ್ರದ ಅಬ್ಬರ ಹೆಚ್ಚಾಗಿದ್ದು, ಸೋಮೇಶ್ವರ ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಒಳರಸ್ತೆ ಸಮುದ್ರದ ಅಲೆಗಳ ಪಾಲಾದರೆ, ಉಳ್ಳಾಲ ಮತ್ತು ಸುತ್ತಮುತ್ತಲಿ ವ್ಯಾಪ್ತಿಯಲ್ಲಿ ಕಂಪೌಂಡ್ ಕುಸಿತ ಸೇರಿದಂತೆ ಸಣ್ಣಪುಟ್ಟ ಅವಘಡಗಳು ಸಂಭವಿಸಿದೆ. ಸೋಮೇಶ್ವರ ಬೀಚ್ ರಸ್ತೆ ಬಟ್ಟಪ್ಪಾಡಿ ಬಳಿ ಹಾನಿಗೀಡಾಗಿದ್ದು ಸಂಚಾರ ಅಸ್ತವ್ಯಸ್ತವಾಗಿದೆ. ಉಚ್ಚಿಲದಲ್ಲಿ ತಗ್ಗು ಪ್ರದೇಶ ಜಲಾವೃತಗೊಂಡಿದ್ದು

ಗದ್ದೆಗಿಳಿದು ಉಳುಮೆ ಮಾಡಿದ ಮಾಜಿ ಸಚಿವ ಅಭಯಚಂದ್ರ ಜೈನ್..!

ಮೂಡುಬಿದಿರೆ : ವಿವಿಧ ಕೆಲಸ ಕಾರ್ಯಗಳ ಮೂಲಕ ಒಂದಲ್ಲ ಒಂದು ರೀತಿಯಲ್ಲಿ ಗಮನ ಸೆಳೆಯುತ್ತಿರುವ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೃಷಿಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಮತ್ತು ಯುವಕರು ಕೃಷಿಯತ್ತ ಒಲವು ತೋರಿಸಬೇಕೆಂಬ ಉದ್ದೇಶದಿಂದ ಮಂಗಳವಾರದಂದು ಮೂಡುಬಿದಿರೆಯ ಜೈನ್ ಪೇಟೆಯ ಬಳಿ ಇರುವ ಆಸಿಸ್ ಪಿಂಟೋ ಗದ್ದೆಯಲ್ಲಿ ಕೋಣ ಮತ್ತು ಟಿಲ್ಲರ್‌ನಲ್ಲಿ ಉಳುವೆ ಮಾಡುವ ಮೂಲಕ ಯುವಕರಿಗೆ ಮಾದರಿಯಾದರು. ಬ್ಲಾಕ್ ಕಾಂಗ್ರೆಸ್ ಮತ್ತು ಕಿಸಾನ್ ಘಟಕದ ವತಿಯಿಂದ ಈ

ಬನ್ನೂರಿನಲ್ಲಿ ಕುಸಿದು ಬೀಳುವ ಹಂತದಲ್ಲಿರುವ ಮನೆ, ನೆರವಿನ ನಿರೀಕ್ಷೆಯಲ್ಲಿ ಬೀರ್ನಹಿತ್ಲುವಿನ ಬಡ ಮಹಿಳೆ

ಕೊರೊನಾ ಪಾಸಿಟೀವ್ ಪ್ರಕರಣಗಳು ರಾಜ್ಯಲ್ಲಿ ಕೊಂಚ ಇಳಿಮುಖವಾಗುತ್ತಿರುವ ನಡುವೆಯೇ ಶಾಲಾ-ಕಾಲೇಜುಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲೂ ಪ್ರಯತ್ನಗಳು ಆರಂಭಗೊಂಡಿದೆ. ಒಂದು ವೇಳೆ ಶಾಲೆ ಪ್ರಾರಂಭವಾದಲ್ಲಿ ತನ್ನ ಮಗುವಿಗೆ ಹೇಗೆ ಶಿಕ್ಷಣ ನೀಡಲಿ ಎನ್ನುವ ತಳಮಳದಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಬಡ ತಾಯಿಯೊಬ್ಬರಿದ್ದಾರೆ. ಈಕೆಯ ಮನೆ ಪ್ರಾಕೃತಿಕ ವಿಕೋಪಕ್ಕೆ ಸಿಲುಕಿ ವಾಸಕ್ಕೆ ಯೋಗ್ಯವಲ್ಲದ ಸ್ಥಿತಿಗೆ ತಲುಪಿದೆ. ಕೂಲಿ-ನಾಲಿ ಮಾಡಿ ತನ್ನ ಅನಾರೋಗ್ಯ ಪೀಡಿತ ಮಗುವಿನೊಂದಿಗೆ

ಕೇಂದ್ರದಲ್ಲಿರುವುದು ಹೃದಯಹೀನ ಸಂವೇದನಾ ರಹಿತ ಸರಕಾರ: ಸುನಿಲ್ ಕುಮಾರ್ ಬಜಾಲ್

ಮಂಗಳೂರು : ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ದುರ್ಬಲ ಆರ್ಥಿಕ ನೀತಿಯಿಂದಾಗಿ ದೇಶದ ಅರ್ಥ ವ್ಯವಸ್ಥೆ ಅಧಪತನದತ್ತ ಸಾಗುತ್ತಿದೆ. ತಪ್ಪು ಆರ್ಥಿಕ ನೀತಿಯಿಂದಾಗಿ ಅಕ್ರಮಗಳೇ ಬಿಜೆಪಿ ಸರಕಾರದ ನೀತಿಗಳಾಗುತ್ತಿವೆ. ಹಾಗಾಗಿ ಭ್ರಷ್ಟಾಚಾರ ಪ್ರಕರಣ ಹೊರಬರುತ್ತಿಲ್ಲ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ಹೇಳಿದರು.ಅವರು ಇಂದು ಹಳೆ ಬಂದರು ಸಗಟು ಮಾರುಕಟ್ಟೆಯ ಗೋಳಿಕಟ್ಟೆ ವೃತ್ತದ ಬಳಿ ಬಂದರು ಶ್ರಮಿಕರ ಸಂಘದ ನೇತೃತ್ವದಲ್ಲಿ ಪೆಟ್ರೋಲ್,

ಉಜಿರೆಯಲ್ಲಿ ವಾಹನ ತಪಾಸಣೆ ವೇಳೆ ನಿಯಂತ್ರಣ ಕಳೆದುಕೊಂಡ ಸ್ಕೂಟರ್ ಸವಾರ

ಬೆಳ್ತಂಗಡಿ ಸಂಚಾರಿ ಪೊಲೀಸರ ಅವಾಂತರದಿಂದಾಗಿ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ಕಾರಿಗೆ ಢಿಕ್ಕಿಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಂಚಾರ ಠಾಣಾ ವ್ಯಾಪ್ತಿಯ ಉಜಿರೆಯ ಸಿದ್ದವನ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಏಕಾ ಏಕಿ ವಾಹನಗಳನ್ನು ತಪಾಸಣೆ ಮಾಡಲು ನಿಲ್ಲಿಸಿದ್ದರಿಂದ ಸ್ಕೂಟರ್ ಹಠಾತ್ತನೆ ಬ್ರೇಕ್ ಹಾಕಿದಾಗ ಮಳೆಯಿಂದಾಗಿ ನಿಯಂತ್ರಣ ಕಳೆದುಕೊಂಡು ಸ್ಕೂಟರ್ ಸ್ಕಿಡ್ ಆಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ