Home Posts tagged #v4newskarnataka (Page 60)

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ : ಅತಿರುದ್ರ ಮಹಾಯಾಗ ಪತ್ರಿಕಾಗೋಷ್ಠಿ

ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಫೆಬ್ರವರಿ 22, 2023 ರಿಂದ ಮಾರ್ಚ್ 05, 2023 ರವರೆಗೆ ನಡೆಯಲಿರುವ ಅತಿರುದ್ರ ಮಹಾಯಾಗ ನಿಟ್ಟಿನಲ್ಲಿ ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಭಿವೃದ್ಧಿ ಟ್ರಸ್ಟ್ ಮತ್ತು ಅತಿರುದ್ರ ಮಹಾಯಾಗ ಸಮಿತಿಯ ವತಿಯಿಂದ ಫೆಬ್ರವರಿ 21, 2023 ರ ಮಂಗಳವಾರದಂದು ಪತ್ರಿಕಾಗೋಷ್ಠಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ

ಎಂ.ಎಸ್. ರಕ್ಷಾ ರಾಮಯ್ಯಗೆ ಏಐಸಿಸಿ ಸದಸ್ಯತ್ವ

ಬೆಂಗಳೂರು, : ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಏಐಸಿಸಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಏಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ನೇಮಕ ಮಾಡಿದ್ದಾರೆ. ಈ ಕುರಿತು ಏಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಯುವ ಕಾಂಗ್ರೆಸ್ ವಿಭಾಗದಿಂದ ರಕ್ಷಾ ರಾಮಯ್ಯ ಅವರಿಗೆ ಏಐಸಿಸಿಯಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗಿದ್ದು, ಯುವ ಸಮೂಹಕ್ಕೆ ಆದ್ಯತೆ ನೀಡಲಾಗಿದೆ

ತಲಪಾಡಿ : ನೀರು ಪೂರೈಕೆಗೆ ಒತ್ತಾಯಿಸಿ ಕಾಂಗ್ರೆಸ್ ಮನವಿ

ತಲಪಾಡಿ : ನೀರಿಲ್ಲದೇ ಸಂಕಷ್ಟ ಅನುಭವಿಸುತ್ತಿರುವ ತಲಪಾಡಿ ಗ್ರಾಮಕ್ಕೆ ಕೂಡಲೇ ಕುಡಿಯುವ ನೀರು ಪೂರೈಕೆ ಆರಂಭಿಸುವಂತೆ ಒತ್ತಾಯಿಸಿ ತಲಪಾಡಿ ವಲಯ ಕಾಂಗ್ರೆಸ್ ಸಮಿತಿಯ ವತಿಯಿಂದ ಇಂದು ಉಳ್ಳಾಲ ತಹಶೀಲ್ದಾರ್ ಮತ್ತು ತಲಪಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗ್ರಾಮದ ಕೆಲವೆಡೆಗೆ ಬಟ್ಟಪಾಡಿ ಪ್ರದೇಶದಿಂದ ನೀರಿನ ಪೈಪ್ ಲೈನ್ ಇದ್ದರೂ ನೀರು ಸರಬರಾಜು ಆಗುತ್ತಿಲ್ಲ. ಪೈಪ್ ಲೈನ್ ಇಲ್ಲದಿರುವ ಕೆಸಿ ರೋಡ್, ಪಳ್ಳ, ಪೂಮಣ್ಣು, ಕೆಸಿ ನಗರ, ಶಾಂತಿ

ಬಂಟ ಸಮುದಾಯದವರಿಗೆ ದೇವರೇ ಗುರು : ಕೇಮಾರು ಶ್ರೀ ಈಶ ವಿಠಲದಾಸ ಸ್ವಾಮೀಜಿ

ಮೂಡುಬಿದಿರೆ: ಬಂಟ ಸಮುದಾಯವು ಪರೋಪಕಾರ ದಂತಹ ದೊಡ್ಡ ಗುಣವನ್ನು ಹೊಂದಿದೆ. ಗುರುಪೀಠವಿಲ್ಲದೇ ಬಂಟ ಸಮುದಾಯವು ಎಲ್ಲಾ ಕ್ಷೇತ್ರಗಳಲ್ಲೂ ಇಂದು ಪ್ರಗತಿ ಸಾಧಿಸಿದೆ, ಸಮುದಾಯದ ಹಿರಿಯರು ಗುರುಪೀಠಕ್ಕೆ ಹೋರಾಡದೆ ಬಂಟರ ಸಂಘ, ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಿದರೆ ಸಮುದಾಯದ ಅಭಿವೃದ್ಧಿ ಸಾಧ್ಯ. ಈ ಸಮುದಾಯವು ಗುರುಪೀಠಕ್ಕೆ ಹೆಚ್ಚಿನ ಆದ್ಯತೆ ನೀಡದೆ ಹಿರಿಯರು ತೋರಿದ ಹಾದಿಯಲ್ಲೇ ಮುಂದೆ ಸಾಗಬೇಕು,ದೇವರನ್ನೇ ಗುರುವನ್ನಾಗಿ ಕಾಣಬೇಕು ಎಂದು ಕೇಮಾರು

ಬೈಂದೂರು ಲಾವಣ್ಯ (ರಿ) ಇದರ 46ನೇ ವಾರ್ಷಿಕೋತ್ಸವ

ಬೈಂದೂರು ಇಲ್ಲಿನ ಲಾವಣ್ಯ ರಿ ಇದರ 46ನೇ ವಾರ್ಷಿಕೋತ್ಸವ ಅಂಗವಾಗಿ ರಂಗ ಪಂಚಮಿ 2023 ನಾಟಕೋತ್ಸವ ಹಾಗೂ ಯಕ್ಷಗಾನ ಉದ್ಘಾಟನಾ ಸಮಾರಂಭ ಬೈಂದೂರು ಶಾರದಾ ವೇದಿಕೆ ಸೋಮವಾರ ಸಂಜೆ ನಡೆಯಿತು. ಬೈಂದೂರು ಯು.ಬಿ.ಎಸ್ ಶೈಕ್ಷಣಿಕ ಶಿಕ್ಷಣ ಸಮೂಹ ಸಂಸ್ಥೆಯ ಶಿಕ್ಷಣ ಸಂಯೋಜಕ ಸುಬ್ರಹ್ಮಣ್ಯ ಜೋಶಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಂಗಳೂರು ನಂದಗೋಕುಲ ಪ್ರತಿಷ್ಠಾನದ ಅಧ್ಯಕ್ಷ ಅರೆಹೊಳೆ ಸದಾಶಿವ ರಾವ್ ಅವರು ಶುಭಾಶಂಸನೆಗೈದರು ಲಾವಣ್ಯ ರಿ ಬೈಂದೂರು ಅಧ್ಯಕ್ಷ ಬಿ. ನರಸಿಂಹ

ಫೆ. 22-25,ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನ-ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ

ಸುಮಾರು ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಪಣಿಯೂರು ಭಗವಾನ್ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ಜೀರ್ಣೋದ್ಧಾರದ ಅಂಗವಾಗಿ ವೇ| ಮೂ| ಬೆಟ್ಟಿಗೆ ವೆಂಕಟರಾಜ ತಂತ್ರಿಗಳ ನೇತೃತ್ವದಲ್ಲಿ ಫೆ. ೨೨ರಿಂದ ಮೊದಲ್ಗೊಂಡು ಫೆ. ೨೫ರವರೆಗೆ ಶ್ರೀ ಬಬ್ಬುಸ್ವಾಮಿ ಮತ್ತು ಪರಿವಾರ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ಸಿರಿ ಸಿಂಗಾರದ ನೇಮ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದ್ದಾರೆ. ಶ್ರೀಕ್ಷೇತ್ರದಲ್ಲಿ ನಡೆಸಿದ

ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ : ವಿಠಲ ಸುವರ್ಣ ರಂಗ ಮಂದಿರದ ವಿಧ್ಯಾರ್ಥಿಗಳಿಗೆ ಪ್ರಶಸ್ತಿ

ಫೆಬ್ರವರಿ 18 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪದಲ್ಲಿ ನಡೆದ ರಾಜ್ಯಮಟ್ಟದ ಮೊದಲ ಬುಡೋಕನ್ ಕರಾಟೆ ಚಾಂಪಿಯನ್‌ಶಿಪ್ ನಲ್ಲಿ ವಿಟ್ಲದ ಕಳೆದ 30 ವರ್ಷಗಳಿಂದ ವಿಠಲ ಸುವರ್ಣ ರಂಗ ಮಂದಿರದಲ್ಲಿ ತರಬೇತಿ ನೀಡುತ್ತಿರುವ ಕರಾಟೆ ಶಿಕ್ಷಕರಾದ ಸೆನ್ಸಾಯಿ ಮಾಧವ ಅಳಿಕೆ ಇವರ ವಿಧ್ಯಾರ್ಥಿಗಳು ಭಾಗವಹಿಸಿದ್ದಾರೆ.ವಿಜೇತ ಮಕ್ಕಳ ಹೆಸರು ಈ ಕೆಳಗಿನಂತಿವೆ, ವಿಟ್ಲ ಜೇಸೀಸ್ ಸ್ಕೂಲ್ 1.ಧ್ರುವ ಕಟಾ:1st ಕುಮಿಟೆ:1st 2.ಸಾನ್ವಿ ಕಟಾ:3rd ಕುಮಿಟೆ:3rd 3.ಮನಸ್ವಿ ಬಿ ಕುಮಿಟೆ:3rd

ಕಡಬ : ಕಾಡಾನೆ ದಾಳಿ, ಮೃತರ ಮನೆಗೆ ಭೇಟಿ ನೀಡಿದ ಸಚಿವ ಎಸ್. ಅಂಗಾರ

ಆನೆ ದಾಳಿಯಂದ ಮತಪಟ್ಟ ರೆಂಜಲಾಡಿ ಗ್ರಾಮದ ನೈಲ ರಂಜಿತಾ ಹಾಗೂ ರಮೇಶ್ ರೈ ಅವರ ಮನೆಗೆ ಬಂದರು ಮೀನುಗರಿಕೆ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವರ ಆಗಮನವಾಗುತ್ತಿದ್ದಂತೆ ಮನೆಯವರು ತೀವ ಅಸಮಾಧಾನ ವ್ಯಕ್ತಪಡಿಸಿದರು. ಇಲ್ಲಿ ಕಳೆದ ಕೆಲವು ತಿಂಗಳಿಂದ ಆನೆಗಳ ಹಾವಳಿಯ ಬಗ್ಗೆ ಎಲ್ಲರಿಗೂ ಗೊತ್ತಿತ್ತು. ಆದರೆ ಯಾರೂ ಸರಿಯಾದ ಕ್ರಮ ಕೈಗೊಂಡಿಲ್ಲ. ನೀವು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳುತ್ತಿದ್ದರೆ ನನ್ನ ಮಗಳ ಪ್ರಾಣ

ಸಾಲೆತ್ತೂರು: ಬೆಂಕಿಗಾಹುತಿಯಾದ ಲಾರಿ – ಅಪಾರ ನಷ್ಟ

ವಿಟ್ಲ: ಸಾಲೆತ್ತೂರು ಸಮೀಪದ ಮೆದು ಎಂಬಲ್ಲಿನ ಪೆಟ್ರೋಲ್ ಬಂಕ್ ಎದುರುಗಡೆ ನಿಲ್ಲಿಸಿದ್ದ ಬಾರೀ ಗಾತ್ರದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು ಲಾರಿಯ ಮುಂದಿನ ಭಾಗ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅಪಾರ ನಷ್ಟ ಸಂಭವಿಸಿದೆ. ಪೆಟ್ರೋಲ್ ಬಂಕಿನ ಎದುರು ಈ ಘಟನೆ ನಡೆದಿದ್ದು, ಈ ಸಂದರ್ಬದಲ್ಲಿ ಸ್ಥಳೀಯರು ಹರಸಾಹಸಪಟ್ಟು ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತವೊಂದನ್ನು ತಪ್ಪಿಸಿದ್ದಾರೆ. ಬಂಟ್ವಾಳ ಅಗ್ನಿಶಾಮಕದಳದ ಸಿಬ್ಬಂದಿಗಳು ಸ್ತಳಕ್ಕಾಗಮಿಸಿದ್ದಾರೆ.

ಕಡಬದಲ್ಲಿ `ಆಪರೇಷನ್ ಎಲಿಫೆಂಟ್’ ಕಾರ್ಯಾಚರಣೆ

ಊರಿಗೆ ಬಂದು ಉಪಟಳ ನೀಡಿ, ಇಬ್ಬರನ್ನೂ ಬಲಿ ತೆಗೆದುಕೊಂಡ ಕಾಡಾನೆಯನ್ನು ಸೆರೆ ಹಿಡಿಯಲು ಕಡಬ ಭಾಗದಲ್ಲಿ `ಆಫರೇಷನ್ ಎಲಿಫೆಂಟ್’ ಕಾರ್ಯಾಚರಣೆ ಆರಂಭಗೊಂಡಿದೆ. ಎಲ್ಲಾ ಸಿದ್ಧತೆಗಳೊಂದಿಗೆ ಮಂಗಳವಾರ ಬೆಳಿಗ್ಗಿನಿಂದಲೇ ಅರಣ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಕಾಡಾನೆಯನ್ನು ಹಿಡಿಯಲು ನಾಗರಹೊಳೆ ಮತ್ತು ದುಬಾರೆ ಸಾಕಾನೆ ಶಿಬಿರದಿಂದ 5 ಆನೆಗಳು ಆಗಮಿಸಿದೆ. ಕಾಡಾನೆ ಹಿಡಿಯುವುದರಲ್ಲಿ ಪಳಗಿರುವ ಅಭಿಮನ್ಯು, ಪ್ರಶಾಂತ್, ಹರ್ಷ,ಕಂಜನ್ ಹಾಗು ಮಹೇಂದ್ರ ಎಂಬ