Home Posts tagged #v4stream (Page 262)

ಅಲೋಶಿಯಸ್ ಕಾಲೇಜಿನ ಡ್ಯಾನಿಯೆಲ್ಲಾ ಆನ್‌ ಎಲ್. ಚೆಯ್ನ್‌ರವರಿಗೆ ಪಿಹೆಚ್.ಡಿ. ಪದವಿ

ಮಂಗಳೂರಿನ ಸಂತ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಆಹಾರ ವಿಜ್ಞಾನವಿಭಾಗದ ಅಸಿಸ್ಟೆಂಟ್ ಪ್ರೊಫೆಸರ್‌ ಡ್ಯಾನಿಯೆಲ್ಲಾ ಆನ್‌ಎಲ್. ಚೆಯ್ನ್‌ರವರ ಸ್ಟಡೀಸ್‌ ಆನ್‌ದ ಬಯೋ ಡೈವರ್ಸಿಟಿ ಆಫ್ ಫುಡ್‌ ರಿಸೋರ್ಸಸ್‌ ಇನ್ ಮೇಘಾಲಯ ಎಂಬ ಮಹಾಪ್ರಬಂಧಕ್ಕೆ ಹೈದರಾಬಾದ್‌ನ ಓಸ್ಮಾನಿಯಾ ವಿಶ್ವವಿದ್ಯಾನಿಲಯವು ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ.ಇವರು ಹೈದರಾಬಾದ್‌ನ

ಗೋವು ನಮ್ಮೆಲ್ಲರ ತಾಯಿ – ಗೋ ಸೇವೆಯೇ ನಮಗೆ ಕರ್ತವ್ಯ –  ದಯಾನಂದ ಜಿ. ಕತ್ತಲ್‌ಸಾರ್

ಮಂಗಳೂರು:  ಗೋವು ಜಗತ್ತಿನೆಲ್ಲರ ತಾಯಿ. ಆಕೆಯ ಸೇವೆಯನ್ನು ಮಾಡ ಬೇಕಾದುದು ನಮಗೆ ಕರ್ತವ್ಯ. ನಮ್ಮ ತಾಯಿಯ ನಂತರದ ಸ್ಥಾನ ಆಕೆಗೇ ಹೋಗುತ್ತದೆ. ಮೂರು ಮೂರ್ತಿಗಳು, ಮೂವತ್ತು ಮೂರು ಕೋಟಿ ದೇವತೆಗಳು ಅಷ್ಟ ಲಕ್ಷ್ಮೀಯರು, ರತಿ, ವಾಣಿ, ಗಿರಿಜೆಯರು ನೆಲೆಗೊಂಡಿದ್ದಾರೆ ಆಕೆಯ ಮೈ ಮೇಲೆ ಹಾಗಾಗಿ ಆಕೆ ಸರ್ವತ್ರ ಪೂಜ್ಯಳು. ಸರ್ವವಂದ್ಯಳೂ ಆಗಿದ್ದಾಳೆ. ಅಂತಹಾ ಗೋಮಾತೆಯ ಬಗ್ಗೆ ಇಂದಿನ ಪೀಳಿಗೆಗೆ ತಿಳಿಸಿ ಹೇಳಬೇಕಾದ ಅಗತ್ಯ ಇಂದಿದೆ. ಗೋವಿನ ಮಹತ್ವ, ಗೋವಿನಿಂದಾಗುವ

ಮಂಗಳೂರಿನ ಸರಕು ಸಾಗಾಟದ ಘನ ಲಾರಿಗಳ ಸಂಚಾರಕ್ಕೆ ಗುಂಡ್ಯದಲ್ಲಿ ತಡೆ

ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ರಾಷ್ಟ್ರೀಯ ಹೆದ್ದಾರಿ ಕುಸಿತಗೊಂಡಿರುವ ಕಾರಣದಿಂದ ಶಿರಾಡಿ ಘಾಟ್‌ನಲ್ಲಿ ಘನ ವಾಹನಗಳ ಸಂಚಾರಕ್ಕೆ ಹಾಸನ ಜಿಲ್ಲಾಧಿಕಾರಿಯವರು ನಿರ್ಬಂಧ ಹೇರಿದ್ದು, ಇದರ ಮಾಹಿತಿ ತಿಳಿಯದೇ ಮಂಗಳೂರು ಕಡೆಯಿಂದ ಆಗಮಿಸಿರುವ ನೂರಾರು ಸರಕು ಸಾಗಾಟದ ಘನ ಲಾರಿಗಳ ಸಂಚಾರಕ್ಕೆ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ ಉಪ್ಪಿನಂಗಡಿ ಪೊಲೀಸರು ತಡೆಯೊಡ್ಡಿದ್ದಾರೆ. ಇದರಿಂದಾಗಿ ಕಳೆದ ಮೂರ್‍ನಾಲ್ಕು ದಿನಗಳಿಂದ ನೂರಾರು ಮಂದಿ ಲಾರಿ ಚಾಲಕ, ಕ್ಲೀನರ್‌ಗಳು

ಕರ್ನಾಟಕ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಸಾಲ ಮರುಪಾವತಿ ಮೊಬೈಲ್ ಆಪ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ನಿಗಮದ ಸಾಲ ಮರುಪಾವತಿ ಶೇ.90 ರಷ್ಟಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ನಿಗಮವನ್ನು ಫೈನಾನ್ಸ್ ಕಾರ್ಪೊರೇಷನ್ ಆಗಿ ಪರಿವರ್ತಿಸಲು ಸಲಹೆ ನೀಡಿದರು. ಆ ಮೂಲಕ ಹೆಚ್ಚಿನ ಸಂಪನ್ಮೂಲ ಕ್ರೋಢೀಕರಿಸಲು ಸಾಧ್ಯವಾಗುವುದು ಹಾಗೂ ಹೆಚ್ಚು ಸಂಖ್ಯೆಯಲ್ಲಿ ಬಡ

ಆಕ್ಸಿಜನ್ ಉತ್ಪಾದನಾ ಘಟಕ ವೀಕ್ಷಿಸಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಸಾರ್ವಜನಿಕರಿಗೆ ಸದುಪಯೋಗವಾಗುವ ನಿಟ್ಟಿನಲ್ಲಿ ನಿಮಿಷಕ್ಕೆ ಐನೂರು ಲೀಟರ್ ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ ಆಕ್ಸಿಜನ್ ಘಟಕ ಈಗಾಗಲೇ ಕುಂದಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಇದರ ಉದ್ಘಾಟನೆಗೆ ಪೆಟ್ರೋಲಿಯಂ ಸಚಿವರು ಬರುತ್ತಾರೆಂಬ ಮಾಹಿತಿ ಇದೆ. ಹೀಗಾಗಿ ಸ್ವಲ್ಪ ದಿನದ ಬಳಿಕ ಈ ಘಟಕವನ್ನು ಉದ್ಘಾಟನೆ ಮಾಡುತ್ತೇವೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ

ಮೋದೀಜಿ ಮಂತ್ರಿ ಮಂಡಲಕ್ಕೆ ಸಣ್ಣ ಕಪ್ಪುಚುಕ್ಕೆಯೂ ಬಾರದಂತೆ ಕೆಲಸ ಮಾಡುವೆ: ಸಚಿವೆ ಶೋಭಾ ಕರಂದ್ಲಾಜೆ

ಕುಂದಾಪುರ: ಸಂಸತ್ ಅಧಿವೇಶನದಲ್ಲಿ ವಿರೋಧ ಪಕ್ಷದವರು ನೂತನ ಸಚಿವರ ಪರಿಚಯಕ್ಕೂ ಅವಕಾಶ ನೀಡದೆ ಗದ್ದಲ ಎಬ್ಬಿಸಿದ್ದರಿಂದ ನಮ್ಮನ್ನು ನಾವು ಪರಿಚಯಿಸಿಕೊಳ್ಳಲು ಜನಾಶೀರ್ವಾದ ಯಾತ್ರೆ ಆರಂಭಿಸಿದ್ದೇವೆ. ನರೇಂದ್ರ ಮೋದೀಜಿಯವರ ಸರ್ಕಾರಕ್ಕೆ ಚಿಕ್ಕ ಕಪ್ಪು ಚುಕ್ಕೆಯೂ ಬಾರದಂತೆ ಅತ್ಯಂತ ಪಾರದರ್ಶಕವಾಗಿ ಮಂತ್ರಿಯಾಗಿ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಕುಮಾರಿ ಶೋಭಾ ಕರಂದ್ಲಾಜೆ ಹೇಳಿದರು. ಕೇಂದ್ರ ಸಚಿವೆಯಾಗಿ ಆಯ್ಕೆಗೊಂಡ ಬಳಿಕ

ಬಿಜೆಪಿ ಜಿಲ್ಲೆಗೆ ಹೊಸ ಯೋಜನೆಗಳನ್ನು ತಂದಿಲ್ಲ- ಮಾಜಿ ಸಚಿವ ರಮಾನಾಥ ರೈ ಹೇಳಿಕೆ

ಮಂಗಳೂರಿನ ಉರ್ವಸ್ಟೋರ್ ಬಳಿ ಇತ್ತೀಚಿಗೆ ಉದ್ಘಾಟನೆಗೊಂಡ ಜಿಲ್ಲಾ ಮಟ್ಟದ ಅಂಬೇಡ್ಕರ್ ಭವನವನ್ನು ಮಾಜಿ ಸಚಿವ ಬಿ.ರಮಾನಾಥ್ ರೈ ಸೇರಿದಂತೆ ಕಾಂಗ್ರೆಸ್ ನಿಯೋಗ ಭೇಟಿ ನೀಡಿದ್ರು. ತದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿದ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತ ನಡೆಸುತ್ತಿದ್ದ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ನಡೆದಿದೆ. ಅದರಲ್ಲೂ, ಹೊಸ ಜಿಲ್ಲಾಧಿಕಾರಿ ಕಚೇರಿ, ಜಿಲ್ಲೆಗೆ ಪಶುವೈದ್ಯಕೀಯ ಕಾಲೇಜು ನಿರ್ಮಾಣ, ಕೆಲವೊಂದು

ನಿರಪರಾಧಿಯಾಗಿ ಬಿಡುಗಡೆಗೊಂಡು ಕೊನೆಗೂ ಕುಟುಂಬ ಸೇರಿದ ಹರೀಶ್ ಬಂಗೇರ

ಕುಂದಾಪುರ: ಮೆಕ್ಕಾದ ಕುರಿತು ಅವಹೇಳನಕಾರಿ ಬರೆಹ ಪ್ರಕಟಿಸಿದ ಆರೋಪದಡಿ ಸೌದಿ ಅರೇಬಿಯಾದಲ್ಲಿ ಜೈಲುಪಾಲಾಗಿದ್ದ ಬೀಜಾಡಿ ನಿವಾಸಿ ಹರೀಶ್ ಬಂಗೇರ ಕೊನೆಗೂ ಬಿಡುಗಡೆಗೊಂಡು ಗುರುವಾರ ಕುಟುಂಬ ಸಮೇತರಾಗಿ ಆನೆಗುಡ್ಡೆ ಶ್ರೀ ವಿನಾಯಕ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಜನಸೇವಾ ಟ್ರಸ್ಟ್ ಹಾಗೂ ಟೀಮ್ ಅಭಿಮತ ನೇತೃತ್ವದಲ್ಲಿ ಕೋಟೇಶ್ವರ ದೇವಸ್ಥಾನದವರೆಗೆ ಗುರುವಾರ ಮುಂಜಾನೆ ಕಾಲ್ನಡಿಗೆಯಲ್ಲಿ ಸಾಗಿ ಅಲ್ಲಿಯೂ ಪೂಜೆ ಸಲ್ಲಿಸಿ ಮನೆಗೆ ತೆರಳಿದರು. ತಾವು ವಾಸವಿದ್ದ

ಕಾಫಿ ಪುಡಿಯಿಂದ ಅರಳಿದ ಕಟೀಲಿನ ಭ್ರಮರಾಂಭೆ

ಪೈಂಟಿಂಗ್, ಕ್ಯಾನ್ ವಾಸ್, ಅಶ್ವತ್ಥದ ಎಲೆ ಹಾಗೂ ಮೊಳೆಗಳನ್ನು ಬಳಸಿ ಚಿತ್ರಗಳನ್ನು ಬಿಡಿಸಿ ಹಲವಾರು ಕಲಾವಿದರು ಈಗ ಗಮನ ಸೆಳೆಯುತ್ತಿರುವ ಮಧ್ಯೆಯೇ ಇದೀಗ ಕಾಲೇಜು ವಿದ್ಯಾರ್ಥಿ ಶ್ರವಣ್ ಪೂಜಾರಿ ಮಾರ್ನಾಡು ಕಾಫಿ ಹುಡಿಯನ್ನು ಬಳಸಿ ಹಲವು ಗಣ್ಯರ ಚಿತ್ರ ಬಿಡಿಸಿದ್ದಲ್ಲದೆ, ನೆನೆದವರ ಮನದಲ್ಲಿ ನೆಲೆಯಾಗಿ, ನಂಬಿರುವ ಭಕ್ತರ ರಕ್ಷೆಯಾಗಿ, ಸಹಸ್ರಾರು ಭಕ್ತರ ಪೂಜೆ ಹಾಗೂ ಹರಕೆಗಳನ್ನು ಪಡೆದು, ಪರಿಮಳ ಭರಿತ ಮಲ್ಲಿಗೆ ಹೂವಿನಲ್ಲಿ ಸಿಂಗಾರಗೊಂಡು, ತುಳುನಾಡ ತಮೆರಿ ಎಂದೆ

ಪುತ್ತೂರಿನಲ್ಲಿ ಎಸ್‌ಡಿಪಿಐನಿಂದ ಪ್ರತಿಭಟನೆ

ಪುತ್ತೂರು: ಜಾತಿ, ಧರ್ಮದ ಹೆಸರಿನಲ್ಲಿ ಗಲಭೆ ನಡೆಸುತ್ತಾ ಬರುತ್ತಿರುವ ಇದೀಗ ಸಾವರ್‌ಕರ್ ಹೆಸರಿನಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಫ್ಯಾಸಿಸ್ಟ್ ಶಕ್ತಿಗಳಿಗೆ ಎಚ್ಚರಿಕೆ ಕೊಡುವ ನಿಟ್ಟಿನಲ್ಲಿ ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದ್ದು, ಎಸ್‌ಡಿಪಿಐ ಫ್ಯಾಸಿಸಂನ ಯಾವುದೇ ಬೆದರಿಕೆಗಳಿಗೆ ಬಗ್ಗುವುದಿಲ್ಲ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಶಾಫಿ ಬೆಳ್ಳಾರೆ ಹೇಳಿದರು. ಅವರು ಎಸ್‌ಡಿಪಿಐ ವತಿಯಿಂದ ಪುತ್ತೂರಿನ ದರ್ಬೆಯಲ್ಲಿ ನಡೆದ ಪ್ರತಿಭಟನೆಯನ್ನು