Home Posts tagged #v4stream (Page 299)

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭ

ಕೊರೊನಾ ಹಿನ್ನಲೆ ಲಾಕ್‌ಡೌನ್ ನಂತರ ಬರೋಬ್ಬರಿ 68 ದಿನಗಳ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ಕೊರೊನಾ ಪ್ರಕರಣ ಇಳಿಕೆಯ ಹಿನ್ನೆಲೆ ರಾಜ್ಯ ಸರ್ಕಾರ ಜೂನ್.22ರ ನಂತರ ಷರತ್ತು ಬದ್ಧವಾಗಿ ಖಾಸಗಿ ಬಸ್ ಸಂಚಾರಕ್ಕೆ ಅನುಮತಿ ನೀಡಿತ್ತು. ಆದರೆ ತಾಂತ್ರಿಕ ಕಾರಣ ಹಾಗೂ ತೆರಿಗೆ ವಿನಾಯಿತಿ, ಬಸ್ ದರ ಹೆಚ್ಚಳಕ್ಕೆ ಪಟ್ಟು ಹಿಡಿದಿದ್ದ

ಮಂಜೇಶ್ವರದಲ್ಲಿ ತೈಲ ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಮಂಜೇಶ್ವರ : ಕೇಂದ್ರ ಸರಕಾರದ ದುರಾಡಳಿತದಿಂದಾಗಿ ದೇಶ ತತ್ತರಿಸಿ ಹೋಗಿದ್ದು, ಜನಸಾಮಾನ್ಯರ ಬದುಕು ದುಸ್ತರವಾಗಿದೆ, ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯು ನರೇಂದ್ರ ಮೋದಿಯವರ ಅಚ್ಚೇ ದಿನ್ ಕೊಡುಗೆಯಾಗಿದೆ. ಈ ದೇಶದಿಂದ ಮೋದಿ ಆಡಳಿತವನ್ನು ಕಿತ್ತೆಸೆಯುವ ಮೂಲಕ ದೇಶವನ್ನು ರಕ್ಷಿಸುವ ಕೆಲಸ ಆಗಲೇಬೇಕಾಗಿದೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ ಹೇಳಿದ್ದಾರೆ. ಅವರು ಯೂತ್ ಕಾಂಗ್ರೆಸ್ ಮಂಜೇಶ್ವರ ಅಸೆಂಬ್ಲಿ ಸಮಿತಿಯ ವತಿಯಿಂದ

ಶ್ರೀನಿವಾಸ್ ವಿವಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ & ಟೂರಿಸಂ:- ಆನ್‌ಲೈನ್ ಮೂಲಕ ಅಡುಗೆ ಸ್ಪರ್ಧೆ ಆಯೋಜನೆ

ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್‌ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್‌ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್ & ಟೂರಿಸಂನ ವತಿಯಿಂದ ಭವಿಷ್ಯದ ಬಾಣಸಿಗರಾಗಲು ಬಯಸುವ ದ್ವಿತೀಯ ಪಿಯುಸಿ ಹಾಗೂ

ಕಡಬದಲ್ಲಿ ಸ್ಕೂಟಿಗೆ ಓಮಿನಿ ಕಾರು ಢಿಕ್ಕಿ: ಸ್ಕೂಟರ್ ಸವಾರನಿಗೆ ಗಂಭೀರ ಗಾಯ

ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ

ಸುಳ್ಯದ ಕಲ್ಚರ್ಪೆಯಿಂದ ಮಳೆ ನೀರಿನೊಂದಿಗೆ ತೋಡಿನಲ್ಲಿ ಹರಿದುಬಂದ ತ್ಯಾಜ್ಯ: ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯಿಂದ ಶ್ರಮದಾನ

ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು. ಈ ಬಗ್ಗೆ ಅಲ್ಲಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರು. ಈ ಬಗ್ಗೆ ನಗರ ಪಂಚಾಯತ್‌ಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯವರು ತೋಡಿನಲ್ಲಿ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ

ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ

ಪುತ್ತೂರು ನಗರಸಭೆ ಕಚೇರಿ ಕಟ್ಟಡ, ಮಳೆ ನೀರು ಕೊಯ್ಲು ಅಳವಡಿಕೆಗೆ ಶಿಲನ್ಯಾಸ

ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ ನೀರು ಕೊಯ್ಲು ಅನಿವಾರ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಸೋಮವಾರ ಪುತ್ತೂರು ನಗರಸಭೆಯ ವತಿಯಿಂದ ನಡೆಯಲಿರುವ ನೂತನ ಕಚೇರಿ ಕಟ್ಟಡ ಮತ್ತು ಮಳೆ ನೀರು ಕೊಯ್ಲು ಅಳವಡಿಕೆಯ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ

ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಉಚಿತ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ

ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ ಪಟ್ಟಿ ಮಾಡುವಾಗ ಮೀನುಗಾರ ಸಮುದಾಯವನ್ನು ಸೇರಿಸಬೇಕು ಎಂದು ನಾನು ಸೂಚಿಸಿದ ಮೇರೆಗೆ ಇದೀಗ ಬೇರೆ ಬೇರೆ ಭಾಗಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ ಎಂದರು. ಕೆಲವೊಂದು ಅಪಪ್ರಚಾರಗಳಿಂದ ಜನ ಲಸಿಕೆ ಪಡೆಯಲು ಹಿಂದೇಟು ಹಾಕಿದರೂ

ಮಂಜೇಶ್ವರದಲ್ಲಿ ಮದ್ಯಸಾಗಟದ ಆಟೋ ರಿಕ್ಷಾ ಪಲ್ಟಿ ರಿಕ್ಷಾ ಚಾಲಕ ಪರಾರಿ

ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ ಎದ್ದು ಪರಾರಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ಕುಂಜತ್ತೂರು ಪದವು ರಸ್ತೆಯಂದ ಮದ್ಯವನ್ನು ಹೇರಿಕೊಂಡು ಆಗಮಿಸಿದ ರಿಕ್ಷಾ ಪಲ್ಟಿಯಾಗಿದೆ. ಬಳಿಕ ಊರವರು

ಪುತ್ತೂರಿನಲ್ಲಿ ಅನಾರೋಗ್ಯದಿಂದ ಬಾಣಂತಿ ಮೃತ್ಯು

ಪುತ್ತೂರು: ೨ ತಿಂಗಳ ಹಿಂದಷ್ಟೇ ಮಗುವಿಗೆ ಜನ್ಮ ನೀಡಿದ್ದ ಬಾಣಂತಿಯೊಬ್ಬರು ಅನಾರೋಗ್ಯದಿಂದಾಗಿ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೃಷ್ಣನಗರದಲ್ಲಿ ನಡೆದಿದೆ. ಪುತ್ತೂರು ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸಿಬ್ಬಂದಿಯಾಗಿರುವ ದಿಲೀಪ್ ಅವರ ಪತ್ನಿ ಅಕ್ಷತಾ ನಾಯ್ಕ್ ಮೃತಪಟ್ಟವರು. ಅಕ್ಷತಾ ಅವರು ಪುತ್ತೂರು ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂಬಂಧಿಸಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.