ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ
ಮೂಡುಬಿದಿರೆ: ವಿಧಾನಪರಿಷತ್ ಸದಸ್ಯರಾಗಿ ಎರಡನೇ ಅವಧಿಗೆ ಆಯ್ಕೆಯಾದ ಐವನ್ ಡಿಸೋಜ ಅವರಿಗೆ ಕೆಥೋಲಿಕ್ ಸಭಾ ಮೂಡುಬಿದಿರೆ ಘಟಕದ ವತಿಯಿಂದ ಮೂಡುಬಿದಿರೆ ಕೊರ್ಪುಸ್ ಕ್ರಿಸ್ತಿ ಚರ್ಚ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿದ ಐವನ್ ಡಿಸೋಜ ಮಾತನಾಡಿ, ನಾನು ಕಾಂಗ್ರೆಸ್ ಪಕ್ಷನಿಷ್ಠೆ ಯ ಬದ್ಧತೆಯಿಂದ ಕೆಲಸ ಮಾಡಿದ್ದು ತನ್ನ ಸೇವೆಯನ್ನು ಪರಿಗಣಿಸಿ ಎರಡನೇ ಅವಧಿಗೆ ಈ ಸನ್ಮಾನ ಲಭಿಸಿದೆ. ಸಿಕ್ಕಿದ ಅವಕಾಶವನ್ನು ಬಳಸಿ ನೋಂದವರ ಸಹಾಯ ಹಸ್ತ ಒದಗಿಸುವ ಆದ್ಯತೆ
2011ನೇ ಇಸವಿಯಲ್ಲಿ ಇಡೀ ಕರ್ನಾಟಕದಲ್ಲಿ ಹಳ್ಳಿ ಹಳ್ಳಿಗೆ ಹೋಗಿ ಸುಮಾರು ಮೂರು ಲಕ್ಷ ಮನೆಗಳಿಗೆ ಸೋಲಾರ್ ದೀಪಗಳ ವ್ಯವಸ್ಥೆ ಮಾಡಿದ್ದೇವೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಹೇಳಿದರು. ಅವರು ಧರ್ಮಸ್ಥಳದ ಅನ್ನಪೂರ್ಣ ಚಿತ್ರದಲ್ಲಿ ಸುಮಾರು ೫೦ ಲಕ್ಷ ವ್ಯತ್ಯಾಸದ ಸೆಲ್ಕ್ಕೋ ಫೌಂಡೇಶನ್ ಪ್ರಾಯೋಜತ್ವದಲ್ಲಿ ಅಳವಡಿಸಲಾದ ಉಚಿತ ಸೌರ ವಿದ್ಯುತ್ ಘಟಕದ ಚಾಲನಾ ಕಾರ್ಯಕ್ರಮದಲ್ಲಿ ಮಾತನಾಡಿ, ಸೋಲಾರ್ ಆಳವಡಿಕೆಯಲ್ಲಿ ಶ್ರೀ ಕ್ಷೇತ್ರಕ್ಕೆ
ಮಂಗಳೂರು: “ಜುಲೈ ೯ರಂದು ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಲಾವಿದರ ತಂಡ ಯಕ್ಷಗಾನ ಅಭಿಯಾನಕ್ಕಾಗಿ ಅಮೆರಿಕ ಪ್ರವಾಸ ಕೈಗೊಳ್ಳುತ್ತಿದೆ. ಯಕ್ಷದ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಯುಎಸ್ಎ ಆಯೋಜನೆಯನ್ನು ಮಾಡುತ್ತಿದೆ. ಅಮೇರಿಕಾದ ೨೦ ರಾಜ್ಯಗಳ ಮುಖ್ಯ ನಗರಗಳಲ್ಲಿ ನಿಶ್ಚಯಿಸಿರುತ್ತಾರೆ” ಎಂದು ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಮಾಹಿತಿ ನೀಡಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು.
ಭಾರತದಲ್ಲಿ ಓದು ಕಡೆಗಣಿಸಿ ಮದುವೆಗೆ ಹೆಚ್ಚು ವೆಚ್ಚ ಮಾಡಲಾಗುತ್ತಿದೆ ಎಂದು ಜಾಗತಿಕ ಬ್ರೋಕರೇಜ್ ಸಂಸ್ಥೆ ಜೆಫರಿಸ್ ವರದಿ ಮಾಡಿದೆ. ಭಾರತದಲ್ಲಿ ಚೀನಾ ಮತ್ತು ಇತರ ದೇಶಗಳಿಗಿಂತ ಹೆಚ್ಚು ವರುಷದಲ್ಲಿ ೮೦ ಲಕ್ಷದಿಂದ ಒಂದು ಕೋಟಿಯವರೆಗೆ ಮದುವೆಗಳು ನಡೆಯುತ್ತವೆ. ಭಾರತದ ಮದುವೆಯೊಂದಕ್ಕೆ ಸರಾಸರಿ ೧೨.೫೦ ಲಕ್ಷ ರೂಪಾಯಿ ಖರ್ಚಾಗುತ್ತದೆ. ಭಾರತದ ಮದುವೆ ಮಾರುಕಟ್ಟೆ ಮೌಲ್ಯವು ೧೦ ಲಕ್ಷ ಕೋಟಿ ರೂಪಾಯಿ ಇದೆ. ಭಾರತದ ಆಹಾರ ಮತ್ತು ತರಕಾರಿ ಮಾರುಕಟ್ಟೆ ಮೌಲ್ಯ ೫೬.೭೬ ಲಕ್ಷ
ಕರಂಡೆಯು ಹುಳಿ ಕಾಡು ಕಾಯಿಯಾಗಿದ್ದು, ಹಣ್ಣಾದಾಗ ನೀಲಿ ದ್ರಾಕ್ಷಿಯ ರುಚಿ ಹೊಂದಿದೆ. ಬ್ರಿಟನ್, ಅಮೆರಿಕದ ಕ್ರಾನ್ಬೆರಿ ಇದೇ ರುಚಿಯದು, ತುಸು ದೊಡ್ಡದು.ವ್ಯಾಪಕವಾಗಿ ಬೆಳೆಸಿ ನಾವು ಬಳಸುವಂತೆಯೇ ಬಳಸುತ್ತಾರೆ. ಕರಂಡೆಯನ್ನು ಉಪ್ಪಿನಕಾಯಿ ಹಾಕುತ್ತಾರೆ, ಉಪ್ಪಿನಲ್ಲಿ ಹಾಕಿ ಇಡುತ್ತಾರೆ. ಬೇಯಿಸಿ ಒಣಗಿಸಿಟ್ಟು ಹುಣಸೆ ಹುಳಿಯ ಬದಲು ಬಳಸುತ್ತಾರೆ. ರೈಲಿನಲ್ಲಿ ಪೂನಾ ಮುಂಬಯಿ ನಡುವೆ ಲೋನಾವಳ ಬಳಿ ಇದರ ಹಣ್ಣನ್ನು ಎಲೆಯಲ್ಲಿ ಕಟ್ಟಿ ಮಾರುವ ಬುಡಕಟ್ಟು ಮಹಿಳೆಯರು
ಬಂಟ್ವಾಳ: ರೋಟರಿಕ್ಲಬ್ ಬಂಟ್ವಾಳ ಬಿ.ಸಿ.ರೋಡಿಗೆ ಸಮೀಪದ ಗೂಡಿನಬಳಿಯಲ್ಲಿರುವ ಕ್ಲಬ್ನ ಕಟ್ಟಡದಲ್ಲಿ ಸುಮಾರು ೮೫ ಲಕ್ಷ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ತಂದಿರುವ ರಕ್ತನಿಧಿ ಸೆಂಟರ್ ಲೋಕಾರ್ಪಣೆ ಗೊಂಡಿತು.ಬಂಟ್ವಾಳ ತಾಲೂಕಿನ ಬಹು ಕಾಲದ ಬೇಡಿಕೆಯೊಂದು ಈಡೇರಿದೆ. ರೋಟರಿ ಜಿಲ್ಲಾ ೩೧೮೧ ರ ಗವರ್ನರ್ ಎಚ್. ಆರ್.ಕೇಶವ ಅವರು ಉದ್ಘಾಟಿಸಿ, ಬಂಟ್ವಾಳ ರೋಟರಿ ಕ್ಲಬ್ನ ಸೇವಾ ಕಾರ್ಯವನ್ನು ಶ್ಲಾಘಿಸಿದರು. ಈ ಕ್ಲಬ್ನ ಸದಸ್ಯರ ಸಾಮರ್ಥ ಹಾಗೂ ಬದ್ದತೆ ಅಭಿನಂದನೀಯ ಎಂದರು.
ಬೆಳ್ತಂಗಡಿ: ಶಿಬಾಜೆ ಗ್ರಾಮದ ಬರ್ಗುಳದಲ್ಲಿ ವಿದ್ಯುತ್ ಶಾಕ್ಗೆ ಯುವತಿ ಸಾವನ್ನಪ್ಪಿದ್ದು ಮೆಸ್ಕಾಂ ಇಲಾಖೆಯ ನಿರ್ಲಕ್ಷ÷್ಯವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಕಳೆದ ಕೆಲವು ಸಮಯಗಳಿಂದ ತಂತಿ ಸರಿಪಡಿಸುವಂತೆ ಸಂಬAಧ ಪಟ್ಟ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಿಗೆ ಮನೆಯವರು ತಿಳಿಸಿದರೂ ಅವರು ನಿರ್ಲಕ್ಷಿ÷್ಸಸಿದ್ದಾರೆ. ಅದ್ದರಿಂದ ಇವತ್ತು ಅಮಾಯಕ ಯುವತಿ ಬಲಿಯಾಗಿದ್ದಾಳೆ. ಈ ದುರಂತಕ್ಕೆ ಮೆಸ್ಕಾಂ ಇಲಾಖೆಯೇ ಕಾರಣ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕು


























