Home Posts tagged #v4stream (Page 46)

ಕುಂಜತ್ತೂರಿನಲ್ಲಿ ನಿರ್ಮಾಣಗೊಂಡ ಅಂಡರ್‍ ಪಾಸ್ ನಿಂದ ಸಂಚರಿಸಲು ತೊಂದರೆ

ಮಂಜೇಶ್ವರ: ಕುಂಜತ್ತೂರಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಅಂಡರ್ ಪಾಸ್ ನಿಂದ ಬುಧವಾರ ಬೆಳಗ್ಗಿನಿಂದ ವಾಹನ ಸಂಚಾರ ಆರಂಭಗೊಂಡಿತು.ಅಂಡರ್ ಪಾಸ್ ನೀಡುವುದಾಗಿ ಅಧಿಕಾರಿಗಳ ಭಾಗದಿಂದ ಹಸಿರು ನಿಶಾನೆ ಲಭಿಸಿದಾಗ ಸ್ಥಳೀಯರು ಅತೀವ ಸಂತೋಷಪಟ್ಟಿದ್ದರೂ ಈ ರೀತಿಯ ಅಂಡರ್ ಪಾಸ್ ಸಿಗಬಹುದೆಂದು ಯಾರೂ ನಿರೀಕ್ಷಿಸಿರಲಿಲ್ಲವೆಂಬುದಾಗಿ ಜನರು ಆಡಿಕೊಳ್ಳುತಿದ್ದಾರೆ. ಅಂಡರ್ ಪಾಸ್

ಮಾ.10ರಂದು ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಆರಂಭ

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ ಬಂಟ್ವಾಳ ಪ್ರಜಾಧ್ವನಿ ಯಾತ್ರೆ ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ

ಕಾರ್ಕಳದ ಜೋಡು ರಸ್ತೆಯಲ್ಲಿ ಅಲಂಕಾರಿಕ ದೀಪ ಉದ್ಘಾಟನೆ

ಕಾರ್ಕಳದ ಅಭಿವೃದ್ಧಿಯಲ್ಲಿ ಮೂಲಸೌಕರ್ಯ ಜೊತೆಗೆ ಸಾರ್ವಜನಿಕರ ವೇಗಕ್ಕೆ ತಕ್ಕಂತೆ ಮಹತ್ತರವಾದ ದೂರವನ್ನು ಅಭಿವೃದ್ಧಿ ಕ್ಷೇತ್ರದಲ್ಲಿ ಕ್ರಮಿಸಿದ್ದೇನೆ. 10 ದಿಕ್ಕಿನಲ್ಲೂ ರಸ್ತೆಗಳು ಹೊಸತನಕ್ಕೆ ಮಗ್ಗು ಬದಲಿಸಿಕೊಂಡಿವೆ. ಇಡೀ ಕಾರ್ಕಳಕ್ಕೆ ಹೊಸ ರೂಪ ನೀಡಲಾಗಿದೆ ಎಂದು ಇಂದಿನ ಸಚಿವ ಸುನಿಲ್ ಕುಮಾರ್ ಹೇಳಿದರು. ಕಾರ್ಕಳ ನಗರ ಭಾಗಕ್ಕೆ ಹತ್ತಿರದಲ್ಲಿರುವ ಜೋಡು ರಸ್ತೆಯಲ್ಲಿ 6.50 ಕೋಟಿ ವೆಚ್ಚದ ಸಮಗ್ರವಾಗಿ ಅಭಿವೃದ್ಧಿ ಕಾಮಗಾರಿ ಅಲಂಕಾರಿಕ ದೀಪ ಉದ್ಘಾಟಿಸಿ

ಉಳಿಯಾರಗೋಳಿ : ಟ್ಯೂಬ್ ಮೂಲಕ ಮೀನುಗಾರಿಕೆಗೆ ತೆರಳಿದ ವ್ಯಕ್ತಿ ಸಮುದ್ರ ಪಾಲು

ಟ್ಯೂಬ್ ಮೂಲಕ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಮುದ್ರದ ತೆರೆಯ ಅಬ್ಬರಕ್ಕೆ ಸಿಲುಕಿ ಸಮುದ್ರ ಪಾಲಾದ ಘಟನೆ ಉಳಿಯಾರಗೋಳಿ ಕಡಲ ಕಿನಾರೆಯಲ್ಲಿ ನಡೆದಿದೆ. ಉಳಿಯಾರಗೋಳಿ ಯಾರ್ಡ್ ಬಳಿಯ ನಿವಾಸಿ ಸಂತೋಷ್ (48) ಮೀನುಗಾರಿಕೆಗೆ ತೆರಳಿ ನಾಪತ್ತೆ ಯಾಗಿರುವ ವ್ಯಕ್ತಿ. ಸಾಂಪ್ರದಾಯಿಕ ರೀತಿಯಲ್ಲಿ ಬಲೆ ಬೀಸಿ ಮೀನುಗಾರಿಕೆ ನಡೆಸುತ್ತಿದ್ದ ಸಂತೋಷ್ ಬುಧವಾರ ಸಂಜೆ 5 ಗಂಟೆಯ ವೇಳೆಗೆ ಟ್ಯೂಬ್ ಧರಿಸಿಕೊಂಡು ಮೀನುಗಾರಿಕೆಗೆ ತೆರಳಿದ್ದು, ಬಲೆ ಬೀಸಿ

ನಶಿಸಿ ಹೋಗುತ್ತಿರುವ ಕಂಗೀಲು ಧಾರ್ಮಿಕ ಆಚರಣೆ ಹೆಜಮಾಡಿಯಲ್ಲಿ ಇಂದಿಗೂ ಜೀವಂತ

ತೆರೆಮರೆಯ ಕಡೆ ವಾಲುತ್ತಿರುವ ಧಾರ್ಮಿಕ ಆಚರಣೆಯಲ್ಲಿ ಕಂಗೀಲು ಕೂಡಾ ಒಂದು..ಬಹುತೇಕ ಕಡೆ ಇಲ್ಲವಾಗಿರುವ ಕಂಗೀಲು ಹೆಜಮಾಡಿಯಲ್ಲಿ ಇಂದೂ ಜೀವಂತ ಎಂಬುದು ಸಂತೋಷ.. ಹೆಜಮಾಡಿ ಶ್ರೀ ಬ್ರಹ್ಮ ಮುಗ್ಗೇರ್ಕಳ ದೈವಸ್ಥಾನದ ಮೂಲಕ ಹತ್ತು ಸಮಸ್ತರನ್ನು ಸೇರಿಸಿ ವರ್ಷಂಪ್ರತಿಯಂತೆ ಹೆಜಮಾಡಿ ಆಲಡೆ ಜಾತ್ರೆಯ ಮರುದಿನ ಮಾಯಿ ಹುಣ್ಣುಮೆ ದಿನದಂದ್ದು, ಶ್ರೀದೈವಸ್ಥಾನಕ್ಕೆ ಸಂಬಂಧಿಸಿದ ಮಂದಿ ಸೇರಿ ಹಿರಿಯರು ನಡೆದು ಕೊಂಡು ಬಂದ ಧಾರ್ಮಿಕ ವಿಧಿವಿಧಾನಗಳಂತೆ ಹತ್ತು ಸಮಸ್ತರನ್ನು

ಮುಲ್ಕಿ: ಸ್ಕೂಟರ್ ಗೆ ಟ್ಯಾಂಕರ್ ಢಿಕ್ಕಿ: ಇಬ್ಬರು ಮೃತ್ಯು

ಸ್ಕೂಟರ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸ್ಧಳದಲ್ಲಿಯೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಮೃತ ದಂಪತಿಗಳನ್ನು ತೀರ್ಥಹಳ್ಳಿ ಕೋಳಿ ಕಾಲು ಗುಡ್ಡೆ ನಿವಾಸಿಗಳಾದ ಅಕ್ಬರ್ ಭಾಷಾ (61) ವರ್ಷ ಹಾಗೂ ಖತಿಜಾ ಬಿ (46 ವರ್ಷ ) ಎಂದು ಗುರುತಿಸಲಾಗಿದೆ. ಮಂಗಳೂರಿನ ಪಾಸ್‌ಪೋರ್ಟ್  ಕಛೇರಿಗೆ ಪಾಸ್‌ಪೋರ್ಟ್ ಮಾಡಿಸಲೆಂದು ಮೃತ ದಂಪತಿಗಳು ಮುಂಜಾನೆ ತಮ್ಮ ಸ್ಕೂಟರಿನಲ್ಲಿ

ಅತ್ಯಾಚಾರ ಆರೋಪ , ಕೊಣಾಜೆ ವಿ.ವಿ ಸಹಪ್ರಾಧ್ಯಾಪಕ:ಡಾ| ವೇದವ ಪಿ.ಗೆ ಹೈಕೋರ್ಟಿನಿಂದ ಕ್ಲೀನ್‌ ಚಿಟ್‌

ಉಳ್ಳಾಲ: ಕೊಣಾಜೆಯ ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗದ ಸಹಪ್ರಾಧ್ಯಾಪಕ ಡಾ| ವೇದವ ಪಿ. ವಿರುದ್ಧ ಕನ್ನಡ ವಿಭಾಗದ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ದಾಖಲಿಸಿದ್ದ ಅತ್ಯಾಚಾರ ಪ್ರಕರಣದಿಂದ ಕ್ಲೀನ್‌ ಚಿಟ್‌ ನೀಡಿ ನಿರಪರಾಧಿ ಎಂದು ಸಾಬೀತುಪಡಿಸಿದೆ. 2014ರಲ್ಲಿ ಬಂಟ್ವಾಳ ಪೊಲೀಸ್‌ ಠಾಣೆಯಲ್ಲಿ ಕೊಡವ ಅಧ್ಯಯನ ಕೇಂದ್ರದ ಸಂಶೋಧನಾ ಸಹಾಯಕಿ ಪೂರ್ಣಿಮಾ ಎಂಬವರು ಸಹಪ್ರಾಧ್ಯಾಪಕ ಡಾ| ವೇದವ .ಪಿ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು.

ಬೈಂದೂರಿನ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ: ಅಷ್ಠಬಂಧ ಬ್ರಹ್ಮಕಲಶಾಭಿಷೇಕ

ಇತಿಹಾಸ ಪ್ರಸಿದ್ಧ ಬೈಂದೂರು ತಾಲೂಕಿನ ಶ್ರೀ ದುರ್ಗಾಪರಮೇಶ್ವರಿ ಶ್ರೀದೇವಿಯ ಸಾನಿಧ್ಯದಲ್ಲಿಅಷ್ಟಬಂಧ ಬ್ರಹ್ಮಕಲಶಾಭಿಷೇಕ ಹಾಗೂ ಶ್ರೀಮನ್ಮಹಾ ರಥೋತ್ಸವವು ವಿಜೃಂಭಣೆಯಿಂದ ನಡೆಯಿತುತಂತ್ರಿಗಳಾದ ಮಂಜುನಾಥ ಅಡಿಗ ಹಾಗೂ ಪ್ರಧಾನ ಅರ್ಚಕರಾದ ಪ್ರಕಾಶ್ ಐತಾಳ್ ಇವರ ನೇತೃತ್ವದಲ್ಲಿ ಪ್ರತಿದಿನ ತಂತ್ರಿಗಳಾದ ಧಾರ್ಮಿಕ ವಿಧಿ ವಿಧಾನಗಳು ದೇವಿಯ ಸಾನಿಧ್ಯದಲ್ಲಿ ಸಂಪನ್ನಗೊಂಡಿದೆ. ಅಷ್ಟಬಂದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಬಿ.ಎಸ್ .ಸುರೇಶ್ ಶೆಟ್ಟಿ.ಮಾತನಾಡಿ

ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆ

ಬಂಟ್ವಾಳ: ಕೇಂದ್ರ ಸರಕಾರದ ನಿಕ್ಷಯ ಮಿತ್ರ ಯೋಜನೆಯಡಿ ಫರಂಗಿಪೇಟೆಯ ಸೇವಾಂಜಲಿ ಪ್ರತಿಷ್ಠಾನ ವತಿಯಿಂದ ಕ್ಷಯ ರೋಗಿಗಳಿಗೆ ಆಹಾರ ಧವಸ ಧಾನ್ಯ ವಿತರಣ ಕಾರ್ಯಕ್ರಮ ಸೋಮವಾರ ಸೇವಾಂಜಲಿ ಸಭಾಗೃಹದಲ್ಲಿ ನಡೆಯಿತು.ರೋಟರಿ ಕ್ಲಬ್ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಕ್ಷಯ ರೋಗ ನಿವಾರಣೆಗೆ ಔಷಧಿಯಷ್ಟೇ ಪೌಷ್ಟಿಕಾಹಾರ ಸೇವೆನೆಯೂ ಮುಖ್ಯ. ಆದ್ದರಿಂದ ಸೇವಾಂಜಲಿ ಪ್ರತಿಷ್ಠಾನವು ತಾಲೂಕಿನ ಕ್ಷಯ ರೋಗಿಗಳನ್ನು