ವಿಟ್ಲ: ಶಾಲಾ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ವಿಟ್ಲದ ಚಂದಳಿಕೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಚಂದಳಿಕೆ ಕಡೆಗೆ ಶಾಲಾ ವಿದ್ಯಾರ್ಥಿಗಳನ್ನು ಕೊಂಡೊಯ್ಯುತ್ತಿದ್ದ ಬಸ್ ಚಂದಳಿಕೆ ಮಾಡತ್ತಡ್ಕ ತಿರುವಿಗೆ ತಿರುಗುತ್ತಿದ್ದಂತೆ ಹಿಂದಿನಿಂದ ಬಂದ ಬೈಕ್ ಬಸ್ ಗೆ ಡಿಕ್ಕಿ ಹೊಡೆದಿದೆ.
ಕನ್ಯಾನ ಗ್ರಾಮದ ದೇಲಂತಬೆಟ್ಟು ದ.ಕ.ಜಿ.ಪಂ.ಉನ್ನತ ಹಿ.ಪ್ರಾ.ಶಾಲೆಯ ಅಮೃತ ಮಹೋತ್ಸವ ಸಮಾರಂಭ ಅಮೃತ ಸಿಂಚನ ಕಾರ್ಯಕ್ರಮ ಜ.13ರಂದು ನಡೆಯಲಿದೆ. 1948 ಜೂ.1ರಂದು ಆರಂಭವಾದ ಈ ಶಾಲೆಗೆ 75 ವರ್ಷ ತುಂಬಿದ್ದು, ಹಳೆ ವಿದ್ಯಾರ್ಥಿಗಳು, ಅಮೃತ ಮಹೋತ್ಸವ ಸಮಿತಿ ಮತ್ತು ಶಾಲಾಭಿವೃದ್ಧಿ ಸಮಿತಿ ಜತೆಗೂಡಿ ಅಮೃತ ಮಹೋತ್ಸವವವನ್ನು ಆಚರಿಸಲಿದೆ ಎಂದು ಅಧ್ಯಕ್ಷ ಡಿ.ಶ್ರೀನಿವಾಸ್ ಹೇಳಿದರು.ಅವರು ವಿಟ್ಲದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.13ರಂದು ಬೆಳಗ್ಗೆ 9 ಗಂಟೆಗೆ
ವಿಟ್ಲ: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಕಬಕ ಸಮೀಪದ ಮಿತ್ತೂರು ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಮೃತರನ್ನು ಬಿ.ಸಿ.ರೋಡ್ ಕೈಕಂಬ ನಿವಾಸಿ ಆಶಿಮ್ ಎಂದು ಗುರುತಿಸಲಾಗಿದೆ. ಬೈಕ್ ಬಸ್ಸಿನಡಿಗೆ ಎಸೆಯಟ್ಟಿದ್ದು, ಸಂಪೂರ್ಣ ಜಖಂಗೊಂಡಿದೆ. ಕಬಕ ಕಡೆಯಿಂದ ಬಿ.ಸಿ ರೋಡ್ ಗೆ ತೆರಳುತ್ತಿದ್ದಾಗ ಎದುರಿನಿದ ಬಂದ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ರಸ್ತೆ ಬಿಟ್ಟು ಬದಿಯ ಕಣಿವೆಗೆ ಜಾರಿ
ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಲಪದವು ಕೊಡಂಚಡ್ಕ ಎಂಬಲ್ಲಿ ನಿರ್ಮಾಣವಾಗುತ್ತಿರುವ ಗೋಫಾರ್ಮ್ ಕಟ್ಟಡಕ್ಕೆ ಪುಣಚ ಗ್ರಾಮ ಪಂಚಾಯತ್ ಕಾನೂನು ಬದ್ಧ ಪರವಾನಿಗೆಯನ್ನು ನೀಡಲಾಗಿದೆ. ಇದನ್ನು ರದ್ದುಗೊಳಿಸಲು ಅವಕಾಶ ಇಲ್ಲ ಎಂದು ಪುಣಚ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಕೃಷ್ಣ ಮೂಡಂಬೈಲು ತಿಳಿಸಿದ್ದಾರೆ. ಅವರು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ನಡೆಸಿ ಪರವಾನಿಗೆ ನೀಡಿದ ವಿಚಾರವನ್ನು ಸಮರ್ಥಿಸಿ ಕೊಂಡರು. ಇದು ಹಸೈನಾರ್ ಮಾದುಮೂಲೆ ಎಂಬವರಿಗೆ
ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸರಿಗೊಪ್ಪಿಸಿ ಎರಡು ಜಾನುವಾರುಗಳನ್ನು ರಕ್ಷಣೆ ಮಾಡಿದ ಘಟನೆ ವಿಟ್ಲ ಸಮೀಪದ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಈ ಬಗ್ಗೆ ತಿಳಿದ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಪಿಕಪ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ್ದಾರೆ ಎಂದು ತಿಳಿದು ಬಂದಿದೆ.
ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ ವಿರುದ್ಧ ವಿಟ್ಲ – ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಪಂಚಾಯತ್ ವತಿಯಿಂದ
























