Home Posts tagged #vitla (Page 6)

ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗ

ವಿಟ್ಲದಲ್ಲಿ ಕೇಂದ್ರ ಕಚೇರಿ ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಸಂಸ್ಥೆ ವಿಜ್ಞಾನಿಗಳ ನೇತೃತ್ವದಲ್ಲಿ ಅಡಿಕೆ ಮತ್ತು ತೆಂಗಿನ ಮರಗಳಿಗೆ ಬಾಧಿಸುತ್ತಿರುವ ಹಳದಿ ರೋಗದ ವಿರುದ್ಧ ಹೋರಾಡಲು ಸಜ್ಜಾಗುವ ಮೂಲಕ ರೈತರ ಕಷ್ಟಗಳಿಗೆ ಸ್ಪಂದಿಸಲು ಮುಂದಾಗಿದೆ ದ.ಕ ಜಿಲ್ಲೆಯಾದ್ಯಂತ ಅಡಿಕೆ ಮರಗಳಿಗೆ ಹಳದಿ ರೋಗ ಬಾಧಿಸಿದ್ದರಿಂದ ಜಿಲ್ಲೆಯ ರೈತರು ಅಡಿಕೆ

ಮನೆಗೆ ಸಿಡಿಲು ಬಡಿದು ಮೂವರಿಗೆ ಗಾಯ: ಅಳಿಕೆಯ ಕಲ್ಲೆಂಚಿನಪಾದೆಯಲ್ಲಿ ನಡೆದ ಘಟನೆ

ವಿಟ್ಲ: ಮನೆಗೆ ಸಿಡಿಲು ಬಡಿದು ಮೂವರು ಗಾಯಗೊಂಡು ಮನೆ ಹಾನಿಗೊಂಡ ಘಟನೆ ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಎಂಬಲ್ಲಿ ಸಂಭವಿಸಿದೆ. ಅಳಿಕೆ ಗ್ರಾಮ ಕಲ್ಲೆಂಚಿನಪಾದೆ ಶೀನ ನಳಿಕೆ ಅವರಿಗೆ ಸೇರಿದ ಮನೆಗೆ ರಾತ್ರಿ ಭಾರೀ ಪ್ರಮಾಣ ಸಿಡಿಲು ಬಡಿದಿದೆ. ಇದರಿಂದ ಶೀನ ನಳಿಕೆ, ಅವರ ಪತ್ನಿ ಸುಶೀಲ, ಮಕ್ಕಳಾದ ವಿದ್ಯಾ ಮತ್ತು ವಿನಯ ಅವರು ಗಾಯಗೊಂಡಿದ್ದಾರೆ. ಘಟನೆಯ ತೀವ್ರತೆಗೆ ಮನೆಯ ಗೋಡೆಯನ್ನು ಸೀಳಿಕೊಂಡು ಸಿಡಿಲು ಪ್ರವೇಶಿಸಿದ್ದರಿಂದ ಗೋಡೆ ಸಂಪೂರ್ಣವಾಗಿ ಬಿರುಕು ಬಿಟ್ಟಿದೆ.

ವಿಟ್ಲದ ಇಡ್ಕಿದು ಎಂಬಲ್ಲಿ ರಸ್ತೆ ಅಪಘಾತ: ದ್ವಿಚಕ್ರ ವಾಹನ ಸವಾರ ಮೃತ್ಯು

ವಿಟ್ಲ: ರಸ್ತೆ ಅಪಘಾತವೊಂದರಲ್ಲಿ ಗಂಭೀರ ಗಾಯಗೊಂಡಿದ್ದ ದ್ವಿಚಕ್ರ ಸವಾರರೋರ್ವರು ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿಮಧ್ಯೆ ಮೃತಪಟ್ಟ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಇಡ್ಕಿದು ಗ್ರಾಮದ ಮಿತ್ತೂರು ಮಸೀದಿ ಸಮೀಪ ನಡೆದಿದೆ   ನಿಡ್ಪಳ್ಳಿ ಗ್ರಾಮದ ವಾಲ್ತಾಜೆ ನಾರಾಯಣ ನಾಯ್ಕ್ ರವರ ಪುತ್ರ, ರಿಬ್ಕೋ ಟ್ರೇಡಿಂಗ್ ಕಂಪೆನಿಯ ನೌಕರ ಸುರೇಶ್ ನಾಯ್ಕ್ ಮೃತ ದುರ್ದೈವಿ. ಬೆಳಿಗ್ಗೆ ಸ್ಥಳೀಯ ನಿವಾಸಿಯೋರ್ವರು ಆಟೋ ರಿಕ್ಷಾವೊಂದರಲ್ಲಿ ಮಿತ್ತೂರಿಗೆ ಹಾಲು

ವಿಟ್ಲ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

ವಿಟ್ಲ: ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದ ಮನೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ಬಾಬು ನಾಯ್ಕ ರವರ ಮಗಳು ನಿಶ್ಮಿತಾ(22) ಎಂದು ಗುರುತಿಸಲಾಗಿದೆ.ನಿಶ್ಮಿತಾ ರವರು ಡೆಂಟಲ್ ಕ್ಲಿನಿಕ್ ಕೆಲಸ ನಿರ್ವಹಿಸುತ್ತಿದ್ದು, ನಿನ್ನೆ ಸಂಜೆಯಿಂದ ಕಾಣೆಯಾಗಿದ್ದಳು ಈ ಬಗ್ಗೆ ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಅ.11 ರಂದು

ಮೀನಿನ ವ್ಯಾಪಾರಿಯ ಅಪಹರಣ: ವಿಟ್ಲ ಪೊಲೀಸ್ ಠಾಣೆಗೆ ದೂರು

ವಿಟ್ಲ: ಕೊಳ್ನಾಡು ಗ್ರಾಮದ ಕೆ.ಪಿ ಬೈಲು ನಾರ್ಶ ಎಂಬಲ್ಲಿ ಮೀನಿನ ವ್ಯಾಪಾರಿಯೊಬ್ಬರನ್ನು ಅಪರಿಚಿತರ ತಂಡವೊಂದು ಅಪಹರಣ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.   ಕೊಳ್ನಾಡು ಗ್ರಾಮದ ಕೆ ಪಿ ಬೈಲು ನಾರ್ಶ ನಿವಾಸಿ ಮಹಮ್ಮದ್ ಅನ್ಸಾರ್(34) ಅಪಹರಣಗೊಳಗಾದ ವ್ಯಕ್ತಿಯಾಗಿದ್ದು, ಈ ಬಗ್ಗೆ ಅವರ ಪತ್ನಿ ಅಪ್ಸ ಅವರು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೊಹಮ್ಮದ್ ಅನ್ಸಾರ್ (31) ಎಂಬವರು ಮೀನಿನ ವ್ಯಾಪಾರದಲ್ಲಿ ನಷ್ಟ ಉಂಟಾಗಿ ಬೇರೆ

ವಿಟ್ಲ ವ್ಯಾಪ್ತಿಯಲ್ಲಿ ಹಾದುಹೋಗಲಿರುವ 400ಕೆವಿ ವಿದ್ಯುತ್: ಕೃಷಿಕರಿಗೆ ತೊಂದರೆ

ವಿಟ್ಲ: ಉಡುಪಿ ಕಾಸರಗೋಡು 400ಕೆವಿ ವಿದ್ಯುತ್ ಮಾರ್ಗ ಸದ್ಯದ ಮಾಹಿತಿಯಂತೆ ವಿಟ್ಲ ಪಟ್ಟಣ ಪಂಚಾಯಿತಿಯ 4-5 ವಾರ್ಡ್ ಗಳಲ್ಲಿ ಹಾದುಹೋಗುತ್ತಿದೆ. ಕೃಷಿಕರಿಗೆ ಹಾಗೂ ಹಲವಾರು ಜಮೀನು ಮಾಲೀಕರಿಗೆ ಸಮಸ್ಯೆಯಾಗುತ್ತಿದ್ದರೂ, ಈ ಬಗ್ಗೆ ಶಾಸಕರಾಗಲಿ, ಈ ಭಾಗದ ಜನಪ್ರತಿನಿಧಿಗಳಾಗಲೀ ಸಂತ್ರಸ್ತ ಜನರ ಪರವಾಗಿ ಧ್ವನಿ ಎತ್ತುತ್ತಿಲ್ಲ ಎಂದು ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವಕ್ತಾರ ರಮಾನಾಥ ವಿಟ್ಲ ಆರೋಪಿಸಿದರು. ಬಂಟ್ವಾಳ ತಾಲೂಕಿನಲ್ಲಿ ಅಗಾಧ ಪ್ರಮಾಣದಲ್ಲಿ ರೈತರಿಗೆ

ವಿಟ್ಲದಲ್ಲಿ ಮೊಂತಿ ಫೆಸ್ಟ್ ಸಂಭ್ರಮ

ಸೂರಿಕುಮೇರು ಸೈಂಟ್ ಜೋಸೆಪ್ ಚರ್ಚ್ ನಲ್ಲಿ ಕೋವಿಡ್ ನಿಯಮ ಪಾಲಿಸಿಕೊಂಡು ಬಹಳ ಸರಳ ರೀತಿಯಲ್ಲಿ ತೆನೆ ಹಬ್ಬ ಆಚರಿಸಲಾಯಿತು. ಫಾದರ್ ಗ್ರೆ ಗರಿ ಪಿರೇರಾ ದಿವ್ಯ ಬಲಿ ಪೂಜೆಯ ನೇತೃತ್ವ ವಹಿಸಿದ್ದರು. ಕಥೊಲಿಕ್ ಸಭಾ ಸೂರಿಕುಮೇರು ಬೊರಿಮಾರ್ ಘಟಕದ ಅಧ್ಯಕ್ಷರಾದ ಸ್ಟೀವನ್ ಮಾರ್ಟಿಸ್ ರವರ ಮಾರ್ಗದರ್ಶನದಲ್ಲಿ ಭಕ್ತಾದಿಗಳಿಗೆ ಕಬ್ಬು ಹಂಚಲಾಯಿತು. ಇನ್ನು ಫಾತಿಮಾ ಮಾತೆಯ ದೇವಾಲಯ ಪೆರುವಾಯಿಯಲ್ಲೂ ಕೂಡ ಕೋವಿಡ್ ಮುನ್ನಚ್ಚರಿಕೆಗಳೊಂದಿಗೆ ಸರಳಾವಾಗಿ ಮೋಂತಿ ಹಬ್ಬ

ವಾಲ್ತಾಜೆಯ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ: ಪೊಲೀಸರಿಂದ ದಾಳಿ

ವಿಟ್ಲ: ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೇರಳ ಗಡಿ ಭಾಗದಲ್ಲಿ ಸಾಲೆತ್ತೂರು ಗ್ರಾಮದ ವಾಲ್ತಾಜೆ ಪರಂಬೋಕು ಹೊಳೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ ಹತ್ತು ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಾಲೆತ್ತೂರು ಗ್ರಾಮದ ವಾಲ್ತಾಜೆ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರವಾಗಿ ಮರಳು ನಡೆಸಲು ತಯಾರಿ ಮಾಡುತ್ತಿದ್ದ ಬಗ್ಗೆ ದಾಳಿ ನಡೆಸಲಾಗಿದೆ. ಈ ಸಂದರ್ಭ ಸೊತ್ತುಗಳಾದ ಹಿಟಾಚಿ-1,

ರಾಜ್ಯಾದ್ಯಂತ ತಾಂಡವಾಡುತ್ತಿದೆ ಭ್ರಷ್ಟಾಚಾರ: ಮುರಳೀಧರ ರೈ ಮಠಂತಬೆಟ್ಟು ಆರೋಪ

ವಿಟ್ಲ: ರಾಜ್ಯ ಸರ್ಕಾರ ಅನುದಾನ ಕೊಡುವುದಕ್ಕೆ ಗುತ್ತಿಗೆದಾರರಿಂದ ಶೇ.15ಕ್ಕೂ ಮೇಲ್ಪಟ್ಟು ವಸೂಲಿ ಮಾಡುತ್ತಿದೆ. ಕಾಂಗ್ರೆಸ್ ಮುಕ್ತವಾದರೆ ಭ್ರಷ್ಟಾಚಾರ ಮುಕ್ತ ಎಂಬ ಹೇಳಿಕೆಯನ್ನು ಹೇಳಿರುವ ಪುತ್ತೂರು ಶಾಸಕರಿಗೆ ಇದು ಗಮನದಲ್ಲಿ ಇಲ್ಲವಾ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಪ್ರಪಂಚ ನೋಡಲ್ಲ ಎಂಬ ಗಾದೆ ಮಾತಿನಂತೆ ಬಿಜೆಪಿ ಸರ್ಕಾರದ ಪರಿಸ್ಥಿಯಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಮುರಳೀಧರ ರೈ ಮಠಂತಬೆಟ್ಟು ಹೇಳಿದರು. ವಿಟ್ಲದಲ್ಲಿ ಕರೆದ

ವಿಟ್ಲ: ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ವಿಟ್ಲ: ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ವಿರುದ್ಧ ಮಂಚಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು. ಎಸ್‍ಡಿಪಿಐ ಮಂಚಿ ಗ್ರಾಮ ಸಮಿತಿ ಕಾರ್ಯದರ್ಶಿ ಕಬೀರ್ ಮಂಚಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಲಾಯಿತು. ಮಂಚಿ ಪಂಚಾಯತ್ ಮುಂಭಾಗದಲ್ಲಿ ಓಲೆ ಉರಿಸಿ ಆಕ್ರೋಶ ವ್ಯಕ್ತಪಡಿಸಿಲಾಯಿತು. ಪ್ರತಿಭಟನೆ ಸಭೆಯಲ್ಲಿ ಎಸ್‍ಡಿಪಿಐ ದ.ಕ