ಉಡುಪಿ : ಅರಣ್ಯ ಇಲಾಖೆ ಮಂಗಳೂರು ವೃತ್ತ, ಕುಂದಾಪುರ ವಿಭಾಗದಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್ 5 ರಂದು ಕುಂದಾಪುರ-ಕೋಡಿ ಸೇತುವೆ ಬಳಿಯ ಶ್ರೀನಾಗ ಜಟ್ಟಿಗೇಶ್ವರ ದೇವಸ್ಥಾನದ ಎದುರು ಹಮ್ಮಿ ಕೊಂಡ ಕಾಂಡ್ಲಾ ಸಸಿ ನೆಡುವ ಕಾರ್ಯಕ್ರಮಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬೋಟ್ ಮೂಲಕ ತೆರಳಿ ನದಿ ನಡುವೆ ಬೆಳೆಸಿದ ಕಾಂಡ್ಲಾ ವನಗಳ ವೀಕ್ಷಣೆ ಮಾಡಿದ ಬಳಿಕ
ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ
ಅಂತರಾಷ್ಟ್ರೀಯ ಜೀವವೈವಿದ್ಯ ದಿನಾಚರಣೆ ಮತ್ತು ಪರಿಸರ ದಿನಾಚರಣೆ ಅಂಗವಾಗಿ ಗ್ರಾಮ ಪಂಚಾಯತಿ ಹಾವಂಜೆ ಇವರ ವತಿಯಿಂದ ಹಾವಂಜೆಯ ಹಕ್ಕಿಗಳ ಮಾಹಿತಿ ಫಲಕ ಅನಾವರಣ ಹಾಗೂ ಪಕ್ಷಿ ಸಂಕುಲಗಳ ವೀಕ್ಷಣೆ ಮತ್ತು ಸಂರಕ್ಷಣೆ ಜಾಗೃತಿ ಕಾರ್ಯಕ್ರಮ ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸನ್ನ ಎಚ್ ಹಕ್ಕಿಗಳ ಮಾಹಿತಿ ಫಲಕ ಅನಾವರಣಗೊಳಿಸಿ ಮಾತನಾಡಿ ಪರಿಸರ ಉಳಿಯಲು ಕಾರಣ ಜೀವ ಸಂಕುಲಗಳು.ಜನರು ನೆಟ್ಟ
ಬಂಟ್ವಾಳ ಪುರಸಭೆಯ ವತಿಯಿಂದ ನನ್ನ ಲೈಫ್ – ನನ್ನ ಸ್ವಚ್ಛನಗರ ಕಾರ್ಯಕ್ರಮದ ಅಂಗವಾಗಿ ಸ್ವಚ್ಛತಾ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕಂಬ ಬಳಿಕ ಪರ್ಲಿಯಾ ಹಾಗೂ ಕೊಡಂಗೆ ಬಳಿ ನಡೆಯಿತು. ಮಂಗಳೂರು ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕ ಅಭಿದ್ ಗದ್ಯಾಲ್ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಲೀನಾ ಬ್ರಿಟ್ಟೋ, ಆರೋಗ್ಯ ನಿರೀಕ್ಷಕ ರತ್ನ ಪ್ರಸಾದ್, ಪ್ರಮುಖರಾದ ವಸಂತಿ ಗಂಗಾಧರ್, ಎ. ದಾಮೋದರ ಸಂಚಯಗಿರಿ, ಮಚ್ಚೇಂದ್ರ
ಮೂಡುಬಿದಿರೆ: ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಚಾಲನೆ ನೀಡಲಾಯಿತು. ಮುಖ್ಯಾಧಿಕಾರಿ ಶಿವ ನಾಯ್ಕ್ ಪ್ರತಿಜ್ಞಾವಿಧಿ ಬೋಧಿಸಿದರು. ಪರಿಸರ ಅಭಿಯಂತರೆ ಶಿಲ್ಪಾ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ಸ್ವಚ್ಛ ಭಾರತ್ ಮಿಷನ್ ನಗರ- 2.0 ಯೋಜನೆಯಡಿ ನನ್ನ ಲೈಫ್ ನನ್ನ ಸ್ವಚ್ಛ ನಗರದ
1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇಂದಿನ ಜಾಗತೀಕರಣದಿಂದಾಗಿ ಪ್ರಕೃತಿಮಾತೆಯ ಒಡಲನ್ನು ಬಗೆಯಲಾಗುತ್ತಿದೆ, ಬಣ್ಣ ಬಣ್ನದ ಸಿಮೆಂಟ್ ಕಟ್ಟಡಗಳ ನಡುವೆ ಪ್ರಕೃತಿಯ ಹಸಿರು ಕಾಣೆಯಾಗುತ್ತಿದೆ,ಮಾಲಿನ್ಯವು
ಮಂಗಳೂರು: ಮುಂದಿನ ಪೀಳಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಅವರು ಇಂದು ಮಂಗಳೂರು ನಗರದ ಜಿಲ್ಲಾ ಪಂಚಾಯತ್ ಕಚೇರಿಯ ಆವರಣದಲ್ಲಿ , ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ಗಿಡ ನೇಡುವ ಮೂಲಕ ಉದ್ಘಾಟಿಸಿ ಮಾತನಾಡಿದರು. ಗಾಂಧೀಜಿಯವರು ನುಡಿದಂತೆ, ಹಿಂದಿನವರು ನಮಗೆ ಬಿಟ್ಟುಕೊಟ್ಟು ಹೋದ