ಉಳ್ಳಾಲ: ಭೂದಾಖಲೆಗಳ ನಿರ್ದೇಶಕರ ಕಚೇರಿ, ಉಳ್ಳಾಲ ತಾಲೂಕು ಸಹಾಯಕ ನಿರ್ದೇಶಕರ ಕಚೇರಿಗಳಿಗೆ ಲೋಕಾಯುಕ್ತ ದಾಳಿ
![](http://v4news.com/wp-content/uploads/2024/06/vlcsnap-2024-06-30-11h56m22s849.png)
ಉಳ್ಳಾಲ: ಭ್ರಷ್ಟಾಚಾರ, ಕರ್ತವ್ಯಲೋಪ, ಕಡತ ವಿಲೇವಾರಿಯಲ್ಲಿ ಹಿನ್ನೆಡೆ ದೂರುಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳೂರು ಭೂದಾಖಲೆಗಳ ಉಪನಿರ್ದೇಶಕರ ಕಚೇರಿ, ನಾಟೆಕಲ್ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಇಬ್ಬರು ಸರ್ವೇಯರ್ಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಕಡತಗಳನ್ನು ತನಿಖೆಗೆ ಪಡೆದುಕೊಂಡಿದ್ದಾರೆ.
![](https://v4news.com/wp-content/uploads/2024/06/vlcsnap-2024-06-30-11h56m34s644.png)
ಮಂಗಳೂರು ತಾಲೂಕು ಕಚೇರಿಯಲ್ಲಿರುವ ಭೂದಾಖಲೆಗಳ ಉಪನಿರ್ದೇಶಕರ ಕಚೇರಿ ಗೆ ಬೆಳಿಗ್ಗೆ ದಾಳಿ ನಡೆಸಿದ ಲೋಕಾಯುಕ್ತ ತಂಡ ಮಧ್ಯಾಹ್ನ ನಂತರ ನಾಟೆಕಲ್ ನಲ್ಲಿರುವ ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಸಿಕ್ಕ ಮಾಹಿತಿ ಆಧಾರದಡಿ ಲೈಸೆನ್ಸ್ ಹೊಂದಿದ ಸರ್ವೇಯರ್ ಹಾಗೂ ಸರಕಾರಿ ಸರ್ವೇಯರ್ ಕೃಷ್ಣಮೂರ್ತಿ ಎಂಬವರ ಬಂಟ್ವಾಳದಲ್ಲಿರುವ ಮನೆಗೆ ತೆರಳಿ ತಂಡ ಪರಿಶೀಲನೆ ನಡೆಸಿದೆ. ತಡರಾತ್ರಿ 7.30 ವರೆಗೂ ತಂಡ ಪರಿಶೀಲನೆ ನಡೆಸಿ, ಕೆಲ ಕಡತಗಳನ್ನು ವಶಪಡಿಸಿಕೊಂಡಿದ್ದಾರೆ.