ಬೆಳ್ಳಾರೆಯಲ್ಲಿ ವೇದಾಮೃತ ಚಿಕಿತ್ಸಾಲಯ ಆರಂಭ

ಸುಳ್ಯ ತಾಲೂಕಿನ ಬೆಳ್ಳಾರೆಯ ಕೆಳಗಿನ ಪೇಟೆ ಸಿ.ಎ.ಬ್ಯಾಂಕಿನ ಹತ್ತಿರ ಹರ್ಷ ಕಾಂಪ್ಲೆಕ್ಸ್ ನಲ್ಲಿ ಡಾ| ಕಾವ್ಯಾ ಜೆ.ಎಚ್ ಅವರ ವೇದಾಮೃತ ಆಯುರ್ವೇದ ಚಿಕಿತ್ಸಾಲಯವು ಅ.10 ರಂದು ಇಂದು ಶುಭಾರಂಭಗೊಂಡಿದೆ

ವೇದಾಮೃತ ಚಿಕಿತ್ಸಾಲಯದಲ್ಲಿ ಪ್ರಮುಖವಾಗಿ ಸೋರಿಯಾಸಿಸ್, ಏಕ್ಸಿಮಾ, ಮೊಡವೆ ಮುಂತಾದ ಚರ್ಮರೋಗಗಳು, ರುಮಾಟೈಡ್ ಆರ್ಥ್ರೈಟಿಸ್, ಆಸ್ಟಿಯೋ ಆರ್ಥ್ರೈಟಿಸ್, ಕತ್ತುನೋವು, ಸೊಂಟನೋವು, ಮಂಡಿನೋವು, ಪಾರ್ಶ್ವವಾಯು, ಬೆಲ್ಸ್ ಪಾಲ್ಸಿ, ಮಸ್ಕ್ಯುಲರ್ ದಿಸ್ಟ್ರೋಫಿ, ಸಾಯಾಟಿಕ, ಗುಲಿಯನ್ ಬರ್ರಿ ಸಿಂಡ್ರೋಮ್, ಸೆರೆಬ್ರಲ್ ಪಾಲ್ಸಿ, ಮೈಗ್ರೈನ್, ಸೈನಸೈಟಿಸ್, ಕೂದಲ ಉದುರುವಿಕೆ, ಬೊಕ್ಕತಲೆ, ಬಾಲನೆರೆ, ಅನೀಮಿಯಾ, ಪೈಲ್ಸ್, ಫಿಸ್ಟುಲಾ, ಪಿತ್ತಕೋಶದ ಕಲ್ಲು, ಮೂತ್ರಪಿಂಡದಲ್ಲಿನ ಕಲ್ಲು, ಲಿವರ್, ಕಿಡ್ನಿ, ಹಾರ್ಟ್, ಶ್ವಾಸಕೋಶ ಸಂಬಂಧಿ ಖಾಯಿಲೆಗಳು, ಐ ಬಿ ಎಸ್ (ಗ್ರಹಣಿ ರೋಗ), ಥೈರಾಯ್ಡ್, ಮಧುಮೇಹ, ರಕ್ತದೊತ್ತಡ, ಬೊಜ್ಜು, ಬಿಳಿಸೆರಗು, ಪಿ ಸಿ ಒ ಡಿ, ಬಂಜೆತನ, ತಪ್ಪಾದ ಜೀವನ ಶೈಲಿಯಿಂದ ಉಂಟಾಗುವ ಖಾಯಿಲೆಗಳು, ವೃದ್ಧಾಪ್ಯ ಸಂಬಂಧಿ ಖಾಯಿಲೆಗಳು ಮುಂತಾದ ದೀರ್ಘಕಾಲೀನ ವ್ಯಾಧಿಗಳಿಗೆ ಅತ್ಯುತ್ಕೃಷ್ಟ ಪುರಾತನ ಆಯುರ್ವೇದ ಔಷಧಿ ಹಾಗೂ ಚಿಕಿತ್ಸೆಗಳನ್ನು ನೀಡಲಾಗುವುದು. ಅಲ್ಲದೆ ಕಾಲೋಚಿತ ಖಾಯಿಲೆಗಳನ್ನು ತಡೆಗಟ್ಟಲು ಮತ್ತು ಆರೋಗ್ಯದ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಸೂಕ್ತ ಪಂಚಕರ್ಮ ಚಿಕಿತ್ಸೆಗಳು, ಗರ್ಭಿಣಿಯರಿಗೆ, ಮಕ್ಕಳಿಗೆ ಮತ್ತು ಬಾಣಂತಿಯರಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳು, ರೋಗೋಚಿತ ಪಥ್ಯಪಾಲನೆ (ಡಯೆಟ್) ಸಲಹೆಗಳನ್ನು ನೀಡಲಾಗುವುದುಅಲ್ಲದೆ ಪ್ರತಿ ತಿಂಗಳ ಪುಷ್ಯ ನಕ್ಷತ್ರದಂದು 16 ವರ್ಷದೊಳಗಿನ ಮಕ್ಕಳಿಗೆ ಸ್ವರ್ಣ ಪ್ರಾಶಾನ ನೀಡಲಾಗುವುದು.ಮಾರ್ಗಶಿರ ಪೌರ್ಣಮಿಯಂದು ಕೆಮ್ಮು, ಅಲರ್ಜಿ, ದಮ್ಮು, ಅಸ್ತಮಾ ಖಾಯಿಲೆಗಳಿಗೆ ಪಾರಂಪರಿಕ ಆಯುರ್ವೇದ ಔಷಧಿ ನೀಡಲಾಗುವುದು ಎಂದು ಡಾ.ಕಾವ್ಯಾ ಜೆ.ಎಚ್‌. ತಿಳಿಸಿದ್ದಾರೆ.( ವೈದ್ಯರ ಸಂಪರ್ಕ -9741439354) ಈ ಸಂಧರ್ಭ ದಲ್ಲಿ ಪ್ರಮುಖ ರಾದ dr. ಕಾವ್ಯ ತಂದೆ ತಾಯಿ ಚಿನ್ನಮ್ಮ ಹೊನ್ನಪ್ಪ ಗೌಡ, ನಾ. ಸೀತಾರಾಮ, ನೆಕ್ರಪಾಡಿ ಕೃಷ್ಣಪ್ಪ ಗೌಡ, ಮಂಜಿಕೋಡಿ ಕುಶಾಲಪ್ಪ ಗೌಡ ಚಂದ್ರಕೋಲ್ಚಾರ್, ಚಂದ್ರಶೇಖರ ಪನ್ನೆ ರಾಮಕೃಷ್ಣ ಭಟ್ ಕುರು ಬುಡೇಳು ಸತೀಶ್ ಕೇಮನಬಳ್ಳಿ, ದಾಮೋದರ್ ಜಬಳೆ ಕೊರಗಪ್ಪ ಗೌಡ ಪೂಜಾರಿಮನೆ ,ಚಿದಾನಂದ ಮಾಜಿಕೋಡಿ,ಅವಿನಾಶ್ ಕುರುಂಜಿ, ಪದ್ಮನಾಭ ಬೀಡು ಪ್ರಮೋದ್ ಚಕೋಟೆ, ಕವಿತಾ ಜಬಳೆ ,ಮಾಧವ ಕಾಲಮನೆ, ಕಿಶನ್ ಜಬಳೆ,ರೋಹಿತಕ್ಷ ಉತ್ರಬೆ ,ಶಿವರಾಮ್ ಭಟ್ ಉಪಸ್ಥಿತರಿದ್ದರು

vip's last bench

Related Posts

Leave a Reply

Your email address will not be published. Required fields are marked *