ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿ ವೈ ಎಫ್ಐ ಜಿಲ್ಲಾ ಅಧ್ಯಕ್ಷರು B K ಇಮ್ತಿಯಾಜ್ ತೊಕ್ಕೋಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ , ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ಬಹು ದೊಡ್ಡ ಗುಂಡಿಗಳಿಂದ ಕೂಡಿದ್ದು ಆ ಗುಂಡಿಗಳಲ್ಲಿ ಮಳೆ ನೀರು ನಿಂತು ವಾಹನ ಸವಾರರ ಸುಗಮ ಸಂಚಾರಕ್ಕೆ ಅಡಚಣೆಯಾಗಿವೆ.
ಮಾತ್ರವಲ್ಲ ಅಪಘಾತಗಳು ಸಂಭವಿಸಿ ಪ್ರಾಣಹಾನಿಗಳಾಗುವ ಸಾಧ್ಯತೆಗಳು ಬಹಳಷ್ಟಿವೆ. ಅದೇ ರೀತಿ ಈ ರಸ್ತೆಯಲ್ಲಿ ದಿನವಿಡೀ ವಾಹನ ಸಂಚಾರ ದಟ್ಟಣೆ ವಿಪರೀತವಾಗಿದ್ದು ವಿಶವ್ವಿದ್ಯಾಲಯಕ್ಕೆ, ಮೆಡಿಕಲ್ ಕಾಲೇಜುಗಳಿಗೆ, ಆಸ್ಪತ್ರೆಗಳಿಗೆ, ಐಟಿ ಕಂಪೆನಿಗಳಿಗೆ ತೆರಳುವ ಜನ ಸಾಮಾನ್ಯರು, ವಿದ್ಯಾರ್ಥಿಗಳು, ರೋಗಿಗಳು ದಿನನಿತ್ಯ ಸಮಸ್ಯೆಗಳನ್ನು ಅನುಭವಿಸುವಂತಾಗಿದೆ. ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಪ್ರಾಣ ರಕ್ಷಿಸಲು ದಾವಿಸುವ ಜೀವ ರಕ್ಷಕ ವಾಹನಗಳ ಸಮಯಕ್ಕೆ ಸರಿಯಾಗಿ ತಲುಪಲು ಈ ಕೆಟ್ಟು ಹೋಗಿರುವ ರಸ್ತೆಗಳಿಂದ ಸಾಧ್ಯವಾಗದೇ ಪ್ರಾಣ ಕಳೆದುಕೊಳುವ ಸ್ಥಿತಿ ನಿರ್ಮಾಣಗೊಂಡಿದೆ.
ಈ ಹಿನ್ನಲೆಯಲ್ಲಿ ಜನಸಾಮಾನ್ಯರ ಬಹುಮುಖ್ಯ ರಸ್ತೆಯಾಗಿರುವ ತೊಕ್ಕೊಟ್ಟಿನಿಂದ ಕೊಣಾಜೆವರೆಗೆ ಕೆಟ್ಟು ನಿಂತಿರುವ ರಸ್ತೆಯನ್ನು ಕೂಡಲೇ ಸರಿಪಡಿಸದಿದ್ದರೆ ಶಾಸಕರ ಮನೆಯ ಮುಂದೆ ಬ್ರಹತ್ ಪ್ರತಿಭಟನೆಯನ್ನು ಮಾಡಲಾಗುದೆಂದು ಹೆಚ್ಚರಿಸಿದರು ಪ್ರತಿಭಟನೆಯನ್ನು ಉದ್ದೇಶಿಸಿ adv ನಿತಿನ್ ಕುತ್ತಾರ್ ಮಾತಾಡಿ ರಸ್ತೆಯ ಗುತ್ತಿಗೆ ಪಡೆದವರು ಅಧಿಕಾರಿ ವರ್ಗದವರ ಮಾತಿಗೆ ಬೆಲೆ ಕೊಡದೆ ಬೇಕಾಬಿಟ್ಟಿ ವರ್ತಿಸುವ ಸ್ಥಿತಿ ನಿರ್ಮಾಣವಾಗಲು ಶಾಸಕರ ಬೇಜವಾಬ್ದಾರಿ ನಡೆಯೆ ಕಾರಣ ಕೂಡಲೇ ಶಾಸಕರು ಈ ರಸ್ತೆ ದುರಸ್ಥಿ ನ್ನು ನಡೆಸಲು ಮುಂದಾಗಬೇಕು ಎಂದರು. ಪ್ರತಿಭಟನೆಯಲ್ಲಿ ವಲಯ ಅಧ್ಯಕ್ಷರು ರಫೀಕ್ ಹರೇಕಾಳ,ಡಾ ಜೀವನ್ ರಾಜ್, ರಝಾಕ್ ಮೊಂಟೆಪದವು, ಪ್ರಜ್ಞೆಶ್ ಚಂಬುಗುಡ್ಡೆ , ಸಂಕೇತ್ ಕಂಪ,ಕಟ್ಟಡ ಕಾರ್ಮಿಕರ ಮುಖಂಡರು ಇಬ್ರಾಹಿಂ ಮದಕ, ಜಯರಾಮ್ ತೇವುಲ,SFI ಮುಖಂಡರು ವಿಕಾಸ್ ಕುತ್ತಾರ್,ಬಶೀರ್ ಹರೇಕಳ,ಭಾಗವಹಿಸಿದ್ದು ಸುನಿಲ್ ತೇವುಲ ಸ್ವಾಗತಿಸಿ ರಝಕ್ ಮುಡಿಪು ವಂದಿಸಿದರು.
ತೊಕ್ಕೊಟ್ಟಿನಿಂದ ಕೊಣಾಜೆಗೆ ಮುಖ್ಯ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ DYFI ನೇತ್ರತ್ವದಲ್ಲಿ ರಸ್ತೆ ತಡೆ ಪ್ರತಿಭಟನಾ ಪ್ರದರ್ಶನ
RELATED ARTICLES
