ಕಡಬ : ಆಲ್ಟೋ ಕಾರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸಂಪೂರ್ಣ ಸುಟ್ಟು ಹೋದ ಘಟನೆ ಬುಧವಾರ ಸಂಜೆ ವೇಳೆ ಬಳ್ಪ ಸಮೀಪ ಸಂಭವಿಸಿದೆ. ಪಂಜ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಬಳ್ಪ ಎಂಬಲ್ಲಿಯ ಪಾದೆ ಬಳಿ ಘಟನೆ ಸಂಭವಿಸಿದೆ. ಪಂಜದ ಕೃಷ್ಣನಗರ ಕೇಶವ ಆಚಾರಿ ಎಂಬವರು ತಮ್ಮ ಕಾರಿನಲ್ಲಿ ಏನೆಕಲ್ಲು ಕಡೆಯಿಂದ ಕೆಲಸ ಮುಗಿಸಿ ಬರುತ್ತಿರುವಾಗ ಪಾದೆ ಬಳಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರಿನಿಂದ ಇಳಿದು ನೋಡಬೇಕು ಎನ್ನವ ಕ್ಷಣ ಮಾತ್ರದಲ್ಲಿ ಕಾರು ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ
ಆಕಸ್ಮಿಕ ಬೆಂಕಿ : ಸುಟ್ಟು ಹೋದ ಕಾರು
RELATED ARTICLES
