HomeFresh Newsಆಳ್ವಾಸ್ ಪ್ರಗತಿ ಯಶಸ್ಸಿಗೆ ಸಮುದಾಯಗಳ ಸಹಭಾಗಿತ್ವ ಅತ್ಯಗತ್ಯ : ನಾಯಕತ್ವ ಸಮ್ಮಿಲನದಲ್ಲಿ ವಿವೇಕ್ ಆಳ್ವ

ಆಳ್ವಾಸ್ ಪ್ರಗತಿ ಯಶಸ್ಸಿಗೆ ಸಮುದಾಯಗಳ ಸಹಭಾಗಿತ್ವ ಅತ್ಯಗತ್ಯ : ನಾಯಕತ್ವ ಸಮ್ಮಿಲನದಲ್ಲಿ ವಿವೇಕ್ ಆಳ್ವ

ಮೂಡುಬಿದಿರೆಯಲ್ಲಿ ಆಗಸ್ಟ್ 7 ಮತ್ತು 8 ರಂದು ನಡೆಯಲಿರುವ ಬೃಹತ್ ಉಚಿತ ಉದ್ಯೋಗ ಮೇಳ `ಆಳ್ವಾಸ್ ಪ್ರಗತಿ- 2026’ರ ಪೂರ್ವಭಾವಿಯಾಗಿ ಬುಧವಾರ ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕಾಲೇಜಿನಲ್ಲಿ ‘ನಾಯಕತ್ವ ಸಮ್ಮಿಲನ’ ನಡೆಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಮಾತನಾಡಿ ‘ಪ್ರತಿ ವ್ಯಕ್ತಿಯ ಯಶಸ್ಸಿಗೆ ಗುರು ಮತ್ತು ಗುರಿ ಮುಖ್ಯ. ಬದುಕಿನಲ್ಲಿ ಹಿರಿಯರ ಮೌಲ್ಯಗಳೇ ಗುರು. ಯುವ ಸಮುದಾಯದ ಅಭ್ಯುದಯವೇ ಗುರಿ. ಆ ಮೂಲಕ ಸಮಾಜದ ‘ಪ್ರಗತಿ’ಯೇ ಆಳ್ವಾಸ್ ಆಶಯ. ಅದರ ಯಶಸ್ಸಿಗೆ ಸಮುದಾಯಗಳ ಸಹಭಾಗಿತ್ವ ಅತ್ಯಗತ್ಯ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿವಿಧ ಸಮುದಾಯ, ಧಾರ್ಮಿಕ, ರಾಜಕೀಯ ಸೇರಿದಂತೆ ಹಲವಾರು ಸಂಘಟನೆಗಳ ಪ್ರಮುಖರ ಜೊತೆ ಮಾತನಾಡಿದ ಅವರು, ‘ಗ್ರಾಮೀಣ ಭಾಗದ ಯುವ ಸಮುದಾಯಕ್ಕೆ ಔದ್ಯೋಗಿಕ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಸಾಮಾಜಿಕ, ಆರ್ಥಿಕವಾಗಿ ಸಶಕ್ತೀಕರಣಗೊಳಿಸಲು ‘ಆಳ್ವಾಸ್ ಪ್ರಗತಿ’ಯು 19 ವರ್ಷಗಳ ಹಿಂದೆ ಕೇವಲ 38 ಉದ್ಯೋಗದಾತ ಕಂಪೆನಿಗಳ ಮೂಲಕ ಆರಂಭಗೊಂಡಿದ್ದು, ಪ್ರಸ್ತುತ 300ಕ್ಕೂ ಅಧಿಕ ಕಂಪೆನಿಗಳು ಪಾಲ್ಗೊಳ್ಳುವ ವರೆಗೆ ಬೆಳೆದು ಬಂದಿದೆ. ಈ ಹಾದಿಯಲ್ಲಿ ಆಳ್ವಾಸ್ ಜೊತೆ ಸಮಾಜದ ಮುಖಂಡರು, ಯುವಜನರ ಕೊಡುಗೆ ಬಹುದೊಡ್ಡದು’ ಎಂದು ಕೃತಜ್ಞತೆ ವ್ಯಕ್ತಪಡಿಸಿದರು.
ಕಿರಿಯ ಮತ್ತು ಹಿರಿಯ ತಲೆಮಾರುಗಳನ್ನು ಬೆಸೆಯುವ ಕಾರ್ಯವನ್ನು ನಾವು ಮಾಡಬೇಕಾಗಿದೆ. ಆ ಮೂಲಕ ಕುಟುಂಬಗಳು, ಸಮಾಜ ಸೇರಿದಂತೆ ದೇಶದ ಅಭಿವೃದ್ಧಿ ಸಾಧ್ಯ. ‘ಆಳ್ವಾಸ್ ಪ್ರಗತಿ’ಯೂ ‘ಮೌಲ್ಯ’ ಮತ್ತು ‘ಸಾಮರ್ಥ್ಯ’ದ ಸಮಾಗಮದಂತೆ ಹಿರಿಯ-ಕಿರಿಯ ತಲೆಮಾರುಗಳ ನಡುವಿನ ಸೇತುವೆೆ’ ಎಂದರು.
‘ಸುಮಾರು 800ರಷ್ಟು ಮಾನವ ಸಂಪನ್ಮೂಲ ಅಧಿಕಾರಿಗಳು ಬಂದು, ಯಾವುದೇ ಮಧ್ಯವರ್ತಿಗಳ, ಲಾಬಿಗಳ ಸಂಪರ್ಕಇಲ್ಲದೇ ನೇಮಕಾತಿ ನೇರ ನೇಮಕಾತಿ ಮಾಡುವ ಪಾರದರ್ಶಕ ವ್ಯವಸ್ಥೆಯನ್ನು ‘ಆಳ್ವಾಸ್ ಪ್ರಗತಿ’ ರೂಪಿಸಿದೆ. ಅತ್ಯುತ್ತಮ ಕಂಪೆನಿಗಳು ವಿದ್ಯಾರ್ಥಿಗಳ ಬಳಿ ಬರುವಂತಾಗಬೇಕು. ಸರ್ಕಾರಿ, ಗ್ರಾಮೀಣ ಸೇರಿದಂತೆ ಎಲ್ಲ ಕಾಲೇಜಿನ ವಿದ್ಯಾರ್ಥಿಗಳಿಗೆ ಅವಕಾಶ ಸಿಗಬೇಕು’ಎಂದು ಆಶಯ ವ್ಯಕ್ತಪಡಿಸಿದರು.
ಸಮುದಾಯಗಳ ಸರ್ವ ಸಹಕಾರ
ಅನುಭವ ಹಂಚಿಕೊAಡ ಸಮಾಜ ಸೇವಕ, ಉದ್ಯಮಿ ಕಾರ್ಕಳದ ಅವಿನಾಶ್ ಶೆಟ್ಟಿ, ‘ನಾನು ಹತ್ತು ವರ್ಷಗಳ ಹಿಂದೆ ಪ್ರಗತಿ ಮೂಲಕ ಉದ್ಯೋಗ ಪಡೆದೆ. ಆಗ ಕೆಲಸಕ್ಕೆ ಸೇರಲು ನನಗೆ ಹಿಂಜರಿಕೆ ಆಗಿತ್ತು. ಆದರೆ, ಉದ್ಯೋಗದ ಎರಡು ವರ್ಷಗಳ ಅನುಭವವೇ ನನ್ನನ್ನು ಇಂದು ಇಲ್ಲಿಯವರೆಗೆ ಬೆಳೆಸಿದೆ’ ಎಂದು ನೆನಪಿಸಿಕೊಂಡರು. ಶಿಕ್ಷಣ, ಸಂಸ್ಕೃತಿ, ಕ್ರೀಡೆ, ಉದ್ಯೋಗ ಸೇರಿದಂತೆ ಸಮಾಜದ ಅಭಿವೃದ್ಧಿಯ ಕಾರ್ಯವನ್ನು ‘ಆಳ್ವಾಸ್’ ಮಾಡುತ್ತಿದ್ದು, ‘ಆಳ್ವಾಸ್ ಪ್ರಗತಿ’ಯ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡುವುದಾಗಿ ಯುವ ಮುಖಂಡರು, ಪ್ರಮುಖರು ಭರವಸೆ ನೀಡಿದರು.

ಪ್ರಾಧ್ಯಾಪಕ ವಿನಾಯಕ ಗಾಳಿಮನೆ ಕಾರ್ಯಕ್ರಮ ನಿರೂಪಿಸಿದರು.

Sudha Interior new 1

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments