HomeFresh Newsಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಉಳ್ಳಾಲದಲ್ಲಿ ಯುವಕನಿಗೆ ಚೂರಿ ಇರಿತ

ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ವ್ಯಕ್ತಿಯೊಬ್ಬರಿಗೆ ಉಳ್ಳಾಲದಲ್ಲಿ ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ನಡೆದಿದೆ.

ಉಳ್ಳಾಲದಲ್ಲಿ ಗ್ಯಾಸ್ ಸ್ಟವ್‌ಗೆ ಸಂಬಂಧಿಸಿದ ಸಾಮಗ್ರಿಗಳನ್ನು ಹೊಂದಿರುವ ಅಂಗಡಿ ಮಾಲಕ ಹರೀಶ್ ಗಾಣಿಗ ಚೂರಿ ಇರಿತಕ್ಕೊಳಗಾಗಿರುವವರು. ಆರೋಪಿಯು ಈ ಹಿಂದೆ ಹರೀಶ್ ಜೊತೆ ಕ್ಷುಲ್ಲಕ ವಿಷಯಕ್ಕೆ ಸಂಬಂಧಿಸಿ ಗಲಾಟೆ ಮಾಡಿದ್ದನೆನ್ನಲಾಗಿದೆ. ಈ ಬಗ್ಗೆ ಹರೀಶ್ ಗಾಣಿಗ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಇದರಿಂದ ಕೋಪಗೊಂಡ ಆರೋಪಿ ಮಂಗಳವಾರ ಹರೀಶ್ ರಿಗೆ ಚೂರಿಯಿಂದ ಇರಿದು ಪರಾರಿಯಾಗಿದ್ದನು. ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments