ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ. ಭಾರೀ ಗಾಳಿ ಮಳೆಗೆ ಬಳ್ಪ ಗ್ರಾಮದ ನೇರ್ಪು ಪರಮೇಶ್ವರ ಗೌಡ ಎಂಬವರ ಮನೆ ಮೇಲೆ ಮರವೊಂದು ಉರುಳಿ ಬಿದ್ದು ಅಪಾರ ಹಾನಿಯಾದ ಘಟನೆ ನಡೆದಿದೆ.ಮನೆಯೊಳಗಿದ್ದ ಪರಮೇಶ್ವರ ಗೌಡರ ಪತ್ನಿ ಸೀತಮ್ಮ ರವರಿಗೆ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


