ಅಕ್ರಮ ಗಾಂಜಾ ಸಾಗಾಟ ಪ್ರಕರಣ: ಇಬ್ಬರ ಬಂಧನ

ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್  ಡಿಸಿಪಿ ಹರಿರಾಂ ಶಂಕರ್ ಹೇಳಿದರು.

ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್  ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್  ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿದಾಗ ಲಿಂಬೆ ಹಣ್ಣು ಸಾಗಾಟ ವಾಹನದಲ್ಲಿ 40 ಕೇಜಿ ಗಾಂಜಾ ಪತ್ತೆಯಾಗಿದ್ದು. ಕಾಸರಗೋಡು ಮೂಲದ ಶಿಹಾಬುದ್ದೀನ್ ಮತ್ತು ಲತೀಫ್ ಇಬ್ಬರನ್ನು ಬಂಧಿಸಲಾಗಿದೆ ಪಿಕಪ್ ಮತ್ತು 40 ಕೇಜಿ ಗಾಂಜಾ ಸೇರಿ ಒಟ್ಟು 11ಲಕ್ಷದ 17 ಸಾವಿರ ಮೌಲ್ಯದ ವಸ್ತುಗಳು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಹೇಳಿದರು.

Related Posts

Leave a Reply

Your email address will not be published.