ಉಳ್ಳಾಲ: ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆ

ಉಳ್ಳಾಲ ನೇತ್ರಾವತಿ ನದಿ ಸಮೀಪದಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಇಂದು ಪತ್ತೆಯಾಗಿದೆ. ಮೃತ ಯುವಕನನ್ನು ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ ಎಂದು ಗುರುತಿಸಲಾಗಿದ್ದು, ಇತನ ದ್ವಿಚಕ್ರ ವಾಹನ ಉಳ್ಳಾಲದ ನೇತ್ರಾವತಿ ನದಿಯ ಸೇತುವೆ ಬಳಿ ಪತ್ತೆಯಾಗಿತ್ತು.

ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದರು. ಶನಿವಾರ ಬೆಳಗ್ಗೆ ನೇತ್ರಾವತಿ ಸೇತುವೆ ಬಳಿ ಹಫೀಝ್‌ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿತ್ತು. ಅದರಂತೆ ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ಹುಡುಕಾಟ ನಡೆಸಿದ್ದರು. ಆದರೆ ಇಂದು ಬೆಳಿಗ್ಗೆ ಕೋಟೆಪುರ – ಬೆಂಗ್ರೆಯ ಅಳಿವೆ ಬಾಗಿಲಿನಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ.

Related Posts

Leave a Reply

Your email address will not be published.