ಕರ್ತವ್ಯ ನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ದೊಣ್ಣೆಯಿಂದ ಹಲ್ಲೆ
ಕರ್ತವ್ಯ ನಿರತ ಮೆಸ್ಕಾಂ ಸಿಬಂದಿಗಳ ಮೇಲೆ ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹಲ್ಲೆ ನಡೆಸಿದ ಘಟನೆ ಅ 15 ರಂದು ಸಂಜೆ ಉಪ್ಪಿನಂಗಡಿ ಮೆಸ್ಕಾಂ ಕಚೇರಿಯೊಳಗಡೆ ನಡೆದಿದೆ.
ಉಪ್ಪಿನಂಗಡಿ ಮೆಸ್ಕಾಂ ಕಚೇರಿಯ ಸಿಬಂದಿಗಳಾದ ಜೂನಿಯರ್ ಲೈನ್ ಮ್ಯಾನ್ ವಿತೇಶ್ ಮತ್ತು ಸಿಬ್ಬಂದಿ ಸತೀಶ್ ಹಿರೆಬಂಡಾಡಿ ಹಲ್ಲೆಗೊಳಗಾದವರು.
ಹಲ್ಲೆ ಕೃತ್ಯದ ಬಗ್ಗೆ ಮೆಸ್ಕಾಂ ಕಚೇರಿಗಳು ಮಾಹಿತಿ ನೀಡಿದ್ದು ಅಲ್ಲಿಗೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಹೇಳಿಕೆ ಪಡೆದಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.