ಡಿ.6ರಂದು ಡಾ.ಕದ್ರಿ ಗೋಪಾಲನಾಥ್‍ರವರ ಜನ್ಮದಿನ ಆಚರಣೆ

ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್‍ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು.
ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ ತಂದೆಯವರಾದ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನವಾದ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಅವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ಕಾರ್ಯಕ್ರಮವನ್ನು ಆಯೋಜಸಿದ್ದೇವೆ. ಸಂಗೀತ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿರುವ ಸಾಧಕರಿಗೆ ಡಾ.ಕದ್ರಿ ಗೋಪಾಲನಾಥ್ ಲೈಫ್ ಟೈಮ್ ಅಚಿವ್‍ಮೆಂಟ್ ಅವಾರ್ಡ್ ನೀಡಲಿದ್ದೇವೆ, ಅಲ್ಲದೇ ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಸೇರಿದಂತೆ ತಂದೆಯವರ ಅಭಿಮಾನಿಗಳು ಮತ್ತು ಶಿಷ್ಯಂದಿರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

Related Posts

Leave a Reply

Your email address will not be published.