ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲ್ಯದ ಅಭಿವೃದ್ಧಿ ಇಂದಿನ ಅಗತ್ಯ – ಖಾಸಿಮ್ ಅಹ್ಮದ್ ಹೆಚ್.ಕೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ: ಫೌಂಡೇಶನ್’ನ ಸ್ಥಾಪಕಾಧ್ಯಕ್ಚ ಖಾಸಿಮ್ ಅಹ್ಮದ್ ಹೆಚ್.ಕೆ. ಅಭಿಪ್ರಾಯಪಟ್ಟರು.

ಅವರು ನೀಟ್/ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಇಂದು ಹಮ್ಮಿಕೊಂಡಿದ್ದ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಅವಾಸ್ತವ ಭ್ರಮೆ ಮತ್ತು ಆಕರ್ಷಣೆಗಳಿಗೆ ಒಳಗಾಗದೆ ವಿದ್ಯಾರ್ಥಿಗಳ ಆಸಕ್ತಿ ಮತ್ತು ಸಾಮರ್ಥ್ಯದ ಮೇಲೆ ಪಕ್ಕಾ ಕರಿಯರ್ ಪ್ಲಾನಿಂಗ್ ಮಾಡಿಕೊಂಡು ಕಲಿತಾಗ ಮಾತ್ರ ಯುವ ಸಮೂಹ ಗೊಂದಲಗಳಿಂದ ಹೊರಬರಬಹುದು ಎಂದು ಖಾಸಿಮ್ ತಿಳಿಸಿದರು.

ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ನಿರ್ದೇಶಕ ಉಮರ್ ಯು.ಹೆಚ್. ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ ಮತ್ತು ವಿಧಾನಗಳ ಕುರಿತಂತೆ ಸಮಗ್ರ ಮಾರ್ಗದರ್ಶನ ನೀಡಿದರು.

Related Posts

Leave a Reply

Your email address will not be published.