ಪಡುಬಿದ್ರಿಯ ಬೀಡು ಬಳಿ ಕಾರು ಢಿಕ್ಕಿ:ಅಪರಿಚಿತ ಭಿಕ್ಷುಕ ಸಾವು

ಪಾದಚಾರಿ ಅಲೆಮಾರಿಯಂತ್ತಿದ್ದ ಯುವಕನೊರ್ವನಿಗೆ ಪಡುಬಿದ್ರಿ ಬೀಡು ಬಳಿ ರಾತ್ರಿ ಕಾರೊಂದು ಢಿಕ್ಕಿಯಾದ ಪರಿಣಾಮ ಆ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಸುಮಾರು 35-40ರ ಹರೆಯದ ವ್ಯಕ್ತಿಯಾಗಿದ್ದ ಯುವಕ ರಸ್ತೆ ದಾಟುವಾಗ ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ಕಾರು ಡಿಕ್ಕಿಯಾಗಿದೆ. ಅಪಘಾತ ತೀವೃತೆಗೆ ತಲೆಗೆ ಗಂಭೀರ ಗಾಯಗಳಾಗಿ ಸ್ಥಳದಲ್ಲೇ ಮೃತನಾಗಿದ್ದಾನೆ. ಈತ ಈ ಪರಿಸರದಲ್ಲಿ ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ಎನ್ನಲಾಗಿದೆ. ಮೃತದೇಹವನ್ನು ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಪಡುಬಿದ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ತನಿಖೆ ನಡೆಸುತ್ತಿದ್ದಾರೆ.

 

Related Posts

Leave a Reply

Your email address will not be published.