ಪುತ್ತೂರಿನಲ್ಲಿಂದು ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಶಿಬಿರ

ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ ಕುರಿತಂತೆ ಮಾರ್ಗದರ್ಶನ ನೀಡಿದರುಪುತ್ತೂರು ಕಮ್ಯುನಿಟಿ ಸೆಂಟರ್’ನ ಮುಖ್ಯಸ್ಥ ಹನೀಫ್ ಪುತ್ತೂರು ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಇಮ್ತಿಯಾಝ್ ಪಾರ್ಲೆ ಧನ್ಯವಾದವಿತ್ತರು.

Related Posts

Leave a Reply

Your email address will not be published.