ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ, ಕದಿರು ವಿನಿಯೋಗ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಾದ್ರಪದ ಶುಕ್ಲ ಹಸ್ತಾ ನಕ್ಷತ್ರದ ಶುಭದಿನವಾದ  ಇಂದು ಸಂಪ್ರದಾಯದಂತೆ ಕದಿರು ವಿನಿಯೋಗ ಉತ್ಸವ ನಡೆಯಿತು.

ಸಾಂಪ್ರದಾಯಿಕ ಪದ್ಧತಿಯಂತೆ ಬೆಳಗ್ಗೆ ದೇವಳದ ಒಳಾಂಗಣದಲ್ಲಿ ನಿತ್ಯ ಬಲಿ ಉತ್ಸವದೊಂದಿಗೆ ಸರ್ವ ವಾದ್ಯದೊಂದಿಗೆ ಕೆರೆಯ ಬಳಿಯ ಅಶ್ವತ್ಥಕಟ್ಟೆಯ ಬಳಿಗೆ ಆಗಮಿಸಿ ಕಟ್ಟೆಯಲ್ಲಿ ತೆನೆ ಪೂಜೆ ನಡೆಯಿತು. ಬಳಿಕ ತೆನೆ ಕಟ್ಟುಗಳೊಂದಿಗೆ ದೇವಳದ ಒಳಾಂಗಣ ಪ್ರವೇಶಿಸಿ ಪೂಜೆ ನಡೆಯಿತು. ಸಂಪ್ರದಾಯದಂತೆ ಆರಂಭದಲ್ಲಿ ದೇವಳದ ಸಮಿತಿಯವರಿಗೆ ಹೊಸ ತೆನೆಯನ್ನು ನೀಡಿದ ಬಳಿಕ ಹೊರಾಂಗಣದಲ್ಲಿ ದೇವಳದ ಆಡಳಿತ ಸಮಿತಿಯವರು ಭಕ್ತರಿಗೆ ಸಾಂಕೇತಿಕವಾಗಿ ತೆನೆ ವಿತರಣೆ ಮಾಡಿದರು.

ಕೋವಿಡ್ -೧೯ ನಿಯಮಾವಳಿಗಳನ್ನು ಪಾಲಿಸಿಕೊಂಡು ಭಕ್ತರಿಗೆ ಹೊಸ ತೆನೆ ವಿತರಣೆ ಮಾಡಲಾಯಿತು. ದೇವಳದ ಪ್ರಧಾನ ಅರ್ಚಕರೂ ವ್ಯವಸ್ಥಾಪನಾ ಸಮಿತಿ ಸದಸ್ಯರೂ ಆಗಿರುವ ವೇ ಮೂ ವಿ.ಎಸ್ ಭಟ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಹರೀಶ್ ಭಟ್ ಬ್ರಹ್ಮವಾಹಕರಾಗಿದ್ದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸಮಿತಿ ಸದಸ್ಯರಾದ ಡಾ. ಸುಧಾ ಎಸ್.ರಾವ್, ರಾಮಚಂದ್ರ ಕಾಮತ್, ರಾಮ್‌ದಾಸ್ ಗೌಡ, ಐತ್ತಪ್ಪ ನಾಯ್ಕ್ ಪಿ, ಶೇಖರ್ ನಾರಾವಿ, ರವೀಂದ್ರನಾಥ ರೈ ಬಳ್ಳಮಜಲು, ವೀಣಾ ಬಿ.ಕೆ ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.