ಬಂಗ್ರಕೂಳೂರು ವಾರ್ಡ್ 16 ರಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭರತ್ ಶೆಟ್ಟಿ ಗುದ್ದಲಿಪೂಜೆ
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಹಾಗೂ ಶ್ರೀ ಮಹಾಗಣಪತಿ ಭಜನಾ ಮಂದಿರ ಕೋಡಿಕಲ್ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.