ಬಲ್ನಾಡಿನಲ್ಲಿ ಲಾರಿ ಮತ್ತು ಬೈಕ್ ಢಿಕ್ಕಿ: ಬೈಕ್ ಸವಾರ ಮೃತ್ಯು

ಪುತ್ತೂರಿನ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಗೊಬ್ಬರದ ಲಾರಿ ಮತ್ತು ಬೈಕ್ ನಡುವೆ ರವಿವಾರ ಬೆಳಗ್ಗೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ.

ಮೃತರನ್ನು ಗೋಲ್ಡನ್ ಬೇಕರಿಯ ಮಾಲಕ ಅಝೀಝ್ ಎಂದು ಗುರುತಿಸಲಾಗಿದೆ. ಅಝೀಝ್ ಅವರು ಇಂದು ಬೆಳಗ್ಗೆ ತನ್ನ ಅಂಗಡಿಗೆ ಹೋಗುತ್ತಿರುವಾಗ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Related Posts

Leave a Reply

Your email address will not be published.