ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಸಿಟಿ ಬಸ್ ಮೇಲೆ ಬಿದ್ದ ತೆಂಗಿನ ಮರ..!

ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಜಖಂಗೊಂಡಿವೆ.

ಇನ್ನು ರಸ್ತೆಗೆ ಬಿದ್ದ ಮರದಿಂದ ತೆಂಗಿನಕಾಯಿಗಳನ್ನು ಸಾರ್ವಜನಿಕರು ಕಿತ್ತು ಕೊಂಡೊಯ್ದರು. ನಂತರ ಸಾರ್ವಕನಿಕರ ಸಹಕಾರದಲ್ಲಿ ಸಂಚಾರ ಪೊಲೀಸರು ಬಿದ್ದಿದ್ದ ತೆಂಗಿನಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದರು.

Related Posts

Leave a Reply

Your email address will not be published.