HomeFresh Newsಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು.

ಆದರೆ ಒಂದೆರಡು ಮಳೆಬರುವ ಹೊತ್ತಿಗೆ ಪುರಸಭೆಯವರ ಕಳಪೆ ಕಾಮಗಾರಿ ಕೆಯ ಬಣ್ಣ ಬಯಲಾಯಿತು. ಆದರೆ ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಯಾವ ಇಲಾಖೆಯವರು ಮನಸ್ಸು ಮಾಡುತ್ತಿಲ್ಲ. ಈ ರಸ್ತೆಯಲ್ಲಿ ದಿನಕ್ಕೆ ಒಂದೆರಡು ಅಪಘಾತಗಳು ನಡೆಯುವುದು ಮಾಮೂಲಾಗಿದೆ. ಇದನ್ನು ಕಂಡ ರಿಕ್ಷಾ ಚಾಲಕರೊಬ್ಬರು ಈ ಹೊಂಡದಲ್ಲಿ ಬಾಳೆ ಗಿಡಗಳನ್ನು ನೆಟ್ಟು ಸಂಬಂಧಪಟ್ಟ ಇಲಾಖೆಗಳಿಗೆ ಎಚ್ಚರಿಕೆ ನೀಡುವ ವಿಶಿಷ್ಟ ಪ್ರತಿಭಟನೆಯನ್ನು ನಡೆಸಿದರು.

 

 

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments