ಮಂಗಳೂರಿನ ಪಿಲಿಕುಳದ ನಿಸರ್ಗಧಾಮಕ್ಕೆ ರಾಜ್ಯ ಅರಣ್ಯ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾದ ಅರವಿಂದ ಲಿಂಬಾವಳಿಯವರು ಭೇಟಿ ನೀಡಿದರು.




ಬಳಿಕ ಪಿಲಿಕುಳ ನಿಸರ್ಗಧಾಮವನ್ನು ವೀಕ್ಷಿಸಿದರು. ಇದೇ ವೇಳೆ ಗಿಡ ನೆಟ್ಟು ನೀರುಣಿಸಿ ವನಮಹೋತ್ಸವದ ಸಂದೇಶ ಸಾರಿದರು.



ಈ ಸಂದರ್ಭದಲ್ಲಿ ಶಾಸಕ ಉಮಾನಾಥ್ ಕೋಟ್ಯಾನ್, ಅರಣ್ಯ ಅಧಿಕಾರಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
