ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧ ಪುತ್ತೂರು ಠಾಣೆಯಲ್ಲಿ ದೂರು ದಾಖಲು

ಪುತ್ತೂರು: ಖಾಸಗಿ ನರ್ಸಿಂಗ್ ಹೋಮ್‌ಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಾಜಿ ಸಚಿವ ಎಚ್.ಡಿ ರೇವಣ್ಣ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಐ.ಎಂ.ಎ ಡಾ.ಗಣೇಶ್ ಪ್ರಸಾದ್ ದೂರು ನೀಡಿದ್ದಾರೆ.


ಹಾಸನ ಜಿಲ್ಲೆಯಲ್ಲಿ ಖಾಸಗಿ ಆಸ್ಪತ್ರೆಗಳಿಂದ ದಂದೆ ನಡೆಯುತ್ತಿದೆ. ಸುಲಿಗೆ ನಿಲ್ಲಿಸದಿದ್ದರೆ ಜನರಿಗೆ ಹೇಳಿ ಹೊಡೆಸುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಈ ಮುನ್ನ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯ ಆಧಾರದ ಮೇಲೆ ನರ್ಸಿಂಗ್ ಹೋಮ್ ಗಳ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಸದಸ್ಯ ಡಾ.ಗಣೇಶ್ ಪ್ರಸಾದ್ ಮುದ್ರಾಜೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Related Posts

Leave a Reply

Your email address will not be published.