ವೀಕೆಂಡ್ ಕರ್ಫ್ಯೂ ಅನಗತ್ಯ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

 ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ಶನಿವಾರ ಮತ್ತು ರವಿವಾರ ವೀಕೆಂಡ್ ಕರ್ಫ್ಯೂ ವಿಧಿಸುತ್ತಿದ್ದಾರೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದರು. ಈ ಕುರಿತು ಸುದ್ದಿಗಾರದೊಂದಿಗೆ ಮಾತನಾಡಿದ ಅವರು, ಕೋವಿಡ್ ಲಸಿಕೆ ಹಾಕುವುದರಲ್ಲಿ ವಿಜಯಪುರ ನಗರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕೊರೊನಾ 3ನೇ ಅಲೆ ನಮ್ಮ ಮೇಲೆ ಹೆಚ್ಚಿಗೆ ಪರಿಣಾಮ ಬೀರುವುದಿಲ್ಲ. ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಆದರೂ, ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಕೋವಿಡ್ ಕೇವಲ ಶನಿವಾರ ಮತ್ತು ರವಿವಾರ ಮಾತ್ರ ಬರುತ್ತದಾ ಎಂದು ಪ್ರಶ್ನಿಸಿದರು.

ಮೊದಲೇ ಜನರು ಹೈರಾಣಾಗಿದ್ದಾರೆ. ಶನಿವಾರ ಮತ್ತು ರವಿವಾರ ಮಾತ್ರ ಕೋವಿಡ್ ತಿರುಗಾಡುತ್ತಾ, ಸೋಮವಾರದಿಂದ ಶುಕ್ರವಾರ ಬರುವುದಿಲ್ಲವಾ ರಾತ್ರಿ ಕರ್ಫ್ಯೂ ಜಾರಿ ಮಾಡಿದ್ದೀರಿ. ರಾತ್ರಿ ಮಾತ್ರ ಕೊರೊನಾ ತಿರುಗಾಡುತ್ತಾ, ಇದನ್ನು ವೈಜ್ಞಾನಿಕವಾಗಿ ಹೇಗೆ ಹೇಳುತ್ತಾರೋ ನನಗಂತೂ ಗೊತ್ತಿಲ್ಲ. ಮಾಸ್ಕ್ ಕೂಡ ಧರಿಸುವುದಿಲ್ಲ. ಆದರೆ, ಗಣೇಶೋತ್ಸವಗಳಿಗೆ ನಿರ್ಬಂಧ ವಿಧಿಸುತ್ತಾರೆ. ಇಷ್ಟೇ ಜನ ಇರಬೇಕು, ಆಚರಣೆ ಹೀಗೇ ಇರಬೇಕು ಎಂದು ಹೇಳುತ್ತಾರೆ. ಇದರಲ್ಲಿ ಅರ್ಥವಿದೆಯಾ ಎಂದು ಅವರು ಪ್ರಶ್ನಿಸಿದರು.

ಸಿಎಂ ಜೊತೆ ನಡೆದ ಸಭೆಯಲ್ಲಿ ಹೇಳಿದ್ದೇನೆ. ಈ ಸಭೆಯಲ್ಲಿಯೇ ಎಸ್ಪಿ, ಡಿಸಿ ಇದ್ದಾರೆ. ಗಣೇಶೋತ್ಸವದ ಮೇಲೆ ಮಾತ್ರ ಕಾನೂನು ಮಾಡಿದರೆ ನಾನು ನಿರ್ಬಂಧ ಜಾರಿ ಮಾಡಲು ಬಿಡುವುದಿಲ್ಲ ಎಂದು ತಿಳಿಸಿದ್ದೇನೆ ಎಂದು ಹೇಳಿದರು.ನಿರ್ಬಂಧ ಉಲ್ಲಂಘಿಸಿದರೆ ಹೆಚ್ಚೆಂದರೆ ನನ್ನ ಮೇಲೆ ಗುಂಡು ಹಾಕಬಹುದು. ಆಗ ಕರ್ನಾಟಕದ ತುಂಬ ಸುದ್ದಿಯಾಗುತ್ತದೆ. ಸತ್ತರೂ ಹೆಸರು ಮಾಡಿ ಹೋಗಬೇಕು ಎಂದು ಯತ್ನಾಳ ಖಾರವಾಗಿ ಎಚ್ಚರಿಕೆ ನೀಡಿದರು.

10 ಸಾವಿರ ಜನರನ್ನು ಸೇರಿಸಿ ಸಭೆ ಮಾಡುತ್ತಿದ್ದೀರಾ. ಗಣೇಶೋತ್ಸವದ ಬಗ್ಗೆ ಮಾತ್ರ ಯಾಕೆ ಕೊರೊನಾ ನೆನಪಾಗುತ್ತದೆ. ಗಣೇಶೋತ್ಸವಕ್ಕೆ ಮಾತ್ರ ಯಾಕೆ ನಿರ್ಬಂಧ ವಿಧಿಸುತ್ತಿದ್ದೀರಾ ಎಂದು ಮುಖ್ಯಮಂತ್ರಿಯವರನ್ನು ಕೇಳಿದ್ದೇನೆ. ಹಾಕುವುದಿದ್ದರೆ ಎಲ್ಲರಿಗೂ ನಿರ್ಬಂಧ ಹಾಕಿ ಎಂದು ಹೇಳಿದ್ದೇನೆ ಎಂದು ಅವರು ತಿಳಿಸಿದರು.

ಹೀಗಾಗಿ ಗಣೇಶೋತ್ಸವಗಳಿಗೆ ಯಾವುದೇ ತೊಂದರೆ ಕೊಡಬಾರದು ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಡಿಸಿ ಮತ್ತು ಎಸ್ಪಿಯವರಿಗೆ ಆದೇಶ ಮಾಡಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಮಾಡುವರು ಯಾರೂ ಅಂಜಬೇಡಿ ಎಂದು ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.

 

Related Posts

Leave a Reply

Your email address will not be published.