ಸಿಗರೇಟಿನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ

ಕುಂದಾಪುರ: ವರದಕ್ಷಿಣೆ ಕಿರುಕುಳ ಸಂಬಂಧಿಸಿದಂತೆ ಸಿಗರೇಟಿನಿಂದ ಸುಟ್ಟು ಗರ್ಭಿಣಿ ಪತ್ನಿಗೆ ಚಿತ್ರಹಿಂಸೆ ನೀಡಿದ ಪತಿಯನ್ನು ಕುಂದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ ಕುಂದಾಪುರದ ಬರೆಕಟ್ಟು ನಿವಾಸಿ ಪ್ರದೀಪ್ ಇದೀಗ ಪೊಲೀಸ್ ವಶದಲ್ಲಿದ್ದಾನೆ.ಪ್ರದೀಪ್ ಹಾಗೂ ಪ್ರಿಯಾಂಕ ಪ್ರೀತಿಸುತ್ತಿದ್ದು, ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಕೊಲ್ಲೂರಿನಲ್ಲಿ ವಿವಾಹವಾಗಿದ್ದರು. ಮದುವೆಯ ಬಳಿಕ ಪ್ರಿಯಾಂಕ ತನ್ನ ಪತಿ ಮನೆಯಲ್ಲೇ ನೆಲೆಸಿದ್ದರು. ಮದುವೆಯಾಗಿ ನಾಲ್ಕೈದು ತಿಂಗಳು ಕಳೆಯುತ್ತಿದ್ದಂತೆಯೇ ಪ್ರದೀಪ್ ತನ್ನ ಪತ್ನಿಯಲ್ಲಿ ವರದಕ್ಷಿಣೆಗಾಗಿ ಬೇಡಿಕೆ ಇಟ್ಟಿದ್ದು, ದಿನನಿತ್ಯವೂ ತವರು ಮನೆಯಿಂದ ಚಿನ್ನ ಹಾಗೂ ಹಣವನ್ನು ತೆಗೆದುಕೊಂಡು ಬಾ ಎಂದು ಚಿತ್ರಹಿಂಸೆ ನೀಡಲಾರಂಭಿಸಿದ್ದನು ಎಂದು ದೂರಿನಲ್ಲಿ ವಿವರಿಸಿದ್ದರು.

ಪ್ರೀಯಾಂಕ ದೂರಿನ ಮೇರೆಗೆ ಕುಂದಾಪುರ ಪೊಲೀಸರು ಆರೋಪಿ ಪ್ರದೀಪ್ ನನ್ನು ಬಂಧಿಸಿ ಇದೀಗ ವಿಚಾರಣೆ ನಡೆಸುತ್ತಿದ್ದಾರೆ.