ಮೂಡುಬಿದಿರೆ: ಭಗವದ್ಗೀತೆ, ಸಂಗೀತ, ನೃತ್ಯ, ನಾಟಕ, ಸಂಸ್ಕೃತಿ, ಶಿಕ್ಷಣ ಗಳ ವಿಶಿಷ್ಟ ಸಮ್ಮೇಳನದ ನಾಟ್ಯಾಯನ ಕಾರ್ಯಕ್ರಮ ನೀಡುತ್ತಿರುವ ಮೂಡುಬಿದಿರೆಯಅಯನಾ. ವಿ. ರಮಣ್ ಅನನ್ಯ- ಅದ್ಭುತ ಕಲಾವಿದೆ. ಅಸಾಧಾರಣ ಸ್ಮರಣ ಶಕ್ತಿ, ಪರಿಣಾಮಕಾರಿ ಅಭಿನಯದ ಅದ್ಭುತ ಸಾಧನೆ ಮಾಡಿದ ಕಲಾವಿದೆ. ಈಕೆಗೆ ರಾಷ್ಟçಮಟ್ಟದ ಪ್ರಶಸ್ತಿಗಳು ಲಭಿಸಲಿ ಎಂದು ಮುಂಬೈ ಶ್ರೀಗಾಂದೇವಿ ಅಂಬಿಕಾ
Month: October 2023
ಮೂಡುಬಿದಿರೆ:ವಿಜಯದಶಮಿ ಪ್ರಯುಕ್ತ ಮೂಡುಬಿದಿರೆ ಶ್ರೀ ಜೈನಮಠಹಾಗೂ ಬಸದಿಗಳಲ್ಲಿ ತೆನೆಹಬ್ಬ, ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಅವರ ಮಾರ್ಗದರ್ಶನದಲ್ಲಿ ನಡೆಯಿತು. ದೇಶದ ಸಮಸ್ತರಿಗೆ ಒಳಿತಾಗಲಿ. ಕಾಲ ಕಾಲಕ್ಕೆ ಮಳೆ ಬಂದು ಪ್ರಕೃತಿ ವಿಕೋಪ ವಾಗದೆ, ಲೋಕದಲ್ಲಿ ಶಾಂತಿ, ಸುಭಿಕ್ಷೆ ಉಂಟಾಗಲಿ ಎಂದು
ಕಡಬ: ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಆನೆ ಹಾಗೂ ಇತರ ಪ್ರಾಣಿಗಳ ಉಪಟಳ ಮಿತಿ ಮೀರುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಗ್ರಹಿಸಿ ಅ.26ರಂದು ಕಡಬದಲ್ಲಿ ಬೃಹತ್ ಮೆರವಣಿಗೆ ನಡೆಸಿ ಮುಖ್ಯ ಮಂತ್ರಿಯವರಿಗೆ ಮನವಿ ಸಲ್ಲಿಸಲಾಗುವುದು ಎಂದು ಐತ್ತೂರು ಮರ್ಧಾಳ ಜಾಗೃತ ರೈತ ಕುಟುಂಬಗಳ ಒಕ್ಕೂಟದ ಅಧ್ಯಕ್ಷ ಅತ್ಯಡ್ಕ ನಾರಾಯಣ ಶೆಟ್ಟಿ ತಿಳಿಸಿದ್ದಾರೆ.
ಸುರತ್ಕಲ್ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಸರಣಿ ಅಪಘಾತಗಳು ನಡೆದಿದ್ದು, ಓರ್ವ ಬೈಕ್ ಸವಾರ ಮೃತಪಟ್ಟರೆ ಉಳಿದ ಅಪಘಾತಗಳಲ್ಲಿ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ. ಕುಳಾಯಿಯ ಹೊನ್ನಕಟ್ಟೆ ಬಳಿ ಪಿಕಪ್ ವಾಹನ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಚಿತ್ರಾಪುರದ ಬಸ್ ನಿಲ್ದಾಣದ
ಇತಿಹಾಸ ಪ್ರಸಿದ್ಧ ಬೈಂದೂರು ಬಂಕೇಶ್ವರಾ ಶ್ರೀ ಮಹಾಕಾಳಿ ಅಮ್ಮನವರ ದೇವಸ್ಥಾನದಲ್ಲಿ ಐತಿಹಾಸಿಕ ಹುಲಿ ಕೊಲ್ಲುವ ಕಾರ್ಯಕ್ರಮ ನಡೆಯಿತು. ಬೈಂದೂರಿನ ಸುತ್ತಮುತ್ತಲಿನ ಜನರು ಮಹಾಕಾಳಿ ಅಮ್ಮನವರಿಗೆ ನವರಾತ್ರಿಯ ಸಂದರ್ಭದಲ್ಲಿ ಸೇವೆ ಹಾಗೂ ಹರಕೆಯ ರೂಪದಲ್ಲಿ ಹುಲಿ ವೇಷ ತೊಟ್ಟು ಕುಣಿಯುವ ಪರಿ ಹಿಂದಿನಿಂದ ನಡೆದುಕೊಂದು ಬಂದಿದೆ. ಮಕ್ಕಳು ದೊಡ್ಡವರು ಭೇದವಿಲ್ಲದೇ ದೇವರ
ಉಳ್ಳಾಲ: ಮಂಗಳೂರು ದಸರಾ ತೆರಳುತ್ತಿದ್ದ ಬೈಕ್ ಚಾಲಕನ ಧಾವಂತಕ್ಕೆ ರಸ್ತೆ ದಾಟುತ್ತಿದ್ದ ಪಾದಚಾರಿ ಮಹಿಳೆ ಸಾವನ್ನಪ್ಪಿರುವ ಘಟನೆ ಬಬ್ಬುಕಟ್ಟೆ ಸೋಝಾ ಇಲೆಕ್ಟ್ರಿಕಲ್ಸ್ ಎದುರುಗಡೆ ಸಂಭವಿಸಿದೆ. ಬಾಗಲಕೋಟೆ ಬಾದಾಮಿ ಲಖಮಾಪುರ ನಿವಾಸಿ ಶಿವಪ್ಪ ದೊಡ್ಡಮನಿ ಎಂಬವರ ಪತ್ನಿ ಎಲ್ಲವ್ವ ಶಿವಪ್ಪ ದೊಡ್ಡಮನಿ (50) ಮೃತ ಮಹಿಳೆ. ಶಿವಪ್ಪ ಅವರು ಕೂಲಿಕಾರ್ಮಿಕರಾಗಿದ್ದು, ಸಂಜೆ
ಮೂಡುಬಿದಿರೆ : ತಾಲೂಕಿನ ಮಾರೂರು ಗ್ರಾಮದ ಅರಮನೆ ಬಳಿಯ ರಾಜು ಶೆಟ್ಟಿ -ರತಿ ದಂಪತಿಯ ಪುತ್ರ ಸಂದೀಪ್ ಎಂ ಶೆಟ್ಟಿ ಮಾರೂರು ಇವರು ಭಾರತೀಯ ಗಡಿ ಭದ್ರತಾ ಸೇನೆಗೆ ಆಯ್ಕೆಯಾಗಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಸರಕಾರಿ ಪ್ರಾಥಮಿಕ ಶಾಲೆ ಮಾರೂರು ಹೊಸಂಗಡಿ ಇಲ್ಲಿ ಮುಗಿಸಿ, ಪ್ರೌಢ ಶಿಕ್ಷಣವನ್ನು ಎಸ್ ಡಿ ಎಂ ಪೆರಿಂಜೆಯಲ್ಲಿ ಮುಗಿಸಿ, ಪದವಿಪೂರ್ವ ಶಿಕ್ಷಣವನ್ನು
ಸ್ಕೂಟಿ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ಸ್ಕೂಟಿ ಮತ್ತು ಆಟೋರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ
ಮೂಡುಬಿದಿರೆ ಒಂಟಿಕಟ್ಟೆ ಕಡಲಕೆರೆ ಬಳಿ ಇರುವ ತಾಲೂಕು ಅಗ್ನಿಶಾಮಕ ಠಾಷೆಯಲ್ಲಿ ಸೋಮವಾರ ಆಯುಧ ಪೂಜೆ ಮತ್ತು ವಾಹನಪೂಜೆ ನಡೆಯಿತು.ಆಲಂಗಾರು ಶ್ರೀ ಬಡಗು ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಪ್ರಸಾದ್ ಭಟ್ ಅವರು ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು.ಅಗ್ನಿಶಾಮಕ ಠಾಣಾಧಿಕಾರಿ ಮತ್ತು ಸಿಬಂಧಿ ವರ್ಗ ಹಾಗೂ ಊರವರು ಈ ಸಂದರ್ಭದಲ್ಲಿದ್ದರು.
ಕಾರ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಶೃತಿನ್ ಶೆಟ್ಟಿ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದು ಇಂದು ಅವರ ಶವವು ಕಾರ್ಕಳದ ಪುರಿಯ ಸಾರ್ವಜನಿಕ ಬಾವಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೃತಿನ್ ಶೆಟ್ಟಿ ಕಾಣೆಯಾಗಿರುವ ಕುರಿತು ಅವರ ಪತ್ನಿ ದೂರು ದಾಖಲಿಸಿದ್ದರು. ಕಾಪು ಜನಾರ್ದನ ದೇವಸ್ಥಾನ