ವಿ4 ನ್ಯೂಸ್ ಮತ್ತು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ಎಂ.ಬಿ. ಫೌಂಡೇಶನ್ನ ಎಂ.ಬಿ. ಸದಾಶಿವ ಅವರ ಸಾರಥ್ಯದಲ್ಲಿ ಅರೆಭಾಷೆ ಕಾಮಿಡಿ ರಿಯಾಲಿಟಿ ಶೋದ ಎರಡನೇ ಸುತ್ತಿನ ಆಡಿಷನ್ ಏಪ್ರಿಲ್ 27ರಂದು ನಡೆಯಲಿದೆ. ಈಗಾಗಲೇ ಮೊದಲ ಸುತ್ತಿನ ಆಡಿಷನ್ ಸುಳ್ಯದ ಲಯನ್ಸ್ ಕ್ಲಬ್ನಲ್ಲಿ ಯಶಸ್ವಿಯಾಗಿ ನೆರವೇರಿದ್ದು, 10ಕ್ಕೂ ಅಧಿಕ ತಂಡಗಳು
Month: April 2025
ಪುತ್ತೂರಿನ ವಿವೇಕಾನಂದ ಕಾಲೇಜು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಗೊಂಡಿದ್ದು, ಅಪರ್ಣಾ ಅಡಿಗ ಅವರು ಕಾಲೇಜಿಗೆ ಮೂರನೇ ಸ್ಥಾನ ಪಡೆದು, ರಾಜ್ಯದಲ್ಲಿ 7ನೇ ಸ್ಥಾನವನ್ನು ಪಡೆದು ಹೆಮ್ಮೆ ತಂದಿದ್ದಾರೆ. ಅಪರ್ಣಾ ಅವರು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ವ್ಯತ್ಯಾಸ ಆದ ಕಾರಣ ಮರು ಮೌಲ್ಯಮಾಪನಕ್ಕೆ ಹಾಕಿದ್ದರು. ಮರು ಮೌಲ್ಯಮಾಪನದ ನಂತರ
ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಸರಕಾರಿ ಶಾಲೆಗಳನ್ನು ಉಳಿಸುವ ವಿಶೇಷ ಯೋಜನೆ 300 ಟ್ರೀಸ್ ಇದರ ಸಮಾಲೋಚನ ಸಭೆ ನಡೆಸಿ, ಸರ್ಕಾರಿ ಶಾಲೆಗಳ ಉಳಿವಿಗೆ ಶ್ರಮಿಸುವಂತೆ ಮನವಿ ಮಾಡಿದರು. 300 ಟ್ರೀಸ್ ಸಮಿತಿ ರಚನೆ ಹಾಗೂ ಈ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅಳವಡಿಸುವ ಬಗ್ಗೆ ಶಿಕ್ಷಣ ಪ್ರೇಮಿಗಳು, ಅಧ್ಯಾಪಕರು, ದಾನಿಗಳು ಹಾಗೂ
ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮೂಡಿಬರಲಿರುವ ಎರಡನೇ ಸಿನಿಮಾ “ಕಜ್ಜ” ಇದರ ಮುಹೂರ್ತ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದಲ್ಲಿ ಜರುಗಿತು. ಸಿನಿಮಾಕ್ಕೆ ನಿರ್ಮಾಪಕ ವಿಶಾಂತ್ ಮಿನೆಜಸ್ ಕ್ಲಾಪ್ ಮಾಡಿದರು. ಸಿನಿಮಾಕ್ಕೆ ವಿಜಯಕುಮಾರ್ ಕೊಡಿಯಲ್ ಬೈಲ್, ಅರವಿಂದ ಬೋಳಾರ್ ಚಾಲನೆ ನೀಡಿದರು. ಬಳಿಕ ಮಾತಾಡಿದ ಫಾದರ್ ಮೆಲ್ವಿನ್ ಪಿಂಟೊ ಎಸ್ ಜೆ
ಕಡಬ: ಜಮ್ಮು ಕಾಶ್ಮೀರದ ಪಹಲ್ಗಾಂವ್ನಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಕಡಬದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ವತಿಯಿಂದ ಹೆದ್ದಾರಿ ತಡೆಸಿ ಪ್ರತಿಭಟನೆ ನಡೆಸಲಾಯಿತು.ವಿಶ್ವ ಹಿಂದೂ ಪುತ್ತೂರು ಜಿಲ್ಲಾ ಪರಿಷತ್ ಕಾರ್ಯದರ್ಶಿ ನವೀನ್ ನೆರಿಯ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ಕಾಶ್ಮಿರದ ಪಹಲ್ ಗಾಂವ್ ನಲ್ಲಿ ಉಗ್ರರು ಪ್ರವಾಸಿಗಳ
ಕಾಶ್ಮೀರದ ಪಹಲ್ಗಾಂನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇವೆ. ಹಾಗೆಯೇ ಮೃತರ ಆತ್ಮಕ್ಕೆ ಶಾಂತಿಕೋರುತ್ತೇವೆ. ಈ ಸಂಕಷ್ಟದ ಸಂದರ್ಭದಲ್ಲಿ ನಾವು ಸಂತ್ರಸ್ತ ಕುಟುಂಬಗಳಿಗೆ ಸಾಂತ್ವನ ಹೇಳಲು ಬಯಸುತ್ತೇವೆ. ಘಟನೆ ನಡೆದ ಕ್ಷಣದಿಂದ ನಮ್ಮ ಮನಸ್ಸಿನಲ್ಲಿ ಸಹಿಸಲಸಾಧ್ಯವಾದ ನೋವು ಕಾಡುತ್ತಿದೆ. “ಕೊಂದು ಉಳಿಸಿಕೊಳ್ಳಬೇಕಾದ ಧರ್ಮ
ನಗರದ ಪ್ರತಿಷ್ಟಿತ ವಿದ್ಯಾಸಂಸ್ಥೆಗಳಲ್ಲಿ ಒಂದಾಗಿರುವ ದೇರಳಕಟ್ಟೆಯ ಯೆನಪೋಯ ಡೀಮ್ಡ್ ಡು ಬಿ ಯುನಿವರ್ಸಿಟಿಯು ವಿದ್ಯಾರ್ಥಿಗಳಿಗೆ ಉತ್ತಮ ಸಾಧನೆ ಮಾಡಲು ಅಗತ್ಯವಿರುವ ಜ್ಞಾನ, ಕೌಶಲ್ಯ ಮತ್ತು ಅವಕಾಶವನ್ನು ಕಲ್ಪಿಸಿ ಅವರ ಭವಿಷ್ಯ ರೂಪಿಸುವಲ್ಲಿ ಯಶಸ್ವಿಯಾಗಿದೆ. ವಿಶ್ವವಿದ್ಯಾನಿಲಯವು 5ಕ್ಕೂ ಹೆಚ್ಚು ಕ್ಯಾಂಪಸ್ ಹೊಂದಿದ್ದು, ನ್ಯಾಕ್ ಎ+ ಮಾನ್ಯತೆ ಪಡೆದ
ಜಮ್ಮು- ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ಉಗ್ರರ ಕೃತ್ಯ ಖಂಡನೀಯ ಮತ್ತು ಹೇಯ. ಈ ದಾಳಿಯಲ್ಲಿ ಇಬ್ಬರು ಕರ್ನಾಟಕದವರು ಸೇರಿದಂತೆ 28 ಜನ ಪ್ರವಾಸಿಗರು ಬಲಿಯಾಗಿರುವುದು ಅತೀವ ನೋವು ತಂದಿದೆ. ಉಗ್ರರ ಹೇಯ ಕೃತ್ಯವನ್ನು ಉಡುಪಿ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಕಟುವಾಗಿ ಖಂಡಿಸಿದ್ದಾರೆ. ಪಹಲ್ಗಾಮ್ನಲ್ಲಿ ನಡೆದಿರುವುದು ಕೇವಲ ಉಗ್ರರ
ಮಾಧ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಗಾಗಿ ವಿ4 ನ್ಯೂಸ್ನ ವರದಿಗಾರ ಕೆ.ಎಂ. ಖಲೀಲ್ ಅವರು ಮಾಧ್ಯಮ ರತ್ನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕವಿತಾ ಮೀಡಿಯಾ ಸೋರ್ಸ್ ಪ್ರೈವೆಟ್ ಲಿಮಿಟೆಡ್ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿವಾಹಿನಿ ವತಿಯಿಂದ ಏ.27ರಂದು ಕೊಪ್ಪಳದಲ್ಲಿ ಕರುನಾಡ ಸಂಭ್ರಮ ಕಿರು ಚಿತ್ರೋತ್ಸವ ಸೀಸನ್-02ರಲ್ಲಿ ನಾಡು, ನುಡಿ, ಸಂಸ್ಕೃತಿಕ ಝೇಂಕಾರ
ಕೊಲ್ಲೂರಿನಲ್ಲಿ ಕಾನೂನು ಕೋರ್ಟು ಆದೇಶ ನೆಪದಲ್ಲಿ ಒಂಚೂರು ಮಾನವೀಯತೆ ಇಲ್ಲದೇ ಕಳೆದ ಹಲವಾರು ವರ್ಷಗಳಿಂದ ವಾಸ ಮಾಡುತ್ತಿದ್ದ ಸಮಾಜದಲ್ಲಿ ಅತೀ ನಿರ್ಲಕ್ಷಿತ ಹಾಗೂ ಸೂಕ್ಷ್ಮ ಸಮುದಾಯವಾದ ಕೊರಗ ಕುಟುಂಬದ ವಾಸ್ತವ್ಯದ ಮನೆಯನ್ನು ನಾಶ ಪಡಿಸಿರುವುದು ತೀರಾ ದುಃಖಕರ ಹಾಗೂ ದುರದೃಷ್ಟಕರ ಸಂಗತಿಯಾಗಿದೆ.ಈ ಪ್ರಕ್ರಿಯೆಯಲ್ಲಿ ಪೊಲೀಸ್ ಇಲಾಖೆಯೂ ಸೇರಿದಂತೆ ಈ ಪ್ರಕರಣವು ಈ