Homemangaluruಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಆಳ್ವಾಸ್ ಫಾರ್ಮಾಸಿ: ಅಭಿವಿನ್ಯಾಸ ಕಾಯ೯ಕ್ರಮ

ಮೂಡುಬಿದಿರೆ: ಫಾರ್ಮಾಸಿಸ್ಟ್ ಗಳು ಸಮಾಜದ ಆರೋಗ್ಯ ರಕ್ಷಕರು ಹಾಗೂ ವೈದ್ಯಕೀಯ ವ್ಯವಸ್ಥೆಯ ಶ್ರದ್ಧಾವಂತ ಯೋಧರು ಎಂದು ಮಾಹೆ ಮಣಿಪಾಲ ಫಾರ್ಮಸೂಟಿಕಲ್ ಸೈನ್ಸ್ಸ್ ಕಾಲೇಜಿನ ಪ್ರಾಂಶುಪಾಲ ಡಾ. ಶ್ರೀನಿವಾಸ್ ಮುತಾಲಿಕ್ ನುಡಿದರು.

ಅವರು ಆಳ್ವಾಸ್ ಫಾರ್ಮಾಸಿ ಕಾಲೇಜಿನ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಅಭಿವಿನ್ಯಾಸ ಕಾರ‍್ಯಕ್ರಮದಲ್ಲಿ ಮಾತನಾಡಿದರು.

ವಿಶ್ವದಲ್ಲಿ ಔಷಧೋದ್ಯಮ ಕ್ಷೇತ್ರವು ವೇಗವಾಗಿ ಬೆಳೆಯುತ್ತಿದೆ. ಔಷಧ ತಯಾರಿಕೆ, ಗುಣಮಟ್ಟದ ಪರಿಶೀಲನೆ, ಸಂಶೋಧನೆ, ಲಸಿಕಾ ಅಭಿವೃದ್ಧಿ ಮತ್ತು ಕ್ಲಿನಿಕಲ್ ರಿಸರ್ಚ್ನಲ್ಲಿ ಫಾರ್ಮಾಸಿಸ್ಟ್ ಗಳ ಬೇಡಿಕೆ ಹೆಚ್ಚುತ್ತಿದೆ. ಇಂದಿನ ಸ್ಪರ್ಧಾತ್ಮಕ ಪರಿಸರದಲ್ಲಿ ದೇಶದ ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲು, ಫಾರ್ಮಾಸಿಸ್ಟ್ಗಳು ಅತ್ಯಂತ ಅಗತ್ಯರಾಗಿದ್ದಾರೆ.
ಫಾರ್ಮಾಸಿಸ್ಟ್ಗಳು ವೈದ್ಯರು ಮತ್ತು ರೋಗಿಗಳ ನಡುವೆ ಸೇತುವೆಯಾಗಿ ಕಾರ್ಯನಿರ್ವಹಿಸುತ್ತಾರೆ. ಬದ್ಧತೆ, ಶಿಸ್ತು ಮತ್ತು ಸೇವಾ ಮನೋಭಾವ ಈ ವೃತ್ತಿಗೆ ಅವಶ್ಯಕವಾಗಿದ್ದು, ಫಾರ್ಮಸಿ ಶಿಕ್ಷಣವು ಮಾನವ ಸೇವೆಯ ಅತಿ ಶ್ರೇಷ್ಠ ವೃತ್ತಿಯಲ್ಲೊಂದಾಗಿದೆ ಎಂದರು.

ಬೆಂಗಳೂರಿನ ಐ ಡ್ರೀಮ್ಸ್ ಹೆಲ್ತ್ ಕೇರ್ ನ ಮುಖ್ಯ ಕಾರ‍್ಯನಿರ್ವಾಹಣಾಧಿಕಾರಿ ಎಂ. ಎಸ್ ಕಿರಣ್ ಕುಮಾರ್ ಮಾತನಾಡಿ, ನಮ್ಮೊಳಗಿನ ಶತ್ರುಗಳನ್ನು ನಿಗ್ರಹಿಸಿದರೆ ಯಶಸ್ಸು ಶತಸಿದ್ಧ. ವೈದ್ಯರು ವೈಯಕ್ತಿಕ ಚಿಕಿತ್ಸೆ ನೀಡುವ ಮೂಲಕ ನೂರಾರು ಜನರನ್ನು ತಲುಪಿದರೆ, ಫಾರ್ಮಾಸಿಸ್ಟ್ಗಳು ವ್ಯಾಪಕ ಪ್ರಮಾಣದಲ್ಲಿ ಆರೋಗ್ಯ ಸೇವೆಯನ್ನು ನೀಡಿ ಸಾವಿರಾರು ಜನರನ್ನು ತಲುಪುತ್ತಾರೆ ಎಂದರು.
ಆಳ್ವಾಸ್ ಫಾರ್ಮಸಿ ಕಾಲೇಜಿನಲ್ಲಿ ನೂತನವಾಗಿ ಸ್ಥಾಪಿಸಲಾದ ಪ್ರಯೋಗಾಲಯವನ್ನು ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಮೋಹನ ಆಳ್ವ ಉದ್ಘಾಟಿಸಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಟ್ರಸ್ಟಿ ವಿವೇಕ್ ಆಳ್ವ ಅಧ್ಯಕ್ಷತೆ ವಹಿಸಿದ್ದರು.

ಆಳ್ವಾಸ್ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಮಂಜುನಾಥ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸೂರಜ್ ಅತಿಥಿಗಳನ್ನು ಪರಿಚಯಿಸಿದರು.ಸಹಪ್ರಾಧ್ಯಪಕ ವಿರನ್ ಕಾರ‍್ಯಕ್ರಮ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments