ಪರಂಪರಾಗತ ಕೃಷಿ ವಿಕಾಸ ಯೋಜನೆ ಮಾಹಿತಿ ಕಾರ್ಯಗಾರ

ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ, ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಸುಳ್ಯ ಹಾಗೂ ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇವರ ಸಹಯೋಗ ದಲ್ಲಿ ಪರಂಪರಾಗತ ಕೃಷಿ ವಿಕಾಸ ಯೋಜನೆ ಅಡಿಯಲ್ಲಿ ಗುಚ್ಛ ದ ರೈತರಿಗೆ ಸಾವಯವ ಕೃಷಿ, ಪಿ ಜಿ ಎಸ್ ದೃಡೀಕರಣ ಹಾಗೂ ಬೆಳೆ ರೋಗ ನಿರ್ವಹಣೆ ಬಗ್ಗೆ ತರಬೇತಿ ಕಾರ್ಯಕ್ರಮ ಹಾಗೂ ಮಾಹಿತಿ ಕಾರ್ಯಾಗಾರ ಪಂಜ ಲಯನ್ಸ್ ಸಭಾಭವನ ದಲ್ಲಿ ಜ.13 ರಂದು ನಡೆಯಿತು.

ಪರಿವಾರ ಪಂಜ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ಇದರ ಅಧ್ಯಕ್ಷರಾದ ತೀರ್ಥನಂದ ಕೊಡೆಂಕಿರಿ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಯುವ ಸಾವಯವ ಕೃಷಿಕರಾದ ಪ್ರಜ್ವಲ್ ಬಿಳಿಮಳೆ ಕಾರ್ಯಾಗಾರ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಸಿ ಪಿ ಸಿ ಆರ್ ಐ ವಿಜ್ಞಾನಿ ನಾಗರಾಜ ಹಾಗೂ ಬಿ ಓ ಸಿ ಬಿ ಪ್ರಧಾನ ವ್ಯವಸ್ಥಾಪಕರಾದ ಆಕಾಶ್ ರವರು ರೈತರಿಗೆ ಸೂಕ್ತ ಮಾಹಿತಿ ಯನ್ನು ನೀಡಿದರು. ಸಹಾಯಕ ತೋಟಗಾರಿಕೆ ನಿರ್ದೇಶಕ ರಾದ ಸುಹಾನ ಪಿ ಕೆ ಅತಿಥಿ ಯಾರಿದ್ದಾರು . ಪರಿವಾರ ಪಂಜ ಎಫ್ ಪಿ ಸಿ ಎಲ್ ಇದರ ನಿರ್ದೇಶಕರು ಗಳಾದ ಕಾರ್ಯಪ್ಪ ಗೌಡ ಚಿದ್ಗಲ್ ಸ್ವಾಗತಿಸಿದರು. ರಮಾನಂದ ಎಣ್ಣೆಮಜಲು ವಂದಿಸಿದರು. ಐ.ಸಿ.ಸಿ.ಓ.ಏ ಬೆಂಗಳೂರು ದ. ಕ ಜಿಲ್ಲಾ ಸಂಯೋಜಕರಾದ ಡಿಕೇಶ್ ಗೌಡ ಜಿ ಕಾರ್ಯಕ್ರಮ ನಿರೂಪಿಸಿದರು.
ಎಲ್ ಆರ್ ಪಿ ಯೋಗೀಶ್ ಹೊಸೊಳಿಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂತೋಷ್ ,ನಿರ್ದೇಶಕ ರಾದ ಆನಂದ ಜಳಕದಹೊಳೆ ಬೆಳ್ಳಿಯಪ್ಪ ನಾದೂರು ಸಿಬ್ಬಂದಿ ಕಾರ್ತಿಕ್ ಸಹಕರಿಸಿದರು , ಪಿ ಕೆ ವಿ ವೈ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿ ಯಲ್ಲಿ ಸಹಕರಿಸಿದರು .

Related Posts

Leave a Reply

Your email address will not be published.