ಮಂಗಳೂರು: ಉದ್ಯಮಿ ಲಂಚುಲಾಲ್ ಕೆ.ಎಸ್.ಅವರಿಗೆ ವ್ಯವಹಾರ ಮತ್ತು ಮನೋರಂಜನಾ ವ್ಯಕ್ತಿತ್ವ ಪ್ರಶಸ್ತಿ ಪ್ರದಾನ
ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್ನೆಸ್ ಅವಾರ್ಡ್ಗೆ ಭಾಜನರಾಗಿದ್ದಾರೆ.
ನಗರದ ಅವತಾರ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಭಾಗವಹಿಸಿದ್ದರು. ಉದ್ಯಮಿ ಲಂಚುಲಾಲ್ ಅವರು, ಈ ವರ್ಷದ ವ್ಯವಹಾರ ಮತ್ತು ಮನೋರಂಜನಾ ವ್ಯಕ್ತಿತ್ವ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಖ್ಯಾತ ಬ್ಯಾಡ್ಮಿಂಟನ್ ಆಟಗಾತಿ ಸೈನಾ ನೆಹ್ವಾಲ್ ಅವರು ಮುಖ್ಯ ಅತಿಥಿಯಾಗಿ ಆಗಮಿಸಿ ಪ್ರಶಸ್ತಿಯನ್ನು ಪ್ರದಾನಿಸಿದರು.


















