ಉಡುಪಿ:ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಿದರು.
ವಿಶ್ವ ಪರಿಸರ ದಿನದ ಅಂಗವಾಗಿ ಉಡುಪಿ ಮಲಬಾರ್ ಗೋಲ್ಡ್ ಎಂಡ್ ಡೈಮಂಡ್ಸ್ ವತಿಯಿಂದ ಗ್ರಾಹಕರಾದ ಬೇಬಿ ಆರ್ ಭಂಡಾರಿ, ಸುಮಿತ್ರ ಎ ಶೆಟ್ಟಿ ಇವರಿಗೆ ಗಿಡ ನೀಡುವ ಮೂಲಕ ವಿಶಿಷ್ಟವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರಾಹಕರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಶಾಖಾ ಮುಖ್ಯಸ್ಥರಾದ ವಿಜಯ್ ಕುಮಾರ್ ಡಿ, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ,ಮಾರುಕಟ್ಟೆ ವ್ಯವಸ್ಥಾಪಕರದ ತಂಝೀಮ್ ಶಿರ್ವ,ಸಂದೀಪ್ ಸಪಾಳ್ಯ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಉಡುಪಿ ವಲಯ ಅರಣ್ಯ ಅಧಿಕಾರಿ ವಾರಿಜಾಕ್ಷಿ, ಅರಣ್ಯ ಇಲಾಖೆ ಕಾರ್ಕಳ ಅಧೀಕ್ಷಕರಾದ ಅರುಣ್ ಕುಮಾರ್ ಜತ್ತನ್ ಸಹಕರಿಸಿದರು. ವಿಘ್ನೇಶ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

