ಮಂಜೇಶ್ವರ: ಮಂಜೇಶ್ವರದ ಹೊಸಂಗಡಿ-ಆನಪಳ್ಳ ಮಾರ್ಗದ ಕಡಂಬಾರಿನ ಅರಣ್ಯ ಪ್ರದೇಶದಲ್ಲಿ ಬೃಹತ್ ಮರವೊಂದು ಧರೆಗುರುಳಿದ ಪರಿಣಾಮ ವಿದ್ಯುತ್ ಲೈನ್ ಕಡಿತಗೊಂಡಿದ್ದು, ರಸ್ತೆ ಸಂಚಾರಕ್ಕೆ ತೀವ್ರ ಅಡಚಣೆಯುಂಟಾಗಿತ್ತು.


ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಎಸ್ಡಿಪಿಐ ಮಂಜೇಶ್ವರ ಪಂಚಾಯತ್ ರೆಸ್ಕ್ಯೂ ಟೀಮ್, ತೀವ್ರ ಪರಿಶ್ರಮದ ಬಳಿಕ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿತು.
ಈ ರಕ್ಷಣಾ ಕಾರ್ಯಾಚರಣೆಯ ನೇತೃತ್ವವನ್ನು ಎಸ್ಡಿಪಿಐ ಮಂಜೇಶ್ವರ ಪಂಚಾಯತ್ ಸಮಿತಿ ಉಪಾಧ್ಯಕ್ಷ ಸಲಾಮ್ ಮಂಜೇಶ್ವರ, ಸಕರಿಯ ಉದ್ಯಾವರ, ಅಶ್ಫಾಕ್ ಗುಡಕೇರಿ, ರಶೀದ್ ಗಾಂಧಿನಗರ ಮತ್ತು ಅಜೀಜ್ ಅವರು ವಹಿಸಿದ್ದರು.


