ಉಡುಪಿ: ಸ್ವದೇಶಿ ಉತ್ಪನ್ನಗಳನ್ನು ಬೆಂಬಲಿಸಿ – ಸ್ಥಳೀಯ ಉದ್ಯಮಿಗಳನ್ನು ಪ್ರೋತ್ಸಾಹಿಸಿ ಎಂಬ ಧೈಯದೊಂದಿಗೆ ಜು.31 ರಿಂದ ಅ.2 ವರೆಗೆ “ಸ್ವದೇಶಿ ಖಾದ್ಯ ಮೇಳ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ. ಎಂದು ಸಮಾಜ ಸೇವಕ, ಧಾರ್ಮಿಕ ಮುಖಂಡ, ಅನೇಕ ದೈವ-ದೇವಸ್ಥಾನಗಳ ಜೀರ್ಣೋದ್ದಾರದ ರೂವಾರಿಗಳೂ, ಕನ್ನರ್ಪಾಡಿ ಜಯದುರ್ಗ ಪರಮೇಶ್ವರಿ ದೇವಸ್ಥಾನದ ನಿಕಟಪೂರ್ವ ಅಧ್ಯಕ್ಷರಾದ ಕೆ.ಕೃಷ್ಣಮೂರ್ತಿ ಆಚಾರ್ಯ ತಿಳಿಸಿದರು.
ಪ್ರತೀ ದಿನ ಬೆಳಿಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ನಡೆಯಲಿರುವ ಈ ಖಾದ್ಯ ಮೇಳದಲ್ಲಿ ಸ್ವದೇಶಿ ತಿಂಡಿ-ತಿನಿಸುಗಳು, ತುಳುನಾಡಿನ ವಿಶೇಷ ತಿನಿಸುಗಳು,ವಿವಿಧ ನಮೂನೆಯ ದೋಸೆ, ಹತ್ತಾರು ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು, ಮಳೆಗಾಲದ ವಿಶೇಷ ತಿನಿಸಿಗಳು, ಸ್ಥಳದಲ್ಲೇ ತಯಾರಿಸಿ ಕೊಡುವ ಹತ್ತಾರು ಲೈವ್ ಫುಡ್ ಗಳು, ಹಲವು ಸಾವಯವ ವಸ್ತುಗಳು, ಹಾಗೂ ಕರಕುಶಲ ವಸ್ತುಗಳು, ಫ್ಯಾನ್ಸಿ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಹಾಗೂ ಇತರೆ ಸ್ವದೇಶಿ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ.

ಮೂರು ದಿನಗಳ ಕಾಲ ನಡೆಯಲಿರುವ ಈ ಮೇಳದಲ್ಲಿ ಸಾವಿರಾರು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಸ್ಥಳೀಯ ಉದ್ಯಮಿಗಳು ಮತ್ತು ಸಣ್ಣ ವ್ಯಾಪಾರಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಿ ವ್ಯಾಪಾರ ವಿಸ್ತರಿಸಿಕೊಳ್ಳಲು ಉತ್ತಮ ವೇದಿಕೆ ಇದಾಗಿದೆ. ಆ ಮೂಲಕ ಸ್ಥಳೀಯ ರೈತರಿಗೆ ಪ್ರೋತ್ಸಾಹ, ಸಾವಯವ ವಸ್ತುಗಳ ಸದ್ಬಳಕೆ ಹೆಚ್ಚಿಸಲು, ಮತ್ತು ಆರೋಗ್ಯಕರ ಸ್ವದೇಶಿ ಆಹಾರ ವಸ್ತುಗಳು ಹಾಗೆಯೇ ಸಾವಯವ ವಸ್ತುಗಳಿಗೆ ಹೆಚ್ಚಿನ ಆದ್ಯತೆ ನೀಡಿ ಪ್ರಚಾರ ಪಡಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು
ಪತ್ರಿಕಾಗೋಷ್ಟಿಯಲ್ಲಿ ಚರಣ್ ರಾಜ್ ಬಂಗೇರ ,ದಯನಂದ್ ಕಪ್ಪೆಟ್ಟು ,ಸುನೀಲ್ ಕಪ್ಪೆ್ಟ್ಟು ,ಕೃಷಿಕ ಸಂಘದ ರವೀಂದ್ರ ಗುಜ್ಜರಬೆಟ್ಟು ,ಮಾಜಿ ನಗರಸಭೆ ಅಧ್ಯಕ್ಷರಾದ ಅಮೃತ ಕೃಷ್ಣ ಮೂರ್ತಿ ಮತ್ತಿತರರು ಉಪಸ್ಥಿತಿತರಿದ್ದರು.


