HomeFresh Newsನೇಪಾಳ ಪ್ರವಾಹ : 160 ಸಾವು: ಭಾರತೀಯರು ಸೇರಿ 750ಕ್ಕೂ ಅಧಿಕ ಮಂದಿ ಕಣ್ಮರೆ

ನೇಪಾಳ ಪ್ರವಾಹ : 160 ಸಾವು: ಭಾರತೀಯರು ಸೇರಿ 750ಕ್ಕೂ ಅಧಿಕ ಮಂದಿ ಕಣ್ಮರೆ

ಟಿಬೆಟ್‌ನ ಗಡಿಯಲ್ಲಿರುವ, ನೇಪಾಳದ ರುಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಪ್ರವಾಹದಲ್ಲಿ ಸುಮಾರು 160 ಜನ ಮೃತಪಟ್ಟಿದ್ದಾರೆ. ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ 133 ಭಾರತೀಯರು, 37 ಅನಿವಾಸಿ ಭಾರತೀಯರು ಸೇರಿ 750ಕ್ಕೂ ಹೆಚ್ಚು ಯಾತ್ರಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಟಿಬೆಟ್‌ನ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ದಿಢೀರ್‌ ಪ್ರವಾಹದಿಂದಾಗಿ ನೇಪಾಳದ ನುವಾಕೋಟ್‌ ಮತ್ತು ಧಾಡಿಂಗ್‌ ಜಿಲ್ಲೆಗಳಲ್ಲಿ ಅಪಾರ ಹಾನಿ ಉಂಟಾಗಿದೆ. ಟಿಬೆಟ್‌ ಗಡಿಯಿಂದ ರಭಸವಾಗಿ ನುಗ್ಗಿದ ಕೆಸರುಮಿಶ್ರಿತ ನೀರಿನಿಂದ ಹಿಮಾಲಯದ ತಪ್ಪಲಿನ ಹಲವು ಗ್ರಾಮಗಳು ಕೊಚ್ಚಿಕೊಂಡು ಹೋಗಿವೆ.

ನೇಪಾಳ ಪ್ರವಾಸೋದ್ಯಮ ಮಂಡಳಿ ಪ್ರಕಾರ, 291 ವಿದೇಶಿಯರು, 93 ನೇಪಾಳಿ ಪ್ರಜೆಗಳು ಸೇರಿದಂತೆ ಕನಿಷ್ಠ 384 ಯಾತ್ರಿಕರು ಪ್ರವಾಹಬಾಧಿತ ಪ್ರದೇಶದಿಂದ ನಾಪತ್ತೆಯಾಗಿದ್ದಾರೆ. ಭಾರತ, ಅಮೆರಿಕ, ಮಲೇಷ್ಯಾ, ಬ್ರಿಟನ್‌, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ನೆದರ್‌ಲೆಂಡ್ಸ್‌ ಸೇರಿದಂತೆ 20ಕ್ಕೂ ಹೆಚ್ಚು ದೇಶಗಳ ಪ್ರವಾಸಿಗರೂ ನಾಪತ್ತೆ ಯಾದವರಲ್ಲಿ ಸೇರಿದ್ದಾರೆ. ಇವರಲ್ಲಿ ಬಹುತೇಕರು ಪ್ರವಾಸ ಆಯೋಜಕ ಸಂಸ್ಥೆಗಳ ಮೂಲಕ ಕೈಲಾಸ ಮಾನಸ ಸರೋವರ ಯಾತ್ರೆಗೆ ಬಂದಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಬುಧವಾರ ಬೆಳಿಗ್ಗೆ 8:37 ಕ್ಕೆ (ಸ್ಥಳೀಯ ಕಾಲಮಾನ) ಭೂಕಂಪ ಸಂಭವಿಸಿದ್ದು, ಅದಾಗಿ ಮೂರು ನಿಮಿಷಗಳ ನಂತರ ದಿಢೀರ್ ಪ್ರವಾಹ ಉಂಟಾಗಿದೆ. ಭೂಕಂಪದಿಂದ ಹಿಮನದಿ ಸ್ಫೋಟಗೊಂಡು ಪ್ರವಾಹ ಉಂಟಾಗಿರಬಹುದು ಎಂದು ನೇಪಾಳದ ವಿದೇಶಾಂಗ ಸಚಿವ ಶಿಶಿರ ಖನಾಲ್ ಸಂಸತ್ತಿಗೆ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments