ಪೆರುವಾಜೆಯ ಕಾನಾವಿನಲ್ಲಿ ಉರುಳಿಗೆ ಬಿದ್ದ ಚಿರತೆ
ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ.
ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಹಿಡಿಯಬೇಕಷ್ಟೆ ಎಂದು ತಿಳಿದು ಬಂದಿದೆ.