ಮಂಗಳೂರಿನಲ್ಲಿ ಜ್ಞಾನ ಜ್ಯೋತಿ ಕೋಚಿಂಗ್ ಕ್ಲಾಸ್ ಉದ್ಘಾಟನೆ
ಜ್ಞಾನ ಜ್ಯೋತಿ ಕೋಚಿಂಗ್ ಕ್ಲಾಸ್ ಶ್ರೀ ಗೋಕರ್ಣನಾತೆಶ್ವರ ದೇವಸ್ಥಾನದ ಪ್ರವೇಶ ದ್ವಾರಾದ ಹತ್ತಿರ ಇರುವ ಶಿವಗಿರಿ ಅಪಾರ್ಟ್ಮೆಂಟ್ ಪ್ಲಾಟ್ ನಂಬರ್ 305ರಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ ಉಪ ಕುಲಸಚಿವರು ಆಗಿರುವ ಡಾ. ಪ್ರಭಾಕರ್ ನೀರ್ ಮಾರ್ಗ ಅವರ ಅಮೃತ ಹಸ್ತದಿಂದ ಉದ್ಘಾಟಿಸಲ್ಪಟ್ಟಿತು.
ನಾರಾಯಣ ಗುರು ಪ್ರಥಮ ದರ್ಜೆ ಕಾಲೇಜು ಕುದ್ರೋಳಿ ಇದರ ಪ್ರಾಂಶುಪಾಲರು ಡಾ ವಸಂತ ಕುಮಾರ್, ಗೋಕರ್ಣೇಶ್ವರ ಕಾಲೇಜಿನ ಪ್ರಾಂಶುಪಾಲರು ಡಾ ಸುಜಯ ಸುವರ್ಣ ನಾರಾಯಣ ಗುರು ಪಿಯು ಕಾಲೇಜಿನ ಪ್ರಾಂಶುಪಾಲರು ಶ್ರೀಮತಿ ರೇಣುಕಾ ಅರುಣ್, ಕಿಟ್ಟಲ್ ಮೆಮೊರಿಯಲ್ ಕಾಲೇಜಿನ ಪ್ರಾಂಶುಪಾಲರು ಶ್ರೀವಿಠ್ಠಲ್ ರವರು ಮತ್ತು ವಿದ್ಯಾರ್ಥಿಗಳ ಪ್ರೀತಿಯ ಮ್ಯಾತ್ಸ್ ಟೀಚರ್ ವಿನೋದ್ ಸಾರ್ ಹಾಗೆಯೇ ವಿದ್ಯಾರ್ಥಿಗಳ ಪ್ರೀತಿಯ ವಿಜ್ಞಾನ ಮತ್ತು ಡ್ರಾಯಿಂಗ್ ಟೀಚರ್ ನಶ್ಮಿತಾ ಹಾಗೆಯೇ ಸಿದ್ದಂತ್ ಅಮೀನ್ ಇವರೆಲ್ಲರೂ ಉದ್ಘಾಟನಾ ಸಮಯದಲ್ಲಿ ಉಪಸ್ಥಿತರಿದ್ದು ಸಂಸ್ಥೆಗೆ ಶುಭವನ್ನು ಹಾರೈಸಿದ್ದರು.