ದೈವಾರಾಧನೆ ಕ್ಷೇತ್ರದಲ್ಲಿ ವಿಭಿನ್ನ ಸಾಧನೆ ಮಾಡಿದಲ್ಲದೆ ಕೃಷಿಕರಾಗಿ, ಸಮಾಜ ಸೇವಕರಾಗಿ ಗುರುತಿಸಿಕೊಂಡ ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ.
ಹಳೆಯಂಗಡಿಯ ಗ್ರಾಮೀಣ ಪ್ರದೇಶವಾದ ಇಂದಿರಾನಗರದಲ್ಲಿ ಕರಾವಳಿಯ ಕಾರ್ಣಿಕ ಕ್ಷೇತ್ರವನ್ನು ಭಕ್ತಿಯ ಆರಾಧನೆಯಲ್ಲಿ ಸೇವೆಯನ್ನು ಮಾಡಿಕೊಂಡು ಬರುತ್ತಿರುವ ಕೃಷ್ಣ ಪೂಜಾರಿಯವರು ಜಿಲ್ಲೆಯ ಅನೇಕ ದೈವಾರಾಧನೆ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಮಂಗಳೂರಿನ ನೆಹರು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವದ ಸಂಭ್ರಮಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಅಂಗಾರ ಅವರು ಪ್ರಧಾನಿಸಿದರು.
ಹಳೆಯಂಗಡಿಯ ಕೃಷ್ಣ ಪೂಜಾರಿ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
RELATED ARTICLES

