HomeFresh Newsಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್

ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್

ಉಡುಪಿ : 1949 ಜುಲೈ 9 ರಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಷ್ಟ್ರದಪುನರ್ ರ್ನಿರ್ಮಾಣದ ಧ್ಯೇಯದೊಂದಿಗೆ ಅಧಿಕೃತವಾಗಿ ನೊಂದಾಯಿಸಲ್ಪಟ್ಟು ಪ್ರಾರಂಭವಾಯಿತು. ಅಂದಿನಿಂದ ಇಂದಿನವರೆಗೂ ಪ್ರತೀ ವರ್ಷ ಎಬಿವಿಪಿ ಈ ದಿನವನ್ನು ರಾಷ್ಟ್ರೀಯ ವಿದ್ಯಾರ್ಥಿ ದಿವಸನ್ನಾಗಿ ಆಚರಿಸಿಕೊಂಡು ಬಂದಿದೆ. ಈ ಬಾರಿ ಎಬಿವಿಪಿ 75ನೇ ರಾಷ್ಟ್ರೀಯ ವಿದ್ಯಾರ್ಥಿ ದಿವಸ್ ಅನ್ನು ರಾಷ್ಟ್ರಾದ್ಯಂತ ಪ್ರತೀ ಶಾಖೆಗಳಲ್ಲಿ ಧ್ವಜಾರೋಹಣ ಮಾಡುವುದರೊಂದಿಗೆ ಕಾರ್ಯಕ್ರಮದ ಸಂಭ್ರಮಾಚರಣೆ ಆಚರಿಸಿತು.

ಅಂತೆಯೇ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ವತಿಯಿಂದ ಉಡುಪಿಯ ಕೇಶವ ನಿಲಯ ಸಂಘ ಕಾರ್ಯಾಲಯದ ಮಾಧವ ಸಭಾಂಗಣದಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣ ನಡೆಸಿ ಸಭಾ ಕಾರ್ಯಕ್ರಮದೊಂದಿಗೆ ಸಂಪನ್ನಗೊಳಿಸಲಾಯಿತು. ಧ್ವಜಾರೋಹಣವನ್ನು ಜಿಲ್ಲಾ ಪ್ರಮುಖರಾದ ರಾಜಶಂಕರ ಇವರು ನೆರವೇರಿಸಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಮೊದಲಿಗೆ ನಗರ ಕಾರ್ಯಕಾರಣಿ ಸದಸ್ಯರಾದ ಮಂಗಳಗೌರಿ ಸ್ವಾಗತಿಸಿ ನಗರ ಕಾರ್ಯದರ್ಶಿ ಶ್ರೀವತ್ಸ ಇವರು ಕಾರ್ಯಕ್ರಮದ ಪ್ರಾಸ್ತಾವಿಕ ಭಾಷಣ ಮಾಡಿದರು. ನಂತರ ವಿಶೇಷ ಭಾಷಣವನ್ನು ಪತ್ರಕರ್ತರಾದ ಶ್ರೀಕಾಂತ ಶೆಟ್ಟಿ ಕಾರ್ಕಳ ಇವರು ನಡೆಸಿ ದೇಶದ ಈ ಅಮೃತ ಕಾಲದಲ್ಲಿ ಎಬಿವಿಪಿಯ ಪಾತ್ರ ಮಹತ್ವದ್ದಾಗಿರುತ್ತದೆ ಎಂದು ತಿಳಿಸಿದರು. ವೇದಿಕೆಯಲ್ಲಿ ಎಬಿವಿಪಿಯ ಹಿರಿಯ ಕಾರ್ಯಕರ್ತರಾದ ಶಿವಾನಂದ ನಾಯಕ್ ಅವರು ಉಪಸ್ಥಿತರಿದ್ದರು. ಕೊನೆಯಲ್ಲಿ ತಾಲೂಕು ಸಂಚಾಲಕರಾದ ಅಜಿತ್ ಜೋಗಿ ವಂದಿಸಿದರು. ನಗರ ಕಾರ್ಯಕಾರಣಿ ಸದಸ್ಯರಾದ ಮನು ಶೆಟ್ಟಿ ಮತ್ತು ರವಿಚಂದ್ರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಕಾರ್ಯಕರ್ತರಿಗೆ ವಿವಿಧ ಸಸಿಗಳನ್ನು ಹಂಚಲಾಯಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments