ಪುತ್ತೂರು || ಕುದ್ದುಪದವು ಯುವಕನಿಂದ ಚೂರಿ ಇರಿತ-ಯುವತಿ ಗಂಭೀರ
ಪುತ್ತೂರು: ಪುತ್ತೂರು ಮಹಿಳಾ ಪೊಲೀಸ್ ಠಾಣಾ ಬಳಿ ಚೂರಿ ಇರಿತಗೊಂಡ ಯುವತಿ ಗಂಭೀರ ಗಾಯಗೊಂಡ ಹಿನ್ನಲೆಯಲ್ಲಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕ ಮತ್ತು ಯುವತಿ ಮಧ್ಯೆ ಮಾತಿನಚಕಮಕಿ ನಡೆದಿದ್ದು ಕೊನೆಗೆ ಆಕೆ ಮಹಿಳಾ ಪೊಲೀಸ್ ಠಾಣೆಯ ಬಳಿ ಬಂದಾಗ ಬೈಕ್ ನಲ್ಲಿ ಬಂದ ಯುವಕ ಆಕೆಯ ಕತ್ತಿಗೆ ಚೂರಿಯಿಂದ ಇರಿದ್ದಿದ್ದಾನೆ ಎಂದು ತಿಳಿದು ಬಂದಿದೆ. ಯುವತಿಯನ್ನು ಕುದ್ದು ಪದವಿನ ವಿಜಯನ್ ಎಂಬವರ ಪುತ್ರಿ ಗೌರಿ ಎಂದು ಗುರುತಿಸಲಾಗಿದ್ದು. ಯುವಕನ ಬೈಕ್ ನಂಬರ್ ಅಧಾರದಲ್ಲಿ ಪದ್ಮರಾಜ್ ಎಂದು ತಿಳಿದು ಬಂದಿದೆ.