HomeFresh Newsಡಿ.3ರಂದು ಪುತ್ತೂರಿನಲ್ಲಿ 'ನಾರಿ ಶಕ್ತಿ ಸಂಗಮ'

ಡಿ.3ರಂದು ಪುತ್ತೂರಿನಲ್ಲಿ ‘ನಾರಿ ಶಕ್ತಿ ಸಂಗಮ’

ಮಹಿಳಾ ಸಮನ್ವಯ ಪುತ್ತೂರು ಜಿಲ್ಲೆ ಮತ್ತು ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಸಹಯೋಗದಲ್ಲಿ ‘ನಾರೀ ಶಕ್ತಿ ಸಂಗಮ’ ಇದೇ ಡಿಸೆಂಬರ್ 3ರಂದು ಪುತ್ತೂರಿನ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿದೆ ಎಂದು ಮಹಿಳಾ ಸಮನ್ವಯದ ಸಂಚಾಲಕಿ ರೂಪಲೇಖ ಹೇಳಿದ್ರು. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವ್ರು, ‘ನಾರಿ ಶಕ್ತಿ ಸಂಗಮ’ ಸಮ್ಮೇಳನವನ್ನ ಮುಖ್ಯವಾಗಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಆಯೋಜಿಸಲಾಗಿದೆ.

ಸುಮಾರು 1000 ಕ್ಕಿಂತಲೂ ಅಧಿಕ ಮಹಿಳೆಯರು ಭಾಗವಹಿಸುವ ನಿರೀಕ್ಷೆ ಇದೆ. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಚಿಂತನೆ, ಸಾಮಾಜಿಕ ಸಾಮರಸ್ಯ, ಮಹಿಳಾ ಸುರಕ್ಷತೆ, ಕೃಷಿ ಇನ್ನಿತರ ವಿಚಾರಗಳಲ್ಲಿ ಮಹಿಳೆಯರ ಪಾತ್ರದ ಸಂವಾದವನ್ನು ಏರ್ಪಡಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಕೇಶವ ಸ್ಮೃತಿ ಸಂವರ್ಧನ ಸಮಿತಿ (ರಿ) ಟ್ರಸ್ಟಿ ಗಜಾನನ ಪೈ, ಸಂಚಾಲಕಿ ತೇಜಸ್ವಿನಿ, ಸಹ ಸಂಚಾಲಕಿ ವಿದ್ಯಾಗೌರಿ, ಸ್ಬರ್ಣೋದ್ಯಮಿ ರಾಜೀ ಬಲರಾಮ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments