ADGP ಅಲೋಕ್​ ಕುಮಾರ್​ಗೆ ಬೆದರಿಕೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇದೀಗ ಆರೋಪಿ ಶಾರೀಕ್​​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಮತ್ತೊಂದು ದಾಳಿಯ ಎಚ್ಚರಿಕೆ ನೀಡಿದೆ.

ಇನ್ನು ಈ ಹೇಳಿಕೆಯಲ್ಲಿ ಎಡಿಜಿಪಿ ಅಲೋಕ್​ ಕುಮಾರ್​ಗೂ  ಎಚ್ಚರಿಕೆ ನೀಡಿದ್ದು, ಶಾರೀಕ್​ ಬಂಧಿಸಿ ಖುಷಿಪಡುತ್ತಿದ್ದೀರಿ, ಇದು ಶಾಶ್ವತವಲ್ಲ. ನೀವು ನಿಮ್ಮ ಫಲವನ್ನು ಶೀಘ್ರದಲ್ಲೇ ಪಡೆಯುತ್ತೀರಿ. ನೀವು ನಮ್ಮ ದೃಷ್ಟಿಯಲ್ಲೇ ಇದ್ದೀರಿ, ನಿಮ್ಮನ್ನು ನಾವು ತಲುಪುತ್ತೇವೆ. ಆದರೆ ಯಾವಾಗ ಅನ್ನೋದು ಮುಖ್ಯವಲ್ಲ ಎಂದು ಐಆರ್​​ಸಿ ಎಡಿಜಿಪಿ ಅಲೋಕ್​ ಕುಮಾರ್​ಗೆ ಬೆದರಿಕೆ ಸಂದೇಶ ನೀಡಿದೆ.

Related Posts

Leave a Reply

Your email address will not be published.