ಶ್ರೀನಿವಾಸ್ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ & ಟೂರಿಸಂ ಇದರ ಮೂಲಕ ಆನ್ಲೈನ್ ಅಡುಗೆ ಸ್ಪರ್ಧೆ “ಉಪಹಾರ ಮತ್ತು ಅದರ ಸಂಬಂಧಿತ ಭಕ್ಷ್ಯಗಳ ಪಟ್ಟಿ”ಯ ಸ್ಪರ್ಧೆಯನ್ನು ಆಯೋಜನೆ ಮಾಡಿದ್ದಾರೆ. ನಗರದ ಪಾಂಡೇಶ್ವರದಲ್ಲಿರುವ ಶ್ರೀನಿವಾಸ್ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್ನ ಶ್ರೀನಿವಾಸ ಯೂನಿವರ್ಸಿಟಿ ಕಾಲೇಜ್ ಆಫ್ ಹೋಟೆಲ್
ಕಡಬ :ಬಲ್ಯ ಸಮೀಪ ಇಂದು ಬೆಳಿಗ್ಗೆ ಅಲಂಕಾರಿನಿಂದ ಕಡಬಕ್ಕೆ ಬರುತ್ತಿದ್ದ ಸ್ಕೂಟಿಗೆ ಬಲ್ಯ ಸಮೀಪ ಓಮಿನಿ ಮಾರುತಿ ಕಾರೊಂದು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರರಿಬ್ಬರಿಗೂ ಗಾಯಗಳಾಗಿದ್ದು ಬೈಕ್ ಸವಾರರನ್ನು ಪ್ರಾಥಮಿಕ ಚಿಕಿತ್ಸೆಗೆ ಕಡಬ ಸರ್ಕಾರಿ ಆಸ್ಪತ್ರಗೆ ಕರೆದೊಯ್ಯಲಾಗಿದೆ. ಬೈಕ್ ಸವಾರರೊಬ್ಬರನ್ನು ಅಲಂಕಾರು ನಿವಾಸಿ ದೀಕ್ಷಿತ್ ಎಂದು ಗುರುತಿಸಲಾಗಿದೆ. ಡಿಕ್ಕಿ ಹೊಡೆದಿರುವ ಓಮಿನಿ ಕಾರು ಕಡಬದಿಂದ ಕುಂತೂರು ಕಡೆಗೆ
ಕೇರಳದಿಂದ ಜಿಲ್ಲೆಯ ಗಡಿ ಭಾಗಗಳ ಮೂಲಕ ಜಿಲ್ಲೆಗೆ ಸಂಚರಿಸುವವರಿಗೆ ಜೂ. 29ರಿಂದ ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ. ತಲಪಾಡಿ ಚೆಕ್ಪೋಸ್ಟ್ನಲ್ಲಿ ಇಂದು ತಪಾಸಣೆ ನಡೆಸಿದ ಬಳಿಕ ಅವರು ಈ ಮಾಹಿತಿಯನ್ನು ನೀಡಿದ್ದಾರೆ. ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ಡೆಲ್ಟಾ ವೇರಿಯಂಟ್ ಕೋವಿಡ್ ಪತ್ತೆಯಾಗಿರುವ ಸಂಶಯದ ಮೇರೆಗೆ ಕೇರಳ ಗಡಿಯನ್ನು
ಸಿಂಗಾಪುರ ದೇಶವು ಕೊರೋನಾವನ್ನು ಸಂಪೂರ್ಣ ನಿಯಂತ್ರಿಸುವ ಬಗ್ಗೆ ಆದ್ಯತೆ ನೀಡುವ ಬದಲು ಕೊರೋನಾದೊಂದಿಗೆ ಬದುಕುವ ಬಗ್ಗೆ ಅಧಿಕೃತ ನಿರ್ಧಾರಕ್ಕೆ ಬಂದಿದೆ.ಕೊರೋನಾಗೆ ಸಂಬಧಿಸಿದಂತೆ ಇದುವರೆಗೆ ಜಾರಿಯಲ್ಲಿದ್ದ ಎಲ್ಲಾ ನಿಯಾಮವಳಿಗಳನ್ನು ತೆರವುಗೊಳಿಸಲು ಸಿಂಗಾಪುರ ನಿರ್ಧರಿಸಿದೆ. ಇನ್ನು ಮುಂದೆ ಕೊರೋನಾ ಪ್ರಕರಣವನ್ನು ಸಂಪೂರ್ಣ ಶೂನ್ಯವಾಗಿರುವ ಬಗ್ಗೆ ನಮ್ಮ ಆದ್ಯತೆ ಇರುವುದಿಲ್ಲ, ಬದಲಿಗೆ ಕೊರೋನಾದೊಂದಿಗೆ ಬದುಕುವುದು ನಮ್ಮ ಆದ್ಯತೆಯಾಗಲಿದೆ ಎಂದು ಸಿಂಗಾಪುರದ
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್ ಕುಮಾರ್ ಕಟಿಲ್ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್ ಕುಮಾರ್(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್ ಕುಮಾರ್ ಕಟೀಲ್, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ.
ಕಳೆದ ಎರಡು ವಾರದ ಹಿಂದೆ ಸುರಿದ ಮಳೆಯಿಂದಾಗಿ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರಿನ ಕಲ್ಪರ್ಪೆ ತ್ಯಾಜ್ಯ ಸಂಗ್ರಹ ಕೇಂದ್ರದಲ್ಲಿದ್ದ ತ್ಯಾಜ್ಯ ತುಂಬಿದ ಚೀಲಗಳು ತೋಡಿನ ಮೂಲಕ ಬಂದು ಪಯಶ್ವಿನಿ ನದಿಯನ್ನು ಸೇರಿತ್ತು. ಈ ಬಗ್ಗೆ ಅಲ್ಲಿಯ ನಿವಾಸಿಗಳು ಸಾಂಕ್ರಾಮಿಕ ರೋಗದ ಭೀತಿಯಲ್ಲಿದ್ದರು. ಈ ಬಗ್ಗೆ ನಗರ ಪಂಚಾಯತ್ಗೆ ದೂರು ನೀಡಿದ್ದರೂ ಯಾವುದೇ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಇದೀಗ ಶ್ರೀ ವನದುರ್ಗಾ ದೈವಸ್ಥಾನ ಕಲ್ಚರ್ಪೆ ಸಮಿತಿಯವರು ತೋಡಿನಲ್ಲಿ
ಪುತ್ತೂರು: ನಾಡಪ್ರಭು ಕೆಂಪೇಗೌಡರ ಹೆಸರಿನ ಜೊತೆಗೆ ಅವರ ಸಾಧನೆಗೂ ಬಹಳ ಮಹತ್ವವಿದ್ದು, ಅವರ ದೂರದೃಷ್ಟಿ, ಜನಪರ ಚಿಂತನೆ ಎಲ್ಲರಿಗೂ ಮಾದರಿಯಾಗಿದೆ. ಬೆಂಗಳೂರನ್ನು ವಾಣಿಜ್ಯ ಕೇಂದ್ರವನ್ನಾಗಿ ಪರಿವರ್ತಿಸಿದ ಕೆಂಪೇ ಗೌಡರು ಕರ್ನಾಟಕವನ್ನು ವಿಶ್ವದಾದ್ಯಂತ ಗುರುತಿಸುವಂತೆ ಮಾಡಿದ್ದಾರೆ ಎಂದು ಪುತ್ತೂರು ಉಪವಿಭಾಗದ ಸಹಾಯಕ ಕಮೀಷನರ್ ಡಾ. ಯತೀಶ್ ಉಳ್ಳಾಲ್ ಹೇಳಿದರು.ಅವರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸೋಮವಾರ ಪುತ್ತೂರಿನ ಮಿನಿವಿಧಾನ ಸೌಧದ
ಪುತ್ತೂರು: ಕುಡಿಯುವ ನೀರು ಯೋಜನೆಗಾಗಿ ಸರ್ಕಾರವು ಸಾವಿರಾರು ಕೋಟಿ ರೂಪಾಯಿ ಖರ್ಚು ಮಾಡುತ್ತಿದೆ. ಆದರೂ ದಿನದ ೨೪ ಗಂಟೆಗಳ ನೀರು ಪೂರೈಕೆ ಕಷ್ಟಸಾಧ್ಯವಾಗುತ್ತಿದೆ. ಈ ನಿಟ್ಟಿನಲ್ಲಿ ಕುಡಿಯುವ ನೀರು ಪಡೆಯುವಲ್ಲಿ ಸ್ವಾವಲಂಭಿಗಳಾಲು ಮಳೆ ನೀರು ಕೊಯ್ಲು ಅನಿವಾರ್ಯವಾಗಿದೆ ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.ಅವರು ಸೋಮವಾರ ಪುತ್ತೂರು ನಗರಸಭೆಯ ವತಿಯಿಂದ ನಡೆಯಲಿರುವ ನೂತನ ಕಚೇರಿ ಕಟ್ಟಡ ಮತ್ತು ಮಳೆ ನೀರು ಕೊಯ್ಲು ಅಳವಡಿಕೆಯ ಕಾಮಗಾರಿಗೆ ಶಿಲನ್ಯಾಸ ನೆರವೇರಿಸಿ
ಕೂಳೂರು ಮೊಗವೀರ ಗ್ರಾಮ ಸಭೆಯ ವತಿಯಿಂದ ಕುಳಾಯಿಯಲ್ಲಿ ಸೋಮವಾರ ಉಚಿತ ಲಸಿಕಾ ಶಿಬಿರವನ್ನು ಆಯೋಜಿಸಲಾಗಿತ್ತು. ಮೀನುಗಾರಿಕೆ, ಬಂದರು ಸಚಿವ ಅಂಗಾರ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಸರಕಾರ ಲಸಿಕೆ ನೀಡಲು ಆದ್ಯತೆಯ ಪಟ್ಟಿ ಮಾಡುವಾಗ ಮೀನುಗಾರ ಸಮುದಾಯವನ್ನು ಸೇರಿಸಬೇಕು ಎಂದು ನಾನು ಸೂಚಿಸಿದ ಮೇರೆಗೆ ಇದೀಗ ಬೇರೆ ಬೇರೆ ಭಾಗಗಳಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದೆ ಎಂದರು. ಕೆಲವೊಂದು ಅಪಪ್ರಚಾರಗಳಿಂದ ಜನ ಲಸಿಕೆ ಪಡೆಯಲು ಹಿಂದೇಟು ಹಾಕಿದರೂ
ಮಂಜೇಶ್ವರ: ಪೊಲೀಸರ ಕಣ್ತಪ್ಪಿಸಿ ಕರ್ನಾಟಕದ ಒಳ ರಸ್ತೆಯಿಂದ ಅಮಿತ ವೇಗದಲ್ಲಿ ಆಗಮಿಸಿದ ಆಟೋ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ ಕುಂಜತ್ತೂರು ರಾಷ್ಟ್ರೀಯ ಹೆದ್ದಾರಿಗೆ ಅಲ್ಪ ಮುಂದೆ ಪಲ್ಟಿಯಾಗಿದೆ. ಚಾಲಕನಿಗೆ ಅಲ್ಪ ಗಾಯವಾಗಿದ್ದರೂ ಇದ್ದಲ್ಲಿಂದ ಎದ್ದು ಪರಾರಿಯಾಗಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇಂದು ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ಕುಂಜತ್ತೂರು ಪದವು ರಸ್ತೆಯಂದ ಮದ್ಯವನ್ನು ಹೇರಿಕೊಂಡು ಆಗಮಿಸಿದ ರಿಕ್ಷಾ ಪಲ್ಟಿಯಾಗಿದೆ. ಬಳಿಕ ಊರವರು


















