Home Articles posted by v4news (Page 176)

 ಅರ್ಕುಳ ಶ್ರೀ ವರದೇಶ್ವರ ದೇವಸ್ಥಾನದ ಡ್ರೈನೇಜ್ ಸಮಸ್ಯೆ: ಶಾಸಕ ಡಾ ವೈ ಭರತ್ ಶೆಟ್ಟಿ ಭೇಟಿ

ಇತಿಹಾಸ ಪ್ರಸಿದ್ಧ ಸುಮಾರು 800 ವರ್ಷಗಳಷ್ಟು ಪ್ರಾಚೀನ ಸ್ವಯಂಭೂ ಅರ್ಕುಳ  ಶ್ರೀವರದೇಶ್ವರ ದೇವಸ್ಥಾನ ಬಳಿ ರೈಲ್ವೆ ಇಲಾಖೆಯವರು ಗೋಡೆಕಟ್ಟುವ ಕಾಮಗಾರಿ ಸಂದರ್ಭದಲ್ಲಿ ದೇವಸ್ಥಾನದ ಡ್ರೈನೇಜ್ ವ್ಯವಸ್ಥೆಗೆ ಲೋಪವಾಗಿತ್ತು. ಇದರ ಪರಿಣಾಮ ದೇವಸ್ಥಾನದ ಅಂಗಣ ತುಂಬಾ ಮಳೆನೀರು ತುಂಬಿಕೊಂಡಿತ್ತು. ಈ ವಿಷಯವನ್ನು ಅರ್ಕುಳ  ಗ್ರಾಮಸ್ಥರು ಶಾಸಕರಾದ ಡಾ ವೈ ಭರತ್

ಕದ್ರಿ ವಾರ್ಡ್‍ನ ಜನತೆಗೆ ಆಹಾರದ ಸಾಮಾಗ್ರಿ ವಿತರಣೆ

ಕದ್ರಿ ವಾರ್ಡಿನ ಕಾರ್ಪೋರೇಟರ್ ಆದ ಕದ್ರಿ ಮನೋಹರ್ ಶೆಟ್ಟಿ ಇವರ ವಿನಂತಿಯ ಮೇರೆಗೆ ಕದ್ರಿ ದಕ್ಷಿಣ 33ನೇ ವಾರ್ಡಿನಲ್ಲಿ ಕೊರೊನಾ ಸಮಯದಲ್ಲಿ ಸಂಕಷ್ಟದಲ್ಲಿ ಇರುವ ಜನರಿಗೆ ಸಹಾಯವಾಗಲೆಂದು ಆಹಾರದ ಕಿಟ್‍ಗಳನ್ನು ಒದಗಿಸಿದರು. ಉದ್ಯಮಿ ಗಣೇಶ್ ಶಿರ್ವ ದುಬಾಯಿ ಇವರ ಸಹಕಾರದೊಂದಿಗೆ ಜೊತೆಯಾಗಿ ಕದ್ರಿ ವಾರ್ಡಿನ ತರಕಾರಿ ವ್ಯಾಪಾರಸ್ಥರಾದ ಸುದೀರ್ ಕದ್ರಿ ಮಾರ್ಕೆಟ್ ಹಾಗೂ ಸುನಿಲ್ ಕೊಟ್ಟಾರಿ ಇವರು ತರಕಾರಿಯ ಕಿಟ್‍ಗಳನ್ನು ಒದಗಿಸಿದರು. ಈ ಸಂದರ್ಭದಲ್ಲಿ ವಾರ್ಡಿನ

ಎಸ್.ಸಿ.ಡಿ.ಸಿಸಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ವತಿಯಿಂದ ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ ಸಮಾರಂಭ ನಗರದ ಕೊಡಿಯಾಲ್ ಬೈಲ್ ನ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ಜರುಗಿತು ಮಂಗಳೂರಿನ ಕೊಡಿಯಾಲ್‍ಬೈಲ್‍ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರಿಗೆ ಆಹಾರದ ಕಿಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀ ನಿವಾಸ ಪೂಜಾರಿ ವಿತರಿಸಿದ್ರು. ಈ ವೇಳೆ ಮಾತನಾಡಿದ ಅವರು,ಕೊರೋನಾ ಸಂಕಷ್ಟದ

ಮರಳು ಮಾಫಿಯಾವೇ ಮರವೂರು ಸೇತುವೆ ಬಿರುಕಿಗೆ ಕಾರಣ: ಅಭಯಚಂದ್ರ ಜೈನ್

ಮರುವೂರು ಸೇತುವೆ ಬಿರುಕು ಬಿಟ್ಟಿರುವುದು ಆಘಾತಕಾರಿ ವಿಚಾರವಾಗಿದೆ. ಮರಳು ಮಾಫಿಯಾವೇ ಈ ಅವಘಡಕ್ಕೆ ಕಾರಣ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್ ಆರೋಪಿಸಿದರು. ಅವರು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಜೆಸಿಬಿ ಮೂಲಕ ಸೇತುವೆ ಸುತ್ತಮುತ್ತ ಹೂಳೆತ್ತುವ ನೆಪದಲ್ಲಿ ಇಲ್ಲಿ ಅವ್ಯಾಹತವಾಗಿ ಮರಳು ಮಾಫಿಯಾ ನಡೆಯುತ್ತಿದೆ. ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳು ಈ ಬಗ್ಗೆ ಮೌನ ವಹಿಸಿರುವುದು ಈ ದುರಂತಕ್ಕೆ ಕಾರಣ ಎಂದು

ಪೆರ್ಲದಲ್ಲಿ ರಿಕ್ಷಾ ಚಾಲಕರಿಗೆ ಉಚಿತ ಪೆಟ್ರೊಲ್/ಡಿಸೇಲ್ ವಿತರಣೆ

ಕೋರೋನ ಮಹಾಮಾರಿಯಿಂದ  ಜಗತ್ತೇ ತತ್ತರಿಸಿದ ಸಂದರ್ಭದಲ್ಲಿ ಲಾಕ್ ಡೌನ್ ಘೊಷಿಸಿದಾಗ ಸಂಕಷ್ಟಕ್ಕೀಡಾದವರ ಸಹಾಯಕ್ಕೆ ಸಮರೋಪಾದಿ ಕಾರ್ಯಗಳು ನಡೆದವು. ಹಲವಾರು ಸಂಘಟನೆಗಳು, ಸಹೃದಯಿಗಳು,ಕೊಡುಗೈ ದಾನಿಗಳು ಸಂತ್ರಸ್ತರ ನೆರವಿಗೆ ಬಂದರು. ಆದರೆ ಇದೇ ಸಂದರ್ಭಕ್ಕನುಗುಣವಾಗಿ ಇಲ್ಲೊಬ್ಬರು ದುಬೈ ಉದ್ಯೋಗಿ ತನ್ನ ಮಾಲೀಕತ್ವದಲ್ಲಿರುವ ಊರಿನ ಪೆಟ್ರೊಲ್ ಬಂಕ್ ಮೂಲಕ ರಿಕ್ಷಾ ಚಾಲಕರಿಗೆ ಉಚಿತ ಪೆಟ್ರೊಲ್/ಡಿಸೇಲ್ ವಿತರಿಸುವ ಮೂಲಕ ರಿಕ್ಷಾ ಚಾಲಕರಿಗೆ ತಮ್ಮ ಕೈಲಾದ ಕೊಡುಗೆ

ಮರವೂರು ಸೇತುವೆಯಲ್ಲಿ ಬಿರುಕು: ಸಂಚಾರ ಸ್ಥಗಿತ

ಮಂಗಳೂರು ನಗರದಿಂದ ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕಟೀಲು ಸಂಪರ್ಕ ಕಲ್ಪಿಸುವ ಮರವೂರು ಸೇತುವೆಯಲ್ಲಿ ಬಿರುಕು ಕಂಡು ಬಂದಿದ್ದು, ಸಂಚಾರ ಸ್ಥಗಿತಗೊಂಡಿದೆ. ಕರಾವಳಿ ಭಾಗದಲ್ಲಿ ಕಳೆದ ಮೂರು ನಾಲ್ಕು ದಿನದಿಂದ ಭಾರೀ ಮಳೆಯಾಗುತ್ತಿದೆ. ನದಿಗಳಲ್ಲಿ ನೀರು ತುಂಬಿ ಹರಿಯುತ್ತಿದೆ. ಮರವೂರು ಸೇತುವೆಯ ಮೊದಲ ಪಿಲ್ಲರ್ ಬಳಿ ಸುಮಾರು ಮೂರು ಅಡಿಗಳಷ್ಟು ಸೇತುವೆ ಕುಸಿದಿದೆ. ಮಂಗಳೂರಿನಿಂದ ಬಜಪೆ ವಿಮಾನ ನಿಲ್ದಾಣ, ಕಟೀಲು ದೇವಸ್ಥಾನ, ಕಿನ್ನಿಗೋಳಿ ಮುಂತಾದ ಕಡೆಗಳಿಗೆ

ಎರ್ಮಾಳಿನ ಅಕ್ರಮ ಮರಳು ಅಡ್ಡೆಗೆ ತಹಶಿಲ್ದಾರ್ ದಾಳಿ

ತೆಂಕ ಎರ್ಮಾಳು ಗ್ರಾ.ಪಂ. ವ್ಯಾಪ್ತಿಯ ಖಾಸಗಿ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾದ ಸುಮಾರು 8೦೦ ಟನ್ ಸಿಲಿಕಾ ಮರಳನ್ನು ಕಾಪು ತಹಶಿಲ್ದಾರ್ ಪ್ರತಿಭಾ ಆರ್. ತಂಡ ದಾಳಿ ನಡೆಸಿ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ಭೂ ಮತ್ತು ಗಣಿ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ. ಗಿರೀಶ್ ಎಂಬಾತ ಪಟ್ಟಾ ಸ್ಥಳದಲ್ಲಿ ಅಕ್ರಮವಾಗಿ ಸಿಲಿಕಾ ಮರಳು ದಾಸ್ತಾನು ಮಾಡಿದ ಬಗ್ಗೆ ಮಾಹಿತಿ ತಿಳಿದ ಕಾಪು ತಹಶಿಲ್ದಾರ್ ತಂಡ ದಾಳಿ ನಡೆಸಿದೆ. ತಂಡದಲ್ಲಿ ಕಾಪು ಆರ್.

ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಬಿಗಿ: ಇಬ್ಬರ ಬಂಧನ

ಡ್ರಗ್ಸ್ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ಮಂಗಳೂರು ಪೊಲೀಸರು ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಒಮನ್ ಪ್ರಜೆ ಹಾಗೂ ಹಿಮಾಚಲ ಪ್ರದೇಶದ ಯುವಕನೊಬ್ಬನನ್ನು ಡ್ರಗ್ಸ್‌ನೊಂದಿಗೆ ಬಂಧಿಸಿದ್ದಾರೆ. ಬಂಧಿತ ಒಮನ್ ಪ್ರಜೆ ಅಹ್ಮದ್ ಮುಸಬಾ ಅಲ್ ಮಹಾಮಾನಿ (34) ಹಾಗೂ ಹಿಮಾಚಲ ಪ್ರದೇಶದ ರಾಮ್ (22) ಎಂದು ಗುರುತಿಸಲಾಗಿದೆ. ಈ ಮಧ್ಯೆ ನಗರದ ಹೊಟೇಲೊಂದರಲ್ಲಿ ಹಿಮಾಚಲ ಪ್ರದೇಶದ ರಾಮ್ ಜತೆ ಬಂಧಿಸಲಾಗಿದ್ದು, ಬಂಧಿತರಿಂದ ಎಂಡಿಎಂಎ ಹಾಗೂ ಗಾಂಜಾ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ವಿಭಿನ್ನ ಪ್ರತಿಭಟನೆ

ಮಳೆಯ ನಡುವೆಯೂ ತೈಲ ಬೆಲೆ ಏರಿಕೆಯನ್ನ ವಿರೋಧಿಸಿ, ಕಾಂಗ್ರೆಸ್ ಕಾರ್ಯಕರ್ತರು ಮಂಗಳೂರಲ್ಲಿ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಹಾಗೂ ಕಾಂಗ್ರೆಸ್ ಮುಖಂಡ ವಿವೇಕ್ ರಾಜ್ ನೇತೃತ್ವದಲ್ಲಿ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಯಿತು. ನಗರದ ಕಾಂಗ್ರೆಸ್ ಕಚೇರಿಯಿಂದ ಮಲ್ಲಿಕಟ್ಟೆಯ ಪ್ರೆಟೋಲ್ ಬಂಕ್‌ನಲ್ಲಿ ಲಾರಿಗೆ ಡಿಸೇಲ್

ಆಶ್ವಾಸನೆಗೆ ಸೀಮಿತವಾಗಿರುವ ಗುಜ್ಜರಕೆರೆ -ಅರೆಕೆರೆ ಬೈಲಿನಲ್ಲಿ ಮತ್ತೆ ಡ್ರೈನೇಜ್ ಸಮಸ್ಯೆ

ಮಳೆಗಾಲ ಆರಂಭವಾಯಿತೆಂದರೆ ಜೆಪ್ಪು ಗುಜ್ಜರಕೆರೆ ಸಮೀಪದ ಅರೆಕೆರೆಬೈಲು ನಿವಾಸಿಗಳ ಸಂಕಷ್ಟ ಹೇಳ ತೀರದು. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಒಂದೆಡೆಯಾದರೆ.. ಅವ್ಯವಸ್ಥಿತ ಚರಂಡಿ ವ್ಯವಸ್ಥೆಯಿಂದ ರಸ್ತೆ ಮೇಲೆ ಡ್ರೈನೇಜ್ ನೀರು ಉಕ್ಕಿ ಹರಿಯುತ್ತಿದೆ. ಮಾತ್ರವಲ್ಲದೆ ಮನೆಗಳಿಗೆ ಕೊಳಚೆ ನೀರು ನುಗ್ಗುವ ಪರಿಸ್ಥಿತಿಯಲ್ಲಿದೆ. ಈ ಬಗ್ಗೆ ಒಂದು ವರದಿ. ಹಲವು ದಶಕಗಳಿಂದ ಈ ಸಮಸ್ಯೆ ವಿಪರೀತವಾಗಿ ಬೆಳೆಯುತ್ತಿದ್ದು, ಇಲ್ಲಿಯವರೆಗೆ ಇದಕ್ಕೆ ಪರಿಹಾರ